Homeಮುಖಪುಟಪತ್ನಿಗೆ ಕಿರುಕುಳ: ನವಾಜುದ್ದೀನ್ ಸಿದ್ದಿಕಿ ಮತ್ತು ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು!

ಪತ್ನಿಗೆ ಕಿರುಕುಳ: ನವಾಜುದ್ದೀನ್ ಸಿದ್ದಿಕಿ ಮತ್ತು ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು!

ಈ ಕಿರುಕುಳದ ವಿಷಯವನ್ನು ಕುಟುಂಬಕ್ಕೆ ತಿಳಿಸಿದಾಗ, "ಈ ವಿಷಯವನ್ನು ಕುಟುಂಬದೊಳಗಡೆಯೇ ಬಗೆಹರಿಸಿಕೊಳ್ಳೋಣ, ಸುಮ್ಮನಿರು" ಎಂದು ಹೇಳಿದ್ದರೆಂದೂ ಆರೋಪಿಸಿದ್ದಾರೆ.

- Advertisement -
- Advertisement -

ನವಾಜುದ್ದೀನ್ ಸಿದ್ದಿಕಿ ಅವರಿಂದ ಬೇರೆಯಾಗಿರುವ ಅವರ ಪತ್ನಿ ಆಲಿಯಾ, ತನ್ನ ಪತಿ ಮತ್ತು ಪತಿಯ ಕುಟುಂಬದ ಸದಸ್ಯರ ವಿರುದ್ಧ ನೀಡಲಾಗಿದ್ದ ಕಿರುಕುಳದ ದೂರಿಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆಲಿಯಾ, ಮುಂಬೈನ ಬುಧಾನಾ ಪೊಲೀಸ್ ಠಾಣೆಗೆ ಬಂದು ತಾವು ನೀಡಿರುವ ದೂರಿನಲ್ಲಿನ ಆರೋಪವನ್ನು ದೃಢೀಕರಿಸಿದ್ದಾರೆ ಎಂದು ಠಾಣಾಧಿಕಾರಿ ಕುಶಾಲ್ಪಾಲ್ ಹೇಳಿದರು.

“ಜುಲೈ 27 ರಂದು ಮುಂಬೈ ಪೊಲೀಸ್ ಠಾಣೆಯಲ್ಲಿ ಆಕೆ ದೂರು ನೀಡಿದ್ದು, ಅಲ್ಲಿಯೇ ಎಫ್‌ಐಆರ್ ದಾಖಲಿಸಿದ್ದರು. ಆದರೆ ಅಪರಾದ ನಡೆದಿದೆ ಎಂದು ಆರೋಪಿಸಲಾದ ಸ್ಥಳ ನಮ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದುದರಿಂದ, ಈ ಪ್ರಕರಣವನ್ನು ಬುಧಾನಾ ಪೊಲೀಸ್ ಠಾಣೆಗೆ ರವಾನಿಸಲಾಗಿದೆ” ಎಂದು ಠಾಣಾಧಿಕಾರಿ ಹೇಳಿದರು.

2012 ರಲ್ಲಿ ನವಾಜುದ್ದೀನ್ ಸಿದ್ದಿಕಿಯವರ ಸಹೋದರ ಮಿನ್ಹಾಜುದ್ದೀನ್ ಸಿದ್ದಿಕಿ ತನಗೆ ಕಿರುಕುಳ ನೀಡಿದ್ದರು ಎಂದು ಮಾಡಿದ್ದ ಆರೋಪವನ್ನು ಪುನರುಚ್ಚರಿಸಿ, ತಮ್ಮ ಹೇಳಿಕೆಯನ್ನು ನೀಡಿದ್ದಾರೆ ಎಂದು ಠಾಣಾಧಿಕಾರಿ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಕಿರುಕುಳದ ವಿಷಯವನ್ನು ಕುಟುಂಬಕ್ಕೆ ತಿಳಿಸಿದಾಗ, “ಈ ವಿಷಯವನ್ನು ಕುಟುಂಬದೊಳಗಡೆಯೇ ಬಗೆಹರಿಸಿಕೊಳ್ಳೋಣ, ಸುಮ್ಮನಿರು” ಎಂದು ಹೇಳಿದ್ದರೆಂದೂ ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ ಕಾರ್ಯದರ್ಶಿಗಳ ಬದಲಾವಣೆ ಪರ್ವ: ರಾಜ್ಯ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ

ಕೊರೊನಾ ಲಾಕ್‌ಡೌನ್ ಕಾರಣದಿಂದ ನವಾಜುದ್ದೀನ್ ಸಿದ್ದಿಕಿ ಮುಂಬೈಯಿಂದ ಬುಧಾನಾದಲ್ಲಿರುವ ತನ್ನ ಸ್ವಂತ ಸ್ಥಳಕ್ಕೆ ಮರಳಿ, ಅಂದಿನಿಂದ ಅಲ್ಲಿಯೇ ವಾಸಿಸುತ್ತಿದ್ದಾರೆ.

ಆದಾಗ್ಯೂ, ಅವರ ಕುಟುಂಬ ಮೂಲಗಳ ಪ್ರಕಾರ, “ನವಾಜುದ್ದೀನ್ ಸಿದ್ದಿಕಿ ತನ್ನ ನಿವಾಸದಲ್ಲಿ ಇರಲಿಲ್ಲ. ಅಲಿಯಾ ತನ್ನ ಹೇಳಿಕೆಯನ್ನು ದಾಖಲಿಸಲು ಪೊಲೀಸ್ ಠಾಣೆಗೆ ಬಂದಾಗ ಆತ ಡೆಹ್ರಾಡೂನ್‌ನಲ್ಲಿದ್ದನು” ಎಂದು ಹೇಳಿದ್ದಾರೆ.

“ಆಕೆ ನಮ್ಮಲ್ಲಿ ಯಾರನ್ನೂ ಭೇಟಿಯಾಗಲು ಮನೆಗೆ ಬಂದಿಲ್ಲ” ಎಂದು ಸಿದ್ದಿಕಿಯ ಕುಟುಂಬ ಸದಸ್ಯರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದರು.

2009ರಲ್ಲಿ ನವಾಜುದ್ದೀನ್ ಸಿದ್ದಿಕಿ ಮತ್ತು ಆಲಿಯಾ ಸಿದ್ದಿಕಿ ವಿವಾಹವಾಗಿದ್ದರು. ಅವರಿಗೆ ಶೋರಾ ಮತ್ತು ಯಾನಿ ಎಂಬ ಇಬ್ಬರು ಮಕ್ಕಳಿದ್ದಾರೆ.

ಇತ್ತೀಚೆಗೆ ಸಿದ್ದಿಕಿಯವರೊಂದಿಗಿನ ವೈವಾಹಿಕ ಜೀವನವನ್ನು ಕೊನೆಗೊಳಿಸಿಕೊಳ್ಳುವ ಸಲುವಾಗಿ ವಿಚ್ಚೇದನ ನೋಟೀಸ್ ಅನ್ನೂ ಸಹ ನೀಡಿದ್ದರು.

ಕಳೆದ ಜೂನ್ ತಿಂಗಳಿನಲ್ಲಿ, “ಸಿದ್ದಿಕಿಯವರ ಸಂಬಂಧಿಯೊಬ್ಬರು ತಮ್ಮ ಮೇಲೆ ಕುಟುಂಬದೊಳಗಿನವರಿಂದ ಲೈಂಗಿಕ ಕಿರುಕುಳ ನಡೆದಿತ್ತೆಂದು” ದೆಹಲಿಯಲ್ಲಿ ದೂರು ನೀಡಿದ್ದಾಗ, ಆಲಿಯಾ ಟ್ವೀಟ್ ಮಾಡಿ, “ಇದು ಕೇವಲ ಆರಂಭ ಮಾತ್ರ. ಈಗಾಗಲೇ ನನಗೆ ತುಂಬಾ ಸಹಾಯ ಮಾಡಿರುವುದಕ್ಕೆ ದೇವರಿಗೆ ಧನ್ಯವಾದಗಳು. ಬಹಿರಂಗಗೊಳ್ಳಬೇಕಿರುವುದು ಇನ್ನೂ ಸಾಕಷ್ಟಿದೆ. ನನ್ನಂತೆಯೇ ಮೌನದಲ್ಲಿಯೇ ಸಂಕಟ ಅನುಭವಿಸುತ್ತಿರುವವಳು ಜಗತ್ತಿನಲ್ಲಿ ನಾನು ಮಾತ್ರವಲ್ಲ. ನೋಡೋಣ ಇನ್ನೂ ಎಷ್ಟುದಿನ ಸತ್ಯವನ್ನು ಹಣದಿಂದ ಕೊಂಡುಕೊಳ್ಳುತ್ತಾರೆ ಎಂಬುದನ್ನು” ಎಂದು ಹೇಳಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿತ್ತು.


ಇದನ್ನೂ ಓದಿ: ಇಂದು ರಿಯಾ ಇರುವ ಜಾಗದಲ್ಲಿ ನಾಳೆ ನಾವು-ನೀವೂ ಇರಬಹುದು.. ಮರೆಯಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...