Homeಅಂತರಾಷ್ಟ್ರೀಯಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯಾಕಾಂಡಕ್ಕೆ ಬಹಿರಂಗವಾಗಿ ಕರೆ ನೀಡಿದ ದ್ವೇಷ ಭಾಷಣದ ಪ್ರಕರಣದಲ್ಲಿ ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಜ.12) ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಳಿದೆ.

ಇನ್ನು ಹತ್ತು ದಿನಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಉತ್ತರಾಖಂಡ ಸರ್ಕಾರಕ್ಕೆ ತಿಳಿಸಿದೆ. ಜೊತೆಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ದ್ವೇಷಪೂರಿತ ಭಾಷಣ ಮಾಡಿದವರ ವಿರುದ್ಧ ತೆಗೆದುಕೊಂಡ ಕ್ರಮಗಳ ಬಗ್ಗೆ ತಿಳಿಸುವಂತೆ ಒಕ್ಕೂಟ ಸರ್ಕಾರ ಮತ್ತು ದೆಹಲಿ ಪೊಲೀಸರಿಗೂ ನೋಟಿಸ್ ನೀಡಲಾಗಿದೆ.

ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಅಂಜನಾ ಪ್ರಕಾಶ್ ಮತ್ತು ಪತ್ರಕರ್ತ ಕುರ್ಬಾನ್ ಅಲಿ ಸಲ್ಲಿಸಿರುವ ಅರ್ಜಿಯಲ್ಲಿ ಮುಸ್ಲಿಮರನ್ನು ಗುರಿಯಾಗಿಸುವ ದ್ವೇಷ ಭಾಷಣಗಳ ಬಗ್ಗೆ ವಿಶೇಷ ತನಿಖಾ ತಂಡ ಸ್ವತಂತ್ರ, ವಿಶ್ವಾಸಾರ್ಹ ಮತ್ತು ನ್ಯಾಯಯುತ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ನೇತೃತ್ವದ ಪೀಠವು ಪ್ರಕರಣಗಳ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ಹರಿದ್ವಾರ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: PIL ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಉತ್ತರ ಪ್ರದೇಶದ ಅಲಿಗಢದಲ್ಲಿ ಜನವರಿ 23 ರಂದು ನಡೆಯಲಿರುವ ಧರಮ್ ಸಂಸದ್ ಅನ್ನು ನಿಲ್ಲಿಸುವಂತೆ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಲು ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

“ದೇಶದ ಘೋಷಣೆಗಳು ಸತ್ಯಮೇವ ಜಯತೆಯಿಂದ ಸಶಸ್ತ್ರಮೇವ ಜಯತೇಗೆ ಬದಲಾಗಿವೆ” ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ಉನ್ನತ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಪ್ರಕರಣದಲ್ಲಿ ಕೇವಲ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಆದರೆ ಯಾರನ್ನು ಬಂಧಿಸಿಲ್ಲ” ಎಂದು ಹೇಳಿದ್ದಾರೆ.

ಡಿಸೆಂಬರ್ 17 ಮತ್ತು 19 ರ ನಡುವೆ ನಡೆದ ಹರಿದ್ವಾರ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ ನೀಡಿದ ವಿಡಿಯೋಗಳು ವೈರಲ್ ಆಗಿ ವ್ಯಾಪಕ ಖಂಡನೆಗೊಳಗಾಗಿದ್ದವು. ಜನರ ಆಕ್ರೋಶದ ನಂತರ, ಉತ್ತರಾಖಂಡ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಧರ್ಮ ಸಂಸದ್ ಪ್ರಮುಖ ಸಂಘಟಕರಲ್ಲಿ ಒಬ್ಬರಾದ ವಿವಾದಿತ ಉಗ್ರ ಹಿಂದುತ್ವ ನಾಯಕ ನರಸಿಂಗಾನಂದ ಗಿರಿ ಅವರು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿದ್ದರು. ಭಯೋತ್ಪಾದಕ ಸಂಘಟನೆಯಾದ ಎಲ್‌ಟಿಟಿಇ ನಾಯಕ ಪ್ರಭಾಕರನ್‌ ತರ ಆಗುವಂತೆ ಹಿಂದೂ ಯುವಕರಿಗೆ ಕರೆ ನೀಡಿದ್ದು, ಅವರಿಗೆ 1 ಕೋಟಿ ರೂ.ಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಹಿಂದೂಗಳು ಶಸ್ತ್ರಗಳನ್ನು ಕೈಗಿತ್ತೆಗೊಂಡು ಮುಸ್ಲಿಮರ ವಿರುದ್ಧ ಯುದ್ದ ಮಾಡಬೇಕು ಎಂದು ಅವರು ಕರೆ ನೀಡಿದ್ದರು.

“ನಮ್ಮಲ್ಲಿ 100 ಜನರು 20 ಲಕ್ಷ ಜನರನ್ನು (ಮುಸ್ಲಿಮರು) ಕೊಲ್ಲಲು ಸಿದ್ಧರಿದ್ದರೆ, ನಾವು ಗೆದ್ದು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ. ದೇಶದ ಮುಸ್ಲಿಮರನ್ನು “ಕೊಲ್ಲಲು ಮತ್ತು ಜೈಲಿಗೆ ಹೋಗಲು ಸಿದ್ಧರಾಗಿರಿ” ಎಂದು ಬಲಪಂಥೀಯ ಹಿಂದೂ ಕಾರ್ಯಕರ್ತರಿಗೆ ಹಿಂದೂ ಮಹಾಸಭಾದ ನಾಯಕಿ ಪೂಜಾ ಶಕುನ್ ಪಾಂಡೆ ಕರೆ ನೀಡಿದ್ದರು.


ಇದನ್ನೂ ಓದಿ : ಹರಿದ್ವಾರ ’ಧರ್ಮ ಸಂಸದ್’ ದ್ವೇಷ ಭಾಷಣ: ತನಿಖೆ ನಡೆಸಲು ಎಸ್‌ಐಟಿ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...