Homeಮುಖಪುಟರಾಜಕೀಯ ಪ್ರವೇಶದ ಕುರಿತು ಹರ್ಭಜನ್‌ ಸಿಂಗ್‌ ಸುಳಿವು

ರಾಜಕೀಯ ಪ್ರವೇಶದ ಕುರಿತು ಹರ್ಭಜನ್‌ ಸಿಂಗ್‌ ಸುಳಿವು

- Advertisement -
- Advertisement -

ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, ಅವರು ಚುನಾವಣಾ ರಾಜಕೀಯಕ್ಕೆ ಸೇರಬಹುದು ಎಂಬ ವರದಿಗಳಾಗುತ್ತಿದೆ. ಇದರ ನಡುವೆ ಪ್ರತಿಕ್ರಿಯೆ ನೀಡಿರುವ ಹರ್ಭಜನ್‌, “ಹಲವಾರು ರಾಜಕೀಯ ಪಕ್ಷಗಳವರು ಆಫರ್‌ಗಳನ್ನು ನೀಡುತ್ತಿದ್ದಾರೆ. ರಾಜಕೀಯ ಅಥವಾ ಬೇರೆ ಯಾವುದಾದರೂ ರೀತಿಯಲ್ಲಿ ಪಂಜಾಬ್‌ಗೆ ಸೇವೆ ಸಲ್ಲಿಸುತ್ತೇನೆ” ಎಂದಿದ್ದಾರೆ.

“ಭವಿಷ್ಯದ ಯೋಜನೆ ಕುರಿತು ಯೋಚಿಸಿಲ್ಲ. ನಾನು ಕ್ರಿಕೆಟ್‌ನೊಂದಿಗೆ ಸಂಪರ್ಕದಲ್ಲಿರುತ್ತೇನೆ. ಯಾಕೆಂದರೆ ಕ್ರಿಕೆಟ್‌ನಿಂದಾಗಿ ಜನರು ನನ್ನನ್ನು ಗುರುತಿಸಿದ್ದಾರೆ. ನನ್ನ ರಾಜಕೀಯ ವೃತ್ತಿಜೀವನವನ್ನು ನಿರ್ಧರಿಸಿದಾಗ ನಾನು ಎಲ್ಲರಿಗೂ ತಿಳಿಸುತ್ತೇನೆ” ಎಂದು ಹೇಳಿದ್ದಾರೆ.

“ನನಗೆ ಎಲ್ಲಾ ಪಕ್ಷದ ರಾಜಕಾರಣಿಗಳು ಗೊತ್ತು. ನಾನು ಯಾವುದೇ ಪಕ್ಷ ಸೇರುವುದಾದರೆ ಮೊದಲೇ ಘೋಷಣೆ ಮಾಡುತ್ತೇನೆ. ರಾಜಕೀಯ ಅಥವಾ ಯಾವುದಾದರೂ ರೀತಿಯಲ್ಲಿ ಪಂಜಾಬ್‌ಗೆ ಸೇವೆ ಸಲ್ಲಿಸುತ್ತೇನೆ. ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ” ಎಂದು ಹರ್ಭಜನ್‌ ಪ್ರತಿಕ್ರಿಯೆ ನೀಡಿದ್ದಾರೆ.

“ನಿಜ ಹೇಳಬೇಕೆಂದರೆ, ನಾನು ಅದರ ಬಗ್ಗೆ ಯೋಚಿಸಲಿಲ್ಲ, ನಾನು ರಾಜಕೀಯ ಸೇರಲು ವಿವಿಧ ಪಕ್ಷಗಳಿಂದ ಆಫರ್‌ಗಳಿವೆ … ಆದರೆ ನಾನು ತುಂಬಾ ಬುದ್ಧಿವಂತಿಕೆಯಿಂದ ಕುಳಿತು ಯೋಚಿಸಬೇಕಾಗಿದೆ. ಇದು ಬಹುಬೇಡಿಕೆ ಕೆಲಸವಾದ್ದರಿಂದ ನಿರ್ಧಾರ ಸುಲಭದ್ದಲ್ಲ. ನಾನು ಅರೆಮನಸ್ಸಿನಿಂದ ರಾಜಕಾರಣ ಮಾಡಲು ಬಯಸುವುದಿಲ್ಲ. ರಾಜಕಾರಣ ಮಾಡಲು ಸಿದ್ಧನಿದ್ದೇನೆ ಎಂದು ಭಾವಿಸಿದ ದಿನ, ನಾನು ರಾಜಕಾರಣಕ್ಕೆ ಹೋಗುತ್ತೇನೆ” ಎಂದಿದ್ದಾರೆ.

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ, ಮಾಜಿ ಕ್ರಿಕೆಟಿಗ ನವಜೋತ್ ಸಿಧು ಅವರು ಹರ್ಭಜನ್‌ ಸಿಂಗ್‌ ಅವರೊಂದಿಗೆ ಫೋಟೋವನ್ನು ಪೋಸ್ಟ್ ಮಾಡಿದ ಬಳಿಕ, ಹರ್ಭಜನ್‌ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಹಲವು ಊಹಾಪೋಹಗಳು ಹರಿದಾಡಿದ್ದವು.

“ಸಾಧ್ಯತೆಗಳಿಂದ ಕೂಡಿರುವ ಚಿತ್ರವಿದು… ಭಜ್ಜಿ, ಮಿನುಗುವ ತಾರೆ” ಎಂದು ಸಿಧು ಬರೆದಿದ್ದರು.

ಸಿಧು ಜೊತೆಗಿನ ಫೋಟೋ ಬಗ್ಗೆ ಹರ್ಭಜನ್‌ ಅವರಲ್ಲಿ ಪ್ರಶ್ನಿಸಿದ್ದಾಗ, “ಇದು ಸಾಂದರ್ಭಿಕ ಭೇಟಿಯಾಗಿದೆ. ಚುನಾವಣೆ ಹತ್ತಿರದಲ್ಲಿದೆ, ಜನರು ಏಕೆ ಊಹಿಸುತ್ತಾರೆ ಎಂದು ನನಗೆ ಅರ್ಥವಾಯಿತು … ಆದರೆ ಏನೂ ಇಲ್ಲ. ನಾನು ರಾಜಕೀಯಕ್ಕೆ ಬಂದರೆ, ನಾನು ಎಲ್ಲರಿಗೂ ತಿಳಿಸುತ್ತೇನೆ” ಎಂದಿದ್ದರು.

2022ರಲ್ಲಿ ನಡೆಯುವ ಪಂಜಾಬ್‌ನ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಹರ್ಭಜನ್ ಮತ್ತು ಭಾರತದ ಮತ್ತೊಬ್ಬ ಮಾಜಿ ಕ್ರಿಕೆಟ್ ತಾರೆ ಯುವರಾಜ್ ಸಿಂಗ್ ಬಿಜೆಪಿಗೆ ಸೇರಬಹುದು ಎಂಬ ವದಂತಿಗಳನ್ನೂ ಹರ್ಭಜನ್‌ ಅಲ್ಲಗಳೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...