Homeಅಂತರಾಷ್ಟ್ರೀಯಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯಾಕಾಂಡಕ್ಕೆ ಬಹಿರಂಗವಾಗಿ ಕರೆ ನೀಡಿದ ದ್ವೇಷ ಭಾಷಣದ ಪ್ರಕರಣದಲ್ಲಿ ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಜ.12) ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಳಿದೆ.

ಇನ್ನು ಹತ್ತು ದಿನಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಉತ್ತರಾಖಂಡ ಸರ್ಕಾರಕ್ಕೆ ತಿಳಿಸಿದೆ. ಜೊತೆಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ದ್ವೇಷಪೂರಿತ ಭಾಷಣ ಮಾಡಿದವರ ವಿರುದ್ಧ ತೆಗೆದುಕೊಂಡ ಕ್ರಮಗಳ ಬಗ್ಗೆ ತಿಳಿಸುವಂತೆ ಒಕ್ಕೂಟ ಸರ್ಕಾರ ಮತ್ತು ದೆಹಲಿ ಪೊಲೀಸರಿಗೂ ನೋಟಿಸ್ ನೀಡಲಾಗಿದೆ.

ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಅಂಜನಾ ಪ್ರಕಾಶ್ ಮತ್ತು ಪತ್ರಕರ್ತ ಕುರ್ಬಾನ್ ಅಲಿ ಸಲ್ಲಿಸಿರುವ ಅರ್ಜಿಯಲ್ಲಿ ಮುಸ್ಲಿಮರನ್ನು ಗುರಿಯಾಗಿಸುವ ದ್ವೇಷ ಭಾಷಣಗಳ ಬಗ್ಗೆ ವಿಶೇಷ ತನಿಖಾ ತಂಡ ಸ್ವತಂತ್ರ, ವಿಶ್ವಾಸಾರ್ಹ ಮತ್ತು ನ್ಯಾಯಯುತ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ನೇತೃತ್ವದ ಪೀಠವು ಪ್ರಕರಣಗಳ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ಹರಿದ್ವಾರ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: PIL ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಉತ್ತರ ಪ್ರದೇಶದ ಅಲಿಗಢದಲ್ಲಿ ಜನವರಿ 23 ರಂದು ನಡೆಯಲಿರುವ ಧರಮ್ ಸಂಸದ್ ಅನ್ನು ನಿಲ್ಲಿಸುವಂತೆ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಲು ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

“ದೇಶದ ಘೋಷಣೆಗಳು ಸತ್ಯಮೇವ ಜಯತೆಯಿಂದ ಸಶಸ್ತ್ರಮೇವ ಜಯತೇಗೆ ಬದಲಾಗಿವೆ” ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ಉನ್ನತ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಪ್ರಕರಣದಲ್ಲಿ ಕೇವಲ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಆದರೆ ಯಾರನ್ನು ಬಂಧಿಸಿಲ್ಲ” ಎಂದು ಹೇಳಿದ್ದಾರೆ.

ಡಿಸೆಂಬರ್ 17 ಮತ್ತು 19 ರ ನಡುವೆ ನಡೆದ ಹರಿದ್ವಾರ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ ನೀಡಿದ ವಿಡಿಯೋಗಳು ವೈರಲ್ ಆಗಿ ವ್ಯಾಪಕ ಖಂಡನೆಗೊಳಗಾಗಿದ್ದವು. ಜನರ ಆಕ್ರೋಶದ ನಂತರ, ಉತ್ತರಾಖಂಡ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಧರ್ಮ ಸಂಸದ್ ಪ್ರಮುಖ ಸಂಘಟಕರಲ್ಲಿ ಒಬ್ಬರಾದ ವಿವಾದಿತ ಉಗ್ರ ಹಿಂದುತ್ವ ನಾಯಕ ನರಸಿಂಗಾನಂದ ಗಿರಿ ಅವರು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿದ್ದರು. ಭಯೋತ್ಪಾದಕ ಸಂಘಟನೆಯಾದ ಎಲ್‌ಟಿಟಿಇ ನಾಯಕ ಪ್ರಭಾಕರನ್‌ ತರ ಆಗುವಂತೆ ಹಿಂದೂ ಯುವಕರಿಗೆ ಕರೆ ನೀಡಿದ್ದು, ಅವರಿಗೆ 1 ಕೋಟಿ ರೂ.ಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಹಿಂದೂಗಳು ಶಸ್ತ್ರಗಳನ್ನು ಕೈಗಿತ್ತೆಗೊಂಡು ಮುಸ್ಲಿಮರ ವಿರುದ್ಧ ಯುದ್ದ ಮಾಡಬೇಕು ಎಂದು ಅವರು ಕರೆ ನೀಡಿದ್ದರು.

“ನಮ್ಮಲ್ಲಿ 100 ಜನರು 20 ಲಕ್ಷ ಜನರನ್ನು (ಮುಸ್ಲಿಮರು) ಕೊಲ್ಲಲು ಸಿದ್ಧರಿದ್ದರೆ, ನಾವು ಗೆದ್ದು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ. ದೇಶದ ಮುಸ್ಲಿಮರನ್ನು “ಕೊಲ್ಲಲು ಮತ್ತು ಜೈಲಿಗೆ ಹೋಗಲು ಸಿದ್ಧರಾಗಿರಿ” ಎಂದು ಬಲಪಂಥೀಯ ಹಿಂದೂ ಕಾರ್ಯಕರ್ತರಿಗೆ ಹಿಂದೂ ಮಹಾಸಭಾದ ನಾಯಕಿ ಪೂಜಾ ಶಕುನ್ ಪಾಂಡೆ ಕರೆ ನೀಡಿದ್ದರು.


ಇದನ್ನೂ ಓದಿ : ಹರಿದ್ವಾರ ’ಧರ್ಮ ಸಂಸದ್’ ದ್ವೇಷ ಭಾಷಣ: ತನಿಖೆ ನಡೆಸಲು ಎಸ್‌ಐಟಿ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...