Homeಮುಖಪುಟಹರಿದ್ವಾರ: ಮುಸ್ಲಿಂ ವ್ಯಕ್ತಿಯೆಂದು ಭಾವಿಸಿ RSS-ಬಿಜೆಪಿ ಸದಸ್ಯನ ಮೇಲೆ ಹಲ್ಲೆ

ಹರಿದ್ವಾರ: ಮುಸ್ಲಿಂ ವ್ಯಕ್ತಿಯೆಂದು ಭಾವಿಸಿ RSS-ಬಿಜೆಪಿ ಸದಸ್ಯನ ಮೇಲೆ ಹಲ್ಲೆ

- Advertisement -
- Advertisement -

ಮುಸ್ಲಿಂ ವ್ಯಕ್ತಿಯೆಂದು ತಪ್ಪಾಗಿ ಗ್ರಹಿಸಿದ ಹರಿದ್ವಾರ ಕನ್ವರಿಯಾಗಳ ಗುಂಪೊಂದು ಆರೆಸ್ಸೆಸ್- ಬಿಜೆಪಿ ಸದಸ್ಯನನ್ನು ಕಾರಿನಿಂದ ಹೊರಗೆಳೆದು ಹಲ್ಲೆ ನಡೆಸಿರುವ ಘಟನೆ ಹರಿದ್ವಾರ ಜಿಲ್ಲೆಯ ಮಂಗ‌ ನಗರದಲ್ಲಿ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿ ಪ್ರತಾಪ್ ಸಿಂಗ್ (63), ತಾನು ಆರೆಸ್ಸೆಸ್-ಬಿಜೆಪಿ ಸದಸ್ಯ ಎಂದು ಅವರು ಹೇಳಿಕೊಂಡಿದ್ದಾರೆ.

ಪ್ರತಾಪ್ ಸಿಂಗ್ ಅವರ ಕಾರು ವಾಹನವು ಆಕಸ್ಮಿಕವಾಗಿ ಯಾತ್ರಿಗಳು ಪವಿತ್ರ ನೀರನ್ನು ಸಾಗಿಸುವ ಕನ್ವರ್‌ಗೆ ಡಿಕ್ಕಿ ಹೊಡೆದದ್ದೇ ಹಲ್ಲೆಗೆ ಕಾರಣವಾಗಿತ್ತು. ಗಡ್ಡವನ್ನು ಹೊಂದಿದ್ದ ಸಿಂಗ್ ಕಪ್ಪು ಟೋಪಿಯನ್ನು ಧರಿಸಿದ್ದರಿಂದ ಮತ್ತು ಅವರ ಜೊತೆಗೆ ಬುರ್ಕಾ ಧರಿಸಿದ್ದ ಮಹಿಳೆ ಇದ್ದಿದ್ದರಿಂದ ಅವರು ಮುಸ್ಲಿಮ್ ವ್ಯಕ್ತಿಯೆಂದು ಕನ್ವರಿಯಾಗಳು ಭಾವಿಸಿದ್ದರು ಎಂದು ವರದಿಯಾಗಿದೆ.

ಈ ಘಟನೆ ಜು.10ರಂದು ನಡೆದಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಕನ್ವರಿಯಾಗಳು, ಕಾರಿನಲ್ಲಿದ್ದ ಪ್ರತಾಪ್ ಸಿಂಗ್‌ನನ್ನು ಹೊರಗೆಳೆದಿದ್ದಾರೆ, ನಂತರ ಕಾರನ್ನು ಉರುಳಿಸಿ ದೊಣ್ಣೆಗಳಿಂದ ಅದರ ಮೇಲೆ ದಾಳಿ ನಡೆಸುತ್ತಿರುವುದನ್ನೂ ತೋರಿಸಿದೆ.

ಈ ಬಗ್ಗೆ ಮಾತನಾಡಿರುವ ಪ್ರತಾಪ್ ಸಿಂಗ್, ”ನನ್ನೊಂದಿಗಿದ್ದ ಮಹಿಳೆ ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಘಟಕದ ಮಹಿಳೆಯಾಗಿದ್ದು ಆಕೆ ತನ್ನ ಮಗನನ್ನು ಮದರಸಕ್ಕೆ ಬಿಡಲು ನಾನು ಅವರೊಂದಿಗೆ ಹೋಗಿದ್ದೆ. ಮರಳಿ ಬರುವಾಗ ಊಟಕ್ಕೆಂದು ರಸ್ತೆಯ ಬದಿಯಲ್ಲಿ ಕಾರು ನಿಲ್ಲಿಸುವಾಗ ಅಲ್ಲಿ ಏನೂ ಇರಲಿಲ್ಲ ಆದರೆ ನಾನು ಮರಳಿ ಬಂದಾಗ ಕಾರಿನ ಎದುರು ಯಾರೋ ಕಾವಡಿಯನ್ನು ಇರಿಸಿದ್ದರು. ನಾನು ಕಾರನ್ನು ಚಲಾಯಿಸಿದಾಗ ಅದು ಆಕಸ್ಮಿಕಗಾಗಿ ಕಾವಡಿಗೆ ತಾಗಿತ್ತು ನಾನು ಮುಸ್ಲಿಮ್ ಎಂದು ಜರಿದ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದರು. ನಾನು ಹಿಂದು ಮತ್ತು ಆರೆಸ್ಸೆಸ್ ಬಿಜೆಪಿ ಸದಸ್ಯ ಎಂದು ಹೇಳಿಕೊಂಡರೂ ಬಿಡಲಿಲ್ಲ. ಪುಣ್ಯಕ್ಕೆ ಮಹಿಳೆಗೆ ಏನೂ ಮಾಡದೆ ಅಲ್ಲಿಂದ ಕಳುಹಿಸಿದ್ದರು” ಎಂದು ಅವರು ತಿಳಿಸಿದ್ದಾರೆ.

ಬಿಜೆಪಿಯ ರಾಜ್ಯ ಮಾಧ್ಯಮ ಉಸ್ತುವಾರಿ ಮನ್ವೀರ್ ಚೌಹಾಣ್ ಮತ್ತು ಪಕ್ಷದ ಹರಿದ್ವಾರ ಜಿಲ್ಲಾಧ್ಯಕ್ಷ ಸಂದೀಪ್ ಗೋಯಲ್ ಅವರು, ”ಕನ್ವರಿಯಾಗಳು ಮತ್ತು ಬಿಜೆಪಿಯ ಯಾವುದೇ ಸದಸ್ಯರ ನಡುವೆ ವಾಗ್ವಾದ ನಡೆದ ಯಾವುದೇ ಘಟನೆಯ ಬಗ್ಗೆ ನಮಗೆ ತಿಳಿದಿಲ್ಲ” ಎಂದು ಹೇಳಿದರು.

ಕೆಲವು ಸುದ್ದಿವಾಹಿನಿಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಕನ್ವಾರಿಯಾಗಳು, ”ಮುಸ್ಲಿಂ ದಂಪತಿ” ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿಕೊಂಡ ನಂತರ, ಹರಿದ್ವಾರ ಪೊಲೀಸರು ಘಟನೆಯಲ್ಲಿ ಯಾವುದೇ ಕೋಮು ದೃಷ್ಟಿಕೋನವಿಲ್ಲ ಎಂದು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಸಿಂಗ್ ಅವರು ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಧ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 147 (ಗಲಭೆ), 148 (ಗಲಭೆ, ಮಾರಕ ಆಯುಧದಿಂದ ಶಸ್ತ್ರಸಜ್ಜಿತ), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), ಮತ್ತು 427 (ಹಾನಿ ಉಂಟುಮಾಡುವ ಕಿಡಿಗೇಡಿತನ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಮತ್ತೊಂದು ಎಫ್‌ಐಆರ್‌ಅನ್ನು ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಕಾಪಾಡಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ನಕಲಿ ಮಾಹಿತಿಯನ್ನು ಹರಡಲು ಪ್ರಯತ್ನಿಸುತ್ತಿರುವವರ ವಿರುದ್ಧ ದಾಖಲಿಸಲಾಗಿದೆ.

ಘಟನೆಯಲ್ಲಿ ಅವರು ಕಾರಿನಲ್ಲಿದ್ದ ತಮ್ಮ ಫೋನ್ ಕಳೆದುಕೊಂಡಿದ್ದಾರೆ. ತಾನು ಆರೆಸ್ಸೆಸ್ ಮತ್ತು ಬಿಜೆಪಿ ಸದಸ್ಯನಾಗಿದ್ದೇನೆ, ಆದರೆ ಘಟನೆಯ ಕುರಿತು ವಿಚಾರಿಸಲು ಆರ್‌ಸ್‌ಎಸ್ ಅಥವಾ ಬಿಜೆಪಿಯ ಯಾರೂ ತನ್ನನ್ನು ಸಂಪರ್ಕಿಸಲಿಲ್ಲ ಎಂದು ಸಿಂಗ್ ಬೇಸರ ಹೊರಹಾಕಿದ್ದಾರೆ.

ಇದನ್ನೂ ಓದಿ: ದಲಿತ ಅಪ್ರಾಪ್ತ ಬಾಲಕಿ ಮೇಲೆ ಸವರ್ಣಿಯ ಯುವಕರಿಂದ ಸಾಮೂಹಿಕ ಅತ್ಯಾಚಾರ: ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...