Homeಮುಖಪುಟಹರಿಣಿ ಅಮರಸೂರ್ಯ | ಶ್ರೀಲಂಕಾದ ಪ್ರಧಾನಿಯಾಗಿ ಎಡಪಂಥೀಯ ನಾಯಕಿ ಪ್ರಮಾಣ ವಚನ

ಹರಿಣಿ ಅಮರಸೂರ್ಯ | ಶ್ರೀಲಂಕಾದ ಪ್ರಧಾನಿಯಾಗಿ ಎಡಪಂಥೀಯ ನಾಯಕಿ ಪ್ರಮಾಣ ವಚನ

ಮಾನವ ಹಕ್ಕುಗಳ ಹೋರಾಟಗಾರ್ತಿ ಮತ್ತು ವಿಶ್ವವಿದ್ಯಾನಿಲಯದ ಉಪನ್ಯಾಸಕಿಯೂ ಆಗಿರುವ ಅವರು ದೇಶದ 3ನೇ ಮಹಿಳಾ ಪ್ರಧಾನ ಮಂತ್ರಿಯಾಗಿ ಹೊರಹೊಮ್ಮಿದ್ದಾರೆ

- Advertisement -
- Advertisement -

ಶ್ರಿಲಂಕಾದ ನೂತನ ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಅವರು ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು. 2000 ರಲ್ಲಿ ಸಿರಿಮಾವೋ ಬಂಡಾರನಾಯಕೆ ನಂತರ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳಾ ನಾಯಕಿಯಾಗಿ ಹರಿಣಿ ಅವರು ಹೊರಹೊಮ್ಮಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

54 ವರ್ಷದ ಹರಿಣಿ ಅವರು ಜನತಾ ವಿಮುಕ್ತಿ ಪೆರುಮುನ (ಜೆವಿಪಿ) ನಾಯಕ, ದೇಶದ ಅಧ್ಯಕ್ಷ ಅನುರ ಕುಮಾರ ಡಿಸಾನಾಯಕೆ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದಿಸಾನಾಯಕೆ ಅವರು ತಮ್ಮನ್ನು ಒಳಗೊಂಡಂತೆ ನಾಲ್ವರ ಸಂಪುಟವನ್ನು ನೇಮಿಸಿದ್ದಾರೆ.

ಇದನ್ನೂ ಓದಿ: ‘ಹದ್ದಬಸ್ತಿನಲ್ಲಿ ಇರಿ’ | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

ಹರಿಣಿ ಅವರು ನ್ಯಾಯ, ಶಿಕ್ಷಣ, ಕಾರ್ಮಿಕ, ಕೈಗಾರಿಕೆಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಆರೋಗ್ಯ ಮತ್ತು ಹೂಡಿಕೆ ಸಚಿವರ ಖಾತೆಗಳನ್ನು ನಿಯೋಜಿಸಲಾಗಿದೆ. ಅಧ್ಯಕ್ಷೀಯ ಚುನಾವಣೆಯ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ದೇಶದ ಮಾಜಿ ಪ್ರಧಾನಿ ದಿನೇಶ್ ಗುಣವರ್ಧನ ಅವರ ನಂತರ ಹರಿಣಿ ಅವರು ದೇಶದ 16ಣೇ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ್ತಿ ಮತ್ತು ವಿಶ್ವವಿದ್ಯಾನಿಲಯದ ಉಪನ್ಯಾಸಕರಾದ ಹರಿಣಿ ಅಮರಸೂರ್ಯ ಅವರು 1994 ರಲ್ಲಿ ದಿವಂಗತ ಸಿರಿಮಾವೊ ಬಂಡಾರನಾಯಕೆ ಅವರು ಅಧಿಕಾರ ವಹಿಸಿಕೊಂಡ ನಂತರ ಶ್ರೀಲಂಕಾದ ಮೊದಲ ಮಹಿಳಾ ಪ್ರಧಾನಿ ಮತ್ತು ದೇಶದ ಇತಿಹಾಸದಲ್ಲಿ ಮೂರನೇ ಮಹಿಳಾ ಪ್ರಧಾನ ಮಂತ್ರಿಯಾಗಿದ್ದಾರೆ. ಅವರ ಜೊತೆಗೆ ಎನ್‌ಪಿಪಿ ಸಂಸದರಾದ ವಿಜಿತಾ ಹೆರಾತ್ ಮತ್ತು ಲಕ್ಷ್ಮಣ್ ನಿಪುಣರಾಚಿ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ನಂತರ 56 ವರ್ಷದ ಡಿಸಾನಾಯಕೆ ಅವರು ಭಾನುವಾರ ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತ್ತೀಚೆಗಷ್ಟೇ ನಡೆದ ಶ್ರೀಲಂಕಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ನಂತರ ‘ಜನತಾ ವಿಮಿಕ್ತಿ ಪೆರಮುನ (ಜೆವಿಪಿ)ಯ’ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಶ್ರೀಲಂಕಾದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಇದನ್ನೂಓದಿ: ಉತ್ತರ ಪ್ರದೇಶ: ಶಿಕ್ಷಕನ ಹೊಡೆತಕ್ಕೆ ದೃಷ್ಟಿ ಕಳೆದುಕೊಂಡ 6ನೇ ತರಗತಿ ವಿದ್ಯಾರ್ಥಿ

ಪ್ರಮಾಣವಚನ ಸ್ವೀಕರಿಸಿದ ನಂತರ ಮಾತನಾಡಿದ ದಿಸಾನಾಯಕೆ, ತಮ್ಮ ಮುಂದಿರುವ ಮಹತ್ವದ ಸವಾಲುಗಳನ್ನು ಒಪ್ಪಿಕೊಂಡರು. ಬಿಕ್ಕಟ್ಟನ್ನು ನಿಭಾಯಿಸಲು ಸಾಮೂಹಿಕ ಪ್ರಯತ್ನಗಳ ಅಗತ್ಯವನ್ನು ಒತ್ತಿ ಹೇಳಿದ ಅವರು, “ಈ ಆಳವಾದ ಬಿಕ್ಕಟ್ಟನ್ನು ಸರ್ಕಾರ, ಏಕ ಪಕ್ಷ ಅಥವಾ ವ್ಯಕ್ತಿ ಮಾತ್ರ ಪರಿಹರಿಸಲು ಸಾಧ್ಯವಾಗುತ್ತದೆ ಎಂದು ನಾವು ನಂಬುವುದಿಲ್ಲ” ಎಂದರು.

“ನಾನು ಮಾಂತ್ರಿಕನಲ್ಲ; ಸಾಮಾನ್ಯ ನಾಗರಿಕ ಎಂದು ನಾನು ಮೊದಲೇ ಹೇಳಿದ್ದೇನೆ. ನನಗೆ ತಿಳಿದಿರುವ ಮತ್ತು ಗೊತ್ತಿಲ್ಲದ ವಿಷಯಗಳಿವೆ. ಈ ದೇಶವನ್ನು ಮೇಲಕ್ಕೆತ್ತಲು ಜ್ಞಾನ ಮತ್ತು ಕೌಶಲ್ಯ ಹೊಂದಿರುವವರನ್ನು ಒಟ್ಟುಗೂಡಿಸುವುದು ನನ್ನ ಗುರಿಯಾಗಿದೆ” ಎಂದು ಅವರು ಹೇಳಿದರು.

ನ್ಯಾಶನಲ್ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟವನ್ನು ಮುನ್ನಡೆಸುವ ಜೆವಿಪಿಯು ಕ್ರಾಂತಿಕಾರಿ ಹಿನ್ನೆಲೆ ಹೊಂದಿದೆ. 1970 ಮತ್ತು 1980 ರ ದಶಕಗಳ ಸಮಾಜವಾದಿ ಹೋರಾಟದಲ್ಲಿ ಎರಡು ವಿಫಲ ಸಶಸ್ತ್ರ ದಂಗೆಗಳನ್ನು ನಡೆಸಿತು. ಮುಂದಿನ ವರ್ಷಗಳಲ್ಲಿ, ಜೆವಿಪಿ ಪ್ರಜಾಸತ್ತಾತ್ಮಕ ರಾಜಕೀಯಕ್ಕೆ ಪರಿವರ್ತನೆಯಾಯಿತು. ಸಾಂದರ್ಭಿಕವಾಗಿ ವಿವಿಧ ಅಧ್ಯಕ್ಷರನ್ನು ಬೆಂಬಲಿಸುವಾಗ ವಿರೋಧ ಪಕ್ಷದಲ್ಲಿ ಉಳಿಯಿತು.

ವಿಡಿಯೊ ನೋಡಿ: ಗೌರಿ ಲಂಕೇಶ್ ನೆನಪು-2024; ಕವಿತೆ ವಾಚನ : ಲಕ್ಷ್ಮಣ್ ಮಂಡಲಗೇರಾ- ರಂಗ ಕನಸು ಕಲಾ ತಂಡ ರಾಯಚೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...