Homeಮುಖಪುಟಪತ್ನಿಗೆ ಕಿರುಕುಳ: ನವಾಜುದ್ದೀನ್ ಸಿದ್ದಿಕಿ ಮತ್ತು ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು!

ಪತ್ನಿಗೆ ಕಿರುಕುಳ: ನವಾಜುದ್ದೀನ್ ಸಿದ್ದಿಕಿ ಮತ್ತು ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು!

ಈ ಕಿರುಕುಳದ ವಿಷಯವನ್ನು ಕುಟುಂಬಕ್ಕೆ ತಿಳಿಸಿದಾಗ, "ಈ ವಿಷಯವನ್ನು ಕುಟುಂಬದೊಳಗಡೆಯೇ ಬಗೆಹರಿಸಿಕೊಳ್ಳೋಣ, ಸುಮ್ಮನಿರು" ಎಂದು ಹೇಳಿದ್ದರೆಂದೂ ಆರೋಪಿಸಿದ್ದಾರೆ.

- Advertisement -
- Advertisement -

ನವಾಜುದ್ದೀನ್ ಸಿದ್ದಿಕಿ ಅವರಿಂದ ಬೇರೆಯಾಗಿರುವ ಅವರ ಪತ್ನಿ ಆಲಿಯಾ, ತನ್ನ ಪತಿ ಮತ್ತು ಪತಿಯ ಕುಟುಂಬದ ಸದಸ್ಯರ ವಿರುದ್ಧ ನೀಡಲಾಗಿದ್ದ ಕಿರುಕುಳದ ದೂರಿಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆಲಿಯಾ, ಮುಂಬೈನ ಬುಧಾನಾ ಪೊಲೀಸ್ ಠಾಣೆಗೆ ಬಂದು ತಾವು ನೀಡಿರುವ ದೂರಿನಲ್ಲಿನ ಆರೋಪವನ್ನು ದೃಢೀಕರಿಸಿದ್ದಾರೆ ಎಂದು ಠಾಣಾಧಿಕಾರಿ ಕುಶಾಲ್ಪಾಲ್ ಹೇಳಿದರು.

“ಜುಲೈ 27 ರಂದು ಮುಂಬೈ ಪೊಲೀಸ್ ಠಾಣೆಯಲ್ಲಿ ಆಕೆ ದೂರು ನೀಡಿದ್ದು, ಅಲ್ಲಿಯೇ ಎಫ್‌ಐಆರ್ ದಾಖಲಿಸಿದ್ದರು. ಆದರೆ ಅಪರಾದ ನಡೆದಿದೆ ಎಂದು ಆರೋಪಿಸಲಾದ ಸ್ಥಳ ನಮ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದುದರಿಂದ, ಈ ಪ್ರಕರಣವನ್ನು ಬುಧಾನಾ ಪೊಲೀಸ್ ಠಾಣೆಗೆ ರವಾನಿಸಲಾಗಿದೆ” ಎಂದು ಠಾಣಾಧಿಕಾರಿ ಹೇಳಿದರು.

2012 ರಲ್ಲಿ ನವಾಜುದ್ದೀನ್ ಸಿದ್ದಿಕಿಯವರ ಸಹೋದರ ಮಿನ್ಹಾಜುದ್ದೀನ್ ಸಿದ್ದಿಕಿ ತನಗೆ ಕಿರುಕುಳ ನೀಡಿದ್ದರು ಎಂದು ಮಾಡಿದ್ದ ಆರೋಪವನ್ನು ಪುನರುಚ್ಚರಿಸಿ, ತಮ್ಮ ಹೇಳಿಕೆಯನ್ನು ನೀಡಿದ್ದಾರೆ ಎಂದು ಠಾಣಾಧಿಕಾರಿ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಕಿರುಕುಳದ ವಿಷಯವನ್ನು ಕುಟುಂಬಕ್ಕೆ ತಿಳಿಸಿದಾಗ, “ಈ ವಿಷಯವನ್ನು ಕುಟುಂಬದೊಳಗಡೆಯೇ ಬಗೆಹರಿಸಿಕೊಳ್ಳೋಣ, ಸುಮ್ಮನಿರು” ಎಂದು ಹೇಳಿದ್ದರೆಂದೂ ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ ಕಾರ್ಯದರ್ಶಿಗಳ ಬದಲಾವಣೆ ಪರ್ವ: ರಾಜ್ಯ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ

ಕೊರೊನಾ ಲಾಕ್‌ಡೌನ್ ಕಾರಣದಿಂದ ನವಾಜುದ್ದೀನ್ ಸಿದ್ದಿಕಿ ಮುಂಬೈಯಿಂದ ಬುಧಾನಾದಲ್ಲಿರುವ ತನ್ನ ಸ್ವಂತ ಸ್ಥಳಕ್ಕೆ ಮರಳಿ, ಅಂದಿನಿಂದ ಅಲ್ಲಿಯೇ ವಾಸಿಸುತ್ತಿದ್ದಾರೆ.

ಆದಾಗ್ಯೂ, ಅವರ ಕುಟುಂಬ ಮೂಲಗಳ ಪ್ರಕಾರ, “ನವಾಜುದ್ದೀನ್ ಸಿದ್ದಿಕಿ ತನ್ನ ನಿವಾಸದಲ್ಲಿ ಇರಲಿಲ್ಲ. ಅಲಿಯಾ ತನ್ನ ಹೇಳಿಕೆಯನ್ನು ದಾಖಲಿಸಲು ಪೊಲೀಸ್ ಠಾಣೆಗೆ ಬಂದಾಗ ಆತ ಡೆಹ್ರಾಡೂನ್‌ನಲ್ಲಿದ್ದನು” ಎಂದು ಹೇಳಿದ್ದಾರೆ.

“ಆಕೆ ನಮ್ಮಲ್ಲಿ ಯಾರನ್ನೂ ಭೇಟಿಯಾಗಲು ಮನೆಗೆ ಬಂದಿಲ್ಲ” ಎಂದು ಸಿದ್ದಿಕಿಯ ಕುಟುಂಬ ಸದಸ್ಯರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದರು.

2009ರಲ್ಲಿ ನವಾಜುದ್ದೀನ್ ಸಿದ್ದಿಕಿ ಮತ್ತು ಆಲಿಯಾ ಸಿದ್ದಿಕಿ ವಿವಾಹವಾಗಿದ್ದರು. ಅವರಿಗೆ ಶೋರಾ ಮತ್ತು ಯಾನಿ ಎಂಬ ಇಬ್ಬರು ಮಕ್ಕಳಿದ್ದಾರೆ.

ಇತ್ತೀಚೆಗೆ ಸಿದ್ದಿಕಿಯವರೊಂದಿಗಿನ ವೈವಾಹಿಕ ಜೀವನವನ್ನು ಕೊನೆಗೊಳಿಸಿಕೊಳ್ಳುವ ಸಲುವಾಗಿ ವಿಚ್ಚೇದನ ನೋಟೀಸ್ ಅನ್ನೂ ಸಹ ನೀಡಿದ್ದರು.

ಕಳೆದ ಜೂನ್ ತಿಂಗಳಿನಲ್ಲಿ, “ಸಿದ್ದಿಕಿಯವರ ಸಂಬಂಧಿಯೊಬ್ಬರು ತಮ್ಮ ಮೇಲೆ ಕುಟುಂಬದೊಳಗಿನವರಿಂದ ಲೈಂಗಿಕ ಕಿರುಕುಳ ನಡೆದಿತ್ತೆಂದು” ದೆಹಲಿಯಲ್ಲಿ ದೂರು ನೀಡಿದ್ದಾಗ, ಆಲಿಯಾ ಟ್ವೀಟ್ ಮಾಡಿ, “ಇದು ಕೇವಲ ಆರಂಭ ಮಾತ್ರ. ಈಗಾಗಲೇ ನನಗೆ ತುಂಬಾ ಸಹಾಯ ಮಾಡಿರುವುದಕ್ಕೆ ದೇವರಿಗೆ ಧನ್ಯವಾದಗಳು. ಬಹಿರಂಗಗೊಳ್ಳಬೇಕಿರುವುದು ಇನ್ನೂ ಸಾಕಷ್ಟಿದೆ. ನನ್ನಂತೆಯೇ ಮೌನದಲ್ಲಿಯೇ ಸಂಕಟ ಅನುಭವಿಸುತ್ತಿರುವವಳು ಜಗತ್ತಿನಲ್ಲಿ ನಾನು ಮಾತ್ರವಲ್ಲ. ನೋಡೋಣ ಇನ್ನೂ ಎಷ್ಟುದಿನ ಸತ್ಯವನ್ನು ಹಣದಿಂದ ಕೊಂಡುಕೊಳ್ಳುತ್ತಾರೆ ಎಂಬುದನ್ನು” ಎಂದು ಹೇಳಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿತ್ತು.


ಇದನ್ನೂ ಓದಿ: ಇಂದು ರಿಯಾ ಇರುವ ಜಾಗದಲ್ಲಿ ನಾಳೆ ನಾವು-ನೀವೂ ಇರಬಹುದು.. ಮರೆಯಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...