Homeಮುಖಪುಟಹರಿಣಿ ಅಮರಸೂರ್ಯ | ಶ್ರೀಲಂಕಾದ ಪ್ರಧಾನಿಯಾಗಿ ಎಡಪಂಥೀಯ ನಾಯಕಿ ಪ್ರಮಾಣ ವಚನ

ಹರಿಣಿ ಅಮರಸೂರ್ಯ | ಶ್ರೀಲಂಕಾದ ಪ್ರಧಾನಿಯಾಗಿ ಎಡಪಂಥೀಯ ನಾಯಕಿ ಪ್ರಮಾಣ ವಚನ

ಮಾನವ ಹಕ್ಕುಗಳ ಹೋರಾಟಗಾರ್ತಿ ಮತ್ತು ವಿಶ್ವವಿದ್ಯಾನಿಲಯದ ಉಪನ್ಯಾಸಕಿಯೂ ಆಗಿರುವ ಅವರು ದೇಶದ 3ನೇ ಮಹಿಳಾ ಪ್ರಧಾನ ಮಂತ್ರಿಯಾಗಿ ಹೊರಹೊಮ್ಮಿದ್ದಾರೆ

- Advertisement -
- Advertisement -

ಶ್ರಿಲಂಕಾದ ನೂತನ ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಅವರು ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು. 2000 ರಲ್ಲಿ ಸಿರಿಮಾವೋ ಬಂಡಾರನಾಯಕೆ ನಂತರ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳಾ ನಾಯಕಿಯಾಗಿ ಹರಿಣಿ ಅವರು ಹೊರಹೊಮ್ಮಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

54 ವರ್ಷದ ಹರಿಣಿ ಅವರು ಜನತಾ ವಿಮುಕ್ತಿ ಪೆರುಮುನ (ಜೆವಿಪಿ) ನಾಯಕ, ದೇಶದ ಅಧ್ಯಕ್ಷ ಅನುರ ಕುಮಾರ ಡಿಸಾನಾಯಕೆ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದಿಸಾನಾಯಕೆ ಅವರು ತಮ್ಮನ್ನು ಒಳಗೊಂಡಂತೆ ನಾಲ್ವರ ಸಂಪುಟವನ್ನು ನೇಮಿಸಿದ್ದಾರೆ.

ಇದನ್ನೂ ಓದಿ: ‘ಹದ್ದಬಸ್ತಿನಲ್ಲಿ ಇರಿ’ | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

ಹರಿಣಿ ಅವರು ನ್ಯಾಯ, ಶಿಕ್ಷಣ, ಕಾರ್ಮಿಕ, ಕೈಗಾರಿಕೆಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಆರೋಗ್ಯ ಮತ್ತು ಹೂಡಿಕೆ ಸಚಿವರ ಖಾತೆಗಳನ್ನು ನಿಯೋಜಿಸಲಾಗಿದೆ. ಅಧ್ಯಕ್ಷೀಯ ಚುನಾವಣೆಯ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ದೇಶದ ಮಾಜಿ ಪ್ರಧಾನಿ ದಿನೇಶ್ ಗುಣವರ್ಧನ ಅವರ ನಂತರ ಹರಿಣಿ ಅವರು ದೇಶದ 16ಣೇ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ್ತಿ ಮತ್ತು ವಿಶ್ವವಿದ್ಯಾನಿಲಯದ ಉಪನ್ಯಾಸಕರಾದ ಹರಿಣಿ ಅಮರಸೂರ್ಯ ಅವರು 1994 ರಲ್ಲಿ ದಿವಂಗತ ಸಿರಿಮಾವೊ ಬಂಡಾರನಾಯಕೆ ಅವರು ಅಧಿಕಾರ ವಹಿಸಿಕೊಂಡ ನಂತರ ಶ್ರೀಲಂಕಾದ ಮೊದಲ ಮಹಿಳಾ ಪ್ರಧಾನಿ ಮತ್ತು ದೇಶದ ಇತಿಹಾಸದಲ್ಲಿ ಮೂರನೇ ಮಹಿಳಾ ಪ್ರಧಾನ ಮಂತ್ರಿಯಾಗಿದ್ದಾರೆ. ಅವರ ಜೊತೆಗೆ ಎನ್‌ಪಿಪಿ ಸಂಸದರಾದ ವಿಜಿತಾ ಹೆರಾತ್ ಮತ್ತು ಲಕ್ಷ್ಮಣ್ ನಿಪುಣರಾಚಿ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ನಂತರ 56 ವರ್ಷದ ಡಿಸಾನಾಯಕೆ ಅವರು ಭಾನುವಾರ ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತ್ತೀಚೆಗಷ್ಟೇ ನಡೆದ ಶ್ರೀಲಂಕಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ನಂತರ ‘ಜನತಾ ವಿಮಿಕ್ತಿ ಪೆರಮುನ (ಜೆವಿಪಿ)ಯ’ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಶ್ರೀಲಂಕಾದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಇದನ್ನೂಓದಿ: ಉತ್ತರ ಪ್ರದೇಶ: ಶಿಕ್ಷಕನ ಹೊಡೆತಕ್ಕೆ ದೃಷ್ಟಿ ಕಳೆದುಕೊಂಡ 6ನೇ ತರಗತಿ ವಿದ್ಯಾರ್ಥಿ

ಪ್ರಮಾಣವಚನ ಸ್ವೀಕರಿಸಿದ ನಂತರ ಮಾತನಾಡಿದ ದಿಸಾನಾಯಕೆ, ತಮ್ಮ ಮುಂದಿರುವ ಮಹತ್ವದ ಸವಾಲುಗಳನ್ನು ಒಪ್ಪಿಕೊಂಡರು. ಬಿಕ್ಕಟ್ಟನ್ನು ನಿಭಾಯಿಸಲು ಸಾಮೂಹಿಕ ಪ್ರಯತ್ನಗಳ ಅಗತ್ಯವನ್ನು ಒತ್ತಿ ಹೇಳಿದ ಅವರು, “ಈ ಆಳವಾದ ಬಿಕ್ಕಟ್ಟನ್ನು ಸರ್ಕಾರ, ಏಕ ಪಕ್ಷ ಅಥವಾ ವ್ಯಕ್ತಿ ಮಾತ್ರ ಪರಿಹರಿಸಲು ಸಾಧ್ಯವಾಗುತ್ತದೆ ಎಂದು ನಾವು ನಂಬುವುದಿಲ್ಲ” ಎಂದರು.

“ನಾನು ಮಾಂತ್ರಿಕನಲ್ಲ; ಸಾಮಾನ್ಯ ನಾಗರಿಕ ಎಂದು ನಾನು ಮೊದಲೇ ಹೇಳಿದ್ದೇನೆ. ನನಗೆ ತಿಳಿದಿರುವ ಮತ್ತು ಗೊತ್ತಿಲ್ಲದ ವಿಷಯಗಳಿವೆ. ಈ ದೇಶವನ್ನು ಮೇಲಕ್ಕೆತ್ತಲು ಜ್ಞಾನ ಮತ್ತು ಕೌಶಲ್ಯ ಹೊಂದಿರುವವರನ್ನು ಒಟ್ಟುಗೂಡಿಸುವುದು ನನ್ನ ಗುರಿಯಾಗಿದೆ” ಎಂದು ಅವರು ಹೇಳಿದರು.

ನ್ಯಾಶನಲ್ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟವನ್ನು ಮುನ್ನಡೆಸುವ ಜೆವಿಪಿಯು ಕ್ರಾಂತಿಕಾರಿ ಹಿನ್ನೆಲೆ ಹೊಂದಿದೆ. 1970 ಮತ್ತು 1980 ರ ದಶಕಗಳ ಸಮಾಜವಾದಿ ಹೋರಾಟದಲ್ಲಿ ಎರಡು ವಿಫಲ ಸಶಸ್ತ್ರ ದಂಗೆಗಳನ್ನು ನಡೆಸಿತು. ಮುಂದಿನ ವರ್ಷಗಳಲ್ಲಿ, ಜೆವಿಪಿ ಪ್ರಜಾಸತ್ತಾತ್ಮಕ ರಾಜಕೀಯಕ್ಕೆ ಪರಿವರ್ತನೆಯಾಯಿತು. ಸಾಂದರ್ಭಿಕವಾಗಿ ವಿವಿಧ ಅಧ್ಯಕ್ಷರನ್ನು ಬೆಂಬಲಿಸುವಾಗ ವಿರೋಧ ಪಕ್ಷದಲ್ಲಿ ಉಳಿಯಿತು.

ವಿಡಿಯೊ ನೋಡಿ: ಗೌರಿ ಲಂಕೇಶ್ ನೆನಪು-2024; ಕವಿತೆ ವಾಚನ : ಲಕ್ಷ್ಮಣ್ ಮಂಡಲಗೇರಾ- ರಂಗ ಕನಸು ಕಲಾ ತಂಡ ರಾಯಚೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...