Homeಮುಖಪುಟಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ: ವಿಡಿಯೋ ಬಿಡುಗಡೆ ಮಾಡಿದ ಕೆನಡಾ ಸುದ್ದಿ ಸಂಸ್ಥೆ

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ: ವಿಡಿಯೋ ಬಿಡುಗಡೆ ಮಾಡಿದ ಕೆನಡಾ ಸುದ್ದಿ ಸಂಸ್ಥೆ

- Advertisement -
- Advertisement -

ಸಿಖ್‌ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಉದ್ದೇಶಿತ ವಿಡಿಯೋ ದೃಶ್ಯಾವಳಿಗಳು ಹೊರಬಿದ್ದಿದೆ. ‘ಪೂರ್ವನಿಯೋಜಿತ ಕೃತ್ಯ’ ಎಂದು ಕೆನಾಡ ಈ ಹಿಂದೆ ಆರೋಪಿಸಿದ್ದ ಪ್ರಕರಣದಲ್ಲಿ  ಹರ್ದೀಪ್ ಸಿಂಗ್ ಮೇಲೆ ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿರುವ ವಿಡಿಯೋವನ್ನು ಕೆನಡಾ ಮೂಲದ ಸಿಬಿಸಿ ನ್ಯೂಸ್ ವರದಿ ಮಾಡಿದೆ.

2020ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಭಯೋತ್ಪಾದಕ ಎಂದು ಘೋಷಿಸಿದದ್ದ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಜೂನ್ 18, 2023ರ ಸಂಜೆ ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿರುವ ಗುರುದ್ವಾರದ ಬಳಿ  ಗುಂಡಿಕ್ಕಿ ಕೊಲ್ಲಲಾಗಿದೆ.

ಹರ್ದೀಪ್ ಸಿಂಗ್  ನಿಜ್ಜರ್‌ ಹತ್ಯೆಯ ವೀಡಿಯೋವನ್ನು ಸ್ವತಂತ್ರವಾಗಿ ಪರಿಶೀಲಿಸಲಾಗಿದೆ ಎಂದು CBC ಸುದ್ದಿ ತಿಳಿಸಿದೆ. ಪೂರ್ವ ನಿಯೋಜಿತ ಎಂದು ವಿವರಿಸಲಾದ ದಾಳಿಯಲ್ಲಿ ಆರು ಮಂದಿ ಭಾಗಿಯಾಗಿದ್ದರು ಮತ್ತು ಎರಡು ವಾಹನಗಳಲ್ಲಿ ಬಂದು ಕೃತ್ಯವನ್ನು ಮಾಡಲಾಗಿದೆ ಎಂದು ವರದಿ ಉಲ್ಲೇಖಿಸಿತ್ತು.

ಗುರುದ್ವಾರದ ಪಾರ್ಕಿಂಗ್ ಸ್ಥಳದಿಂದ ನಿಜ್ಜರ್ ಹೊರಡುವುದನ್ನು ವೀಡಿಯೊ ತೋರಿಸುತ್ತದೆ. ಅವರ ವಾಹನವನ್ನು ತಡೆದು  ಇಬ್ಬರು ವ್ಯಕ್ತಿಗಳು ನಿಜ್ಜರ್‌ಗೆ ಗುಂಡು ಹಾರಿಸಿ ಟೊಯೊಟಾ ಕ್ಯಾಮ್ರಿಯಲ್ಲಿ ತಪ್ಪಿಸಿಕೊಳ್ಳುತ್ತಾರೆ ಎಂದು ಸಿಬಿಸಿ ನ್ಯೂಸ್ ವರದಿ ಮಾಡಿದೆ. ಘಟನೆ ನಡೆದಾಗ ಸಮೀಪದ ಮೈದಾನದಲ್ಲಿ  ಆಡುತ್ತಿದ್ದ ಇಬ್ಬರು ಪ್ರತ್ಯಕ್ಷದರ್ಶಿಗಳು ಗುಂಡಿನ ಸದ್ದು ಕೇಳಿ ಸ್ಥಳಕ್ಕೆ ಓಡಿ ದಾಳಿಕೋರರನ್ನು ಹಿಂಬಾಲಿಸಲು ಪ್ರಯತ್ನಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ಬಗ್ಗೆ ಪ್ರತ್ಯಕ್ಷದರ್ಶಿ ಭೂಪಿಂದರ್ಜಿತ್ ಸಿಂಗ್ ಸಿಧು ಮಾತನಾಡಿದ್ದು, ಇಬ್ಬರು ವ್ಯಕ್ತಿಗಳು ಓಡುವುದನ್ನು ನಾವು ನೋಡಿದ್ದೇವೆ. ನಾವು ಗುಂಡಿನ ಶಬ್ಧ ಕೇಳಿ ಓಡಿ ಬಂದೆವು. ನಿಜ್ಜರ್‌ಗೆ ಸಹಾಯ ಮಾಡುವಂತೆ ನಾನು ಸ್ನೇಹಿತ ಮಲ್ಕಿತ್ ಸಿಂಗ್‌ಗೆ ಹೇಳಿ ಆರೋಪಿಗಳನ್ನು ಬೆನ್ನಟ್ಟಿದ್ದೆ ಎಂದು ಹೇಳಿದ್ದಾರೆ.

ಜೂ.18ರಂದು ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪಂಜಾಬಿ ಪ್ರಾಬಲ್ಯದ ಸರ್ರೆ ನಗರದಲ್ಲಿರುವ ಗುರುನಾನಕ್ ಸಿಖ್ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆ ನಡೆದಿತ್ತು. ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಎಂದು ತಿರಸ್ಕರಿಸಿತ್ತು. ಆ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. ಎರಡೂ ದೇಶಗಳ ರಾಜತಾಂತ್ರಿಕ ಅಧಿಕಾರಿಗಳ ಉಚ್ಛಾಟಣೆಯು ನಡೆದಿತ್ತು. ಭಾರತವು ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಕಳೆದ ತಿಂಗಳು ವೀಸಾ ಸೇವೆಗಳನ್ನು ಭಾರತವು ಪುನರಾರಂಭಿಸಿತ್ತು.

ಇದನ್ನು ಓದಿ: ಕಾಂಗ್ರೆಸ್‌ ಪಕ್ಷದ ಬ್ಯಾಂಕ್ ಖಾತೆಗಳ ವಿರುದ್ಧದ ಕ್ರಮಕ್ಕೆ ತಡೆ ನೀಡಲು ನಿರಾಕರಿಸಿದ ನ್ಯಾಯಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...