Homeಮುಖಪುಟರಾಜಕೀಯ ಪ್ರವೇಶದ ಕುರಿತು ಹರ್ಭಜನ್‌ ಸಿಂಗ್‌ ಸುಳಿವು

ರಾಜಕೀಯ ಪ್ರವೇಶದ ಕುರಿತು ಹರ್ಭಜನ್‌ ಸಿಂಗ್‌ ಸುಳಿವು

- Advertisement -
- Advertisement -

ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, ಅವರು ಚುನಾವಣಾ ರಾಜಕೀಯಕ್ಕೆ ಸೇರಬಹುದು ಎಂಬ ವರದಿಗಳಾಗುತ್ತಿದೆ. ಇದರ ನಡುವೆ ಪ್ರತಿಕ್ರಿಯೆ ನೀಡಿರುವ ಹರ್ಭಜನ್‌, “ಹಲವಾರು ರಾಜಕೀಯ ಪಕ್ಷಗಳವರು ಆಫರ್‌ಗಳನ್ನು ನೀಡುತ್ತಿದ್ದಾರೆ. ರಾಜಕೀಯ ಅಥವಾ ಬೇರೆ ಯಾವುದಾದರೂ ರೀತಿಯಲ್ಲಿ ಪಂಜಾಬ್‌ಗೆ ಸೇವೆ ಸಲ್ಲಿಸುತ್ತೇನೆ” ಎಂದಿದ್ದಾರೆ.

“ಭವಿಷ್ಯದ ಯೋಜನೆ ಕುರಿತು ಯೋಚಿಸಿಲ್ಲ. ನಾನು ಕ್ರಿಕೆಟ್‌ನೊಂದಿಗೆ ಸಂಪರ್ಕದಲ್ಲಿರುತ್ತೇನೆ. ಯಾಕೆಂದರೆ ಕ್ರಿಕೆಟ್‌ನಿಂದಾಗಿ ಜನರು ನನ್ನನ್ನು ಗುರುತಿಸಿದ್ದಾರೆ. ನನ್ನ ರಾಜಕೀಯ ವೃತ್ತಿಜೀವನವನ್ನು ನಿರ್ಧರಿಸಿದಾಗ ನಾನು ಎಲ್ಲರಿಗೂ ತಿಳಿಸುತ್ತೇನೆ” ಎಂದು ಹೇಳಿದ್ದಾರೆ.

“ನನಗೆ ಎಲ್ಲಾ ಪಕ್ಷದ ರಾಜಕಾರಣಿಗಳು ಗೊತ್ತು. ನಾನು ಯಾವುದೇ ಪಕ್ಷ ಸೇರುವುದಾದರೆ ಮೊದಲೇ ಘೋಷಣೆ ಮಾಡುತ್ತೇನೆ. ರಾಜಕೀಯ ಅಥವಾ ಯಾವುದಾದರೂ ರೀತಿಯಲ್ಲಿ ಪಂಜಾಬ್‌ಗೆ ಸೇವೆ ಸಲ್ಲಿಸುತ್ತೇನೆ. ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ” ಎಂದು ಹರ್ಭಜನ್‌ ಪ್ರತಿಕ್ರಿಯೆ ನೀಡಿದ್ದಾರೆ.

“ನಿಜ ಹೇಳಬೇಕೆಂದರೆ, ನಾನು ಅದರ ಬಗ್ಗೆ ಯೋಚಿಸಲಿಲ್ಲ, ನಾನು ರಾಜಕೀಯ ಸೇರಲು ವಿವಿಧ ಪಕ್ಷಗಳಿಂದ ಆಫರ್‌ಗಳಿವೆ … ಆದರೆ ನಾನು ತುಂಬಾ ಬುದ್ಧಿವಂತಿಕೆಯಿಂದ ಕುಳಿತು ಯೋಚಿಸಬೇಕಾಗಿದೆ. ಇದು ಬಹುಬೇಡಿಕೆ ಕೆಲಸವಾದ್ದರಿಂದ ನಿರ್ಧಾರ ಸುಲಭದ್ದಲ್ಲ. ನಾನು ಅರೆಮನಸ್ಸಿನಿಂದ ರಾಜಕಾರಣ ಮಾಡಲು ಬಯಸುವುದಿಲ್ಲ. ರಾಜಕಾರಣ ಮಾಡಲು ಸಿದ್ಧನಿದ್ದೇನೆ ಎಂದು ಭಾವಿಸಿದ ದಿನ, ನಾನು ರಾಜಕಾರಣಕ್ಕೆ ಹೋಗುತ್ತೇನೆ” ಎಂದಿದ್ದಾರೆ.

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ, ಮಾಜಿ ಕ್ರಿಕೆಟಿಗ ನವಜೋತ್ ಸಿಧು ಅವರು ಹರ್ಭಜನ್‌ ಸಿಂಗ್‌ ಅವರೊಂದಿಗೆ ಫೋಟೋವನ್ನು ಪೋಸ್ಟ್ ಮಾಡಿದ ಬಳಿಕ, ಹರ್ಭಜನ್‌ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಹಲವು ಊಹಾಪೋಹಗಳು ಹರಿದಾಡಿದ್ದವು.

“ಸಾಧ್ಯತೆಗಳಿಂದ ಕೂಡಿರುವ ಚಿತ್ರವಿದು… ಭಜ್ಜಿ, ಮಿನುಗುವ ತಾರೆ” ಎಂದು ಸಿಧು ಬರೆದಿದ್ದರು.

ಸಿಧು ಜೊತೆಗಿನ ಫೋಟೋ ಬಗ್ಗೆ ಹರ್ಭಜನ್‌ ಅವರಲ್ಲಿ ಪ್ರಶ್ನಿಸಿದ್ದಾಗ, “ಇದು ಸಾಂದರ್ಭಿಕ ಭೇಟಿಯಾಗಿದೆ. ಚುನಾವಣೆ ಹತ್ತಿರದಲ್ಲಿದೆ, ಜನರು ಏಕೆ ಊಹಿಸುತ್ತಾರೆ ಎಂದು ನನಗೆ ಅರ್ಥವಾಯಿತು … ಆದರೆ ಏನೂ ಇಲ್ಲ. ನಾನು ರಾಜಕೀಯಕ್ಕೆ ಬಂದರೆ, ನಾನು ಎಲ್ಲರಿಗೂ ತಿಳಿಸುತ್ತೇನೆ” ಎಂದಿದ್ದರು.

2022ರಲ್ಲಿ ನಡೆಯುವ ಪಂಜಾಬ್‌ನ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಹರ್ಭಜನ್ ಮತ್ತು ಭಾರತದ ಮತ್ತೊಬ್ಬ ಮಾಜಿ ಕ್ರಿಕೆಟ್ ತಾರೆ ಯುವರಾಜ್ ಸಿಂಗ್ ಬಿಜೆಪಿಗೆ ಸೇರಬಹುದು ಎಂಬ ವದಂತಿಗಳನ್ನೂ ಹರ್ಭಜನ್‌ ಅಲ್ಲಗಳೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...