Homeಮುಖಪುಟಹರಿದ್ವಾರ: ಮುಸ್ಲಿಂ ವ್ಯಕ್ತಿಯೆಂದು ಭಾವಿಸಿ RSS-ಬಿಜೆಪಿ ಸದಸ್ಯನ ಮೇಲೆ ಹಲ್ಲೆ

ಹರಿದ್ವಾರ: ಮುಸ್ಲಿಂ ವ್ಯಕ್ತಿಯೆಂದು ಭಾವಿಸಿ RSS-ಬಿಜೆಪಿ ಸದಸ್ಯನ ಮೇಲೆ ಹಲ್ಲೆ

- Advertisement -
- Advertisement -

ಮುಸ್ಲಿಂ ವ್ಯಕ್ತಿಯೆಂದು ತಪ್ಪಾಗಿ ಗ್ರಹಿಸಿದ ಹರಿದ್ವಾರ ಕನ್ವರಿಯಾಗಳ ಗುಂಪೊಂದು ಆರೆಸ್ಸೆಸ್- ಬಿಜೆಪಿ ಸದಸ್ಯನನ್ನು ಕಾರಿನಿಂದ ಹೊರಗೆಳೆದು ಹಲ್ಲೆ ನಡೆಸಿರುವ ಘಟನೆ ಹರಿದ್ವಾರ ಜಿಲ್ಲೆಯ ಮಂಗ‌ ನಗರದಲ್ಲಿ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿ ಪ್ರತಾಪ್ ಸಿಂಗ್ (63), ತಾನು ಆರೆಸ್ಸೆಸ್-ಬಿಜೆಪಿ ಸದಸ್ಯ ಎಂದು ಅವರು ಹೇಳಿಕೊಂಡಿದ್ದಾರೆ.

ಪ್ರತಾಪ್ ಸಿಂಗ್ ಅವರ ಕಾರು ವಾಹನವು ಆಕಸ್ಮಿಕವಾಗಿ ಯಾತ್ರಿಗಳು ಪವಿತ್ರ ನೀರನ್ನು ಸಾಗಿಸುವ ಕನ್ವರ್‌ಗೆ ಡಿಕ್ಕಿ ಹೊಡೆದದ್ದೇ ಹಲ್ಲೆಗೆ ಕಾರಣವಾಗಿತ್ತು. ಗಡ್ಡವನ್ನು ಹೊಂದಿದ್ದ ಸಿಂಗ್ ಕಪ್ಪು ಟೋಪಿಯನ್ನು ಧರಿಸಿದ್ದರಿಂದ ಮತ್ತು ಅವರ ಜೊತೆಗೆ ಬುರ್ಕಾ ಧರಿಸಿದ್ದ ಮಹಿಳೆ ಇದ್ದಿದ್ದರಿಂದ ಅವರು ಮುಸ್ಲಿಮ್ ವ್ಯಕ್ತಿಯೆಂದು ಕನ್ವರಿಯಾಗಳು ಭಾವಿಸಿದ್ದರು ಎಂದು ವರದಿಯಾಗಿದೆ.

ಈ ಘಟನೆ ಜು.10ರಂದು ನಡೆದಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಕನ್ವರಿಯಾಗಳು, ಕಾರಿನಲ್ಲಿದ್ದ ಪ್ರತಾಪ್ ಸಿಂಗ್‌ನನ್ನು ಹೊರಗೆಳೆದಿದ್ದಾರೆ, ನಂತರ ಕಾರನ್ನು ಉರುಳಿಸಿ ದೊಣ್ಣೆಗಳಿಂದ ಅದರ ಮೇಲೆ ದಾಳಿ ನಡೆಸುತ್ತಿರುವುದನ್ನೂ ತೋರಿಸಿದೆ.

ಈ ಬಗ್ಗೆ ಮಾತನಾಡಿರುವ ಪ್ರತಾಪ್ ಸಿಂಗ್, ”ನನ್ನೊಂದಿಗಿದ್ದ ಮಹಿಳೆ ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಘಟಕದ ಮಹಿಳೆಯಾಗಿದ್ದು ಆಕೆ ತನ್ನ ಮಗನನ್ನು ಮದರಸಕ್ಕೆ ಬಿಡಲು ನಾನು ಅವರೊಂದಿಗೆ ಹೋಗಿದ್ದೆ. ಮರಳಿ ಬರುವಾಗ ಊಟಕ್ಕೆಂದು ರಸ್ತೆಯ ಬದಿಯಲ್ಲಿ ಕಾರು ನಿಲ್ಲಿಸುವಾಗ ಅಲ್ಲಿ ಏನೂ ಇರಲಿಲ್ಲ ಆದರೆ ನಾನು ಮರಳಿ ಬಂದಾಗ ಕಾರಿನ ಎದುರು ಯಾರೋ ಕಾವಡಿಯನ್ನು ಇರಿಸಿದ್ದರು. ನಾನು ಕಾರನ್ನು ಚಲಾಯಿಸಿದಾಗ ಅದು ಆಕಸ್ಮಿಕಗಾಗಿ ಕಾವಡಿಗೆ ತಾಗಿತ್ತು ನಾನು ಮುಸ್ಲಿಮ್ ಎಂದು ಜರಿದ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದರು. ನಾನು ಹಿಂದು ಮತ್ತು ಆರೆಸ್ಸೆಸ್ ಬಿಜೆಪಿ ಸದಸ್ಯ ಎಂದು ಹೇಳಿಕೊಂಡರೂ ಬಿಡಲಿಲ್ಲ. ಪುಣ್ಯಕ್ಕೆ ಮಹಿಳೆಗೆ ಏನೂ ಮಾಡದೆ ಅಲ್ಲಿಂದ ಕಳುಹಿಸಿದ್ದರು” ಎಂದು ಅವರು ತಿಳಿಸಿದ್ದಾರೆ.

ಬಿಜೆಪಿಯ ರಾಜ್ಯ ಮಾಧ್ಯಮ ಉಸ್ತುವಾರಿ ಮನ್ವೀರ್ ಚೌಹಾಣ್ ಮತ್ತು ಪಕ್ಷದ ಹರಿದ್ವಾರ ಜಿಲ್ಲಾಧ್ಯಕ್ಷ ಸಂದೀಪ್ ಗೋಯಲ್ ಅವರು, ”ಕನ್ವರಿಯಾಗಳು ಮತ್ತು ಬಿಜೆಪಿಯ ಯಾವುದೇ ಸದಸ್ಯರ ನಡುವೆ ವಾಗ್ವಾದ ನಡೆದ ಯಾವುದೇ ಘಟನೆಯ ಬಗ್ಗೆ ನಮಗೆ ತಿಳಿದಿಲ್ಲ” ಎಂದು ಹೇಳಿದರು.

ಕೆಲವು ಸುದ್ದಿವಾಹಿನಿಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಕನ್ವಾರಿಯಾಗಳು, ”ಮುಸ್ಲಿಂ ದಂಪತಿ” ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿಕೊಂಡ ನಂತರ, ಹರಿದ್ವಾರ ಪೊಲೀಸರು ಘಟನೆಯಲ್ಲಿ ಯಾವುದೇ ಕೋಮು ದೃಷ್ಟಿಕೋನವಿಲ್ಲ ಎಂದು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಸಿಂಗ್ ಅವರು ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಧ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 147 (ಗಲಭೆ), 148 (ಗಲಭೆ, ಮಾರಕ ಆಯುಧದಿಂದ ಶಸ್ತ್ರಸಜ್ಜಿತ), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), ಮತ್ತು 427 (ಹಾನಿ ಉಂಟುಮಾಡುವ ಕಿಡಿಗೇಡಿತನ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಮತ್ತೊಂದು ಎಫ್‌ಐಆರ್‌ಅನ್ನು ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಕಾಪಾಡಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ನಕಲಿ ಮಾಹಿತಿಯನ್ನು ಹರಡಲು ಪ್ರಯತ್ನಿಸುತ್ತಿರುವವರ ವಿರುದ್ಧ ದಾಖಲಿಸಲಾಗಿದೆ.

ಘಟನೆಯಲ್ಲಿ ಅವರು ಕಾರಿನಲ್ಲಿದ್ದ ತಮ್ಮ ಫೋನ್ ಕಳೆದುಕೊಂಡಿದ್ದಾರೆ. ತಾನು ಆರೆಸ್ಸೆಸ್ ಮತ್ತು ಬಿಜೆಪಿ ಸದಸ್ಯನಾಗಿದ್ದೇನೆ, ಆದರೆ ಘಟನೆಯ ಕುರಿತು ವಿಚಾರಿಸಲು ಆರ್‌ಸ್‌ಎಸ್ ಅಥವಾ ಬಿಜೆಪಿಯ ಯಾರೂ ತನ್ನನ್ನು ಸಂಪರ್ಕಿಸಲಿಲ್ಲ ಎಂದು ಸಿಂಗ್ ಬೇಸರ ಹೊರಹಾಕಿದ್ದಾರೆ.

ಇದನ್ನೂ ಓದಿ: ದಲಿತ ಅಪ್ರಾಪ್ತ ಬಾಲಕಿ ಮೇಲೆ ಸವರ್ಣಿಯ ಯುವಕರಿಂದ ಸಾಮೂಹಿಕ ಅತ್ಯಾಚಾರ: ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....