Homeಮುಖಪುಟಹರಿಣಿ ಅಮರಸೂರ್ಯ | ಶ್ರೀಲಂಕಾದ ಪ್ರಧಾನಿಯಾಗಿ ಎಡಪಂಥೀಯ ನಾಯಕಿ ಪ್ರಮಾಣ ವಚನ

ಹರಿಣಿ ಅಮರಸೂರ್ಯ | ಶ್ರೀಲಂಕಾದ ಪ್ರಧಾನಿಯಾಗಿ ಎಡಪಂಥೀಯ ನಾಯಕಿ ಪ್ರಮಾಣ ವಚನ

ಮಾನವ ಹಕ್ಕುಗಳ ಹೋರಾಟಗಾರ್ತಿ ಮತ್ತು ವಿಶ್ವವಿದ್ಯಾನಿಲಯದ ಉಪನ್ಯಾಸಕಿಯೂ ಆಗಿರುವ ಅವರು ದೇಶದ 3ನೇ ಮಹಿಳಾ ಪ್ರಧಾನ ಮಂತ್ರಿಯಾಗಿ ಹೊರಹೊಮ್ಮಿದ್ದಾರೆ

- Advertisement -
- Advertisement -

ಶ್ರಿಲಂಕಾದ ನೂತನ ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಅವರು ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು. 2000 ರಲ್ಲಿ ಸಿರಿಮಾವೋ ಬಂಡಾರನಾಯಕೆ ನಂತರ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳಾ ನಾಯಕಿಯಾಗಿ ಹರಿಣಿ ಅವರು ಹೊರಹೊಮ್ಮಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

54 ವರ್ಷದ ಹರಿಣಿ ಅವರು ಜನತಾ ವಿಮುಕ್ತಿ ಪೆರುಮುನ (ಜೆವಿಪಿ) ನಾಯಕ, ದೇಶದ ಅಧ್ಯಕ್ಷ ಅನುರ ಕುಮಾರ ಡಿಸಾನಾಯಕೆ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದಿಸಾನಾಯಕೆ ಅವರು ತಮ್ಮನ್ನು ಒಳಗೊಂಡಂತೆ ನಾಲ್ವರ ಸಂಪುಟವನ್ನು ನೇಮಿಸಿದ್ದಾರೆ.

ಇದನ್ನೂ ಓದಿ: ‘ಹದ್ದಬಸ್ತಿನಲ್ಲಿ ಇರಿ’ | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

ಹರಿಣಿ ಅವರು ನ್ಯಾಯ, ಶಿಕ್ಷಣ, ಕಾರ್ಮಿಕ, ಕೈಗಾರಿಕೆಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಆರೋಗ್ಯ ಮತ್ತು ಹೂಡಿಕೆ ಸಚಿವರ ಖಾತೆಗಳನ್ನು ನಿಯೋಜಿಸಲಾಗಿದೆ. ಅಧ್ಯಕ್ಷೀಯ ಚುನಾವಣೆಯ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ದೇಶದ ಮಾಜಿ ಪ್ರಧಾನಿ ದಿನೇಶ್ ಗುಣವರ್ಧನ ಅವರ ನಂತರ ಹರಿಣಿ ಅವರು ದೇಶದ 16ಣೇ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ್ತಿ ಮತ್ತು ವಿಶ್ವವಿದ್ಯಾನಿಲಯದ ಉಪನ್ಯಾಸಕರಾದ ಹರಿಣಿ ಅಮರಸೂರ್ಯ ಅವರು 1994 ರಲ್ಲಿ ದಿವಂಗತ ಸಿರಿಮಾವೊ ಬಂಡಾರನಾಯಕೆ ಅವರು ಅಧಿಕಾರ ವಹಿಸಿಕೊಂಡ ನಂತರ ಶ್ರೀಲಂಕಾದ ಮೊದಲ ಮಹಿಳಾ ಪ್ರಧಾನಿ ಮತ್ತು ದೇಶದ ಇತಿಹಾಸದಲ್ಲಿ ಮೂರನೇ ಮಹಿಳಾ ಪ್ರಧಾನ ಮಂತ್ರಿಯಾಗಿದ್ದಾರೆ. ಅವರ ಜೊತೆಗೆ ಎನ್‌ಪಿಪಿ ಸಂಸದರಾದ ವಿಜಿತಾ ಹೆರಾತ್ ಮತ್ತು ಲಕ್ಷ್ಮಣ್ ನಿಪುಣರಾಚಿ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ನಂತರ 56 ವರ್ಷದ ಡಿಸಾನಾಯಕೆ ಅವರು ಭಾನುವಾರ ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತ್ತೀಚೆಗಷ್ಟೇ ನಡೆದ ಶ್ರೀಲಂಕಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ನಂತರ ‘ಜನತಾ ವಿಮಿಕ್ತಿ ಪೆರಮುನ (ಜೆವಿಪಿ)ಯ’ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಶ್ರೀಲಂಕಾದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಇದನ್ನೂಓದಿ: ಉತ್ತರ ಪ್ರದೇಶ: ಶಿಕ್ಷಕನ ಹೊಡೆತಕ್ಕೆ ದೃಷ್ಟಿ ಕಳೆದುಕೊಂಡ 6ನೇ ತರಗತಿ ವಿದ್ಯಾರ್ಥಿ

ಪ್ರಮಾಣವಚನ ಸ್ವೀಕರಿಸಿದ ನಂತರ ಮಾತನಾಡಿದ ದಿಸಾನಾಯಕೆ, ತಮ್ಮ ಮುಂದಿರುವ ಮಹತ್ವದ ಸವಾಲುಗಳನ್ನು ಒಪ್ಪಿಕೊಂಡರು. ಬಿಕ್ಕಟ್ಟನ್ನು ನಿಭಾಯಿಸಲು ಸಾಮೂಹಿಕ ಪ್ರಯತ್ನಗಳ ಅಗತ್ಯವನ್ನು ಒತ್ತಿ ಹೇಳಿದ ಅವರು, “ಈ ಆಳವಾದ ಬಿಕ್ಕಟ್ಟನ್ನು ಸರ್ಕಾರ, ಏಕ ಪಕ್ಷ ಅಥವಾ ವ್ಯಕ್ತಿ ಮಾತ್ರ ಪರಿಹರಿಸಲು ಸಾಧ್ಯವಾಗುತ್ತದೆ ಎಂದು ನಾವು ನಂಬುವುದಿಲ್ಲ” ಎಂದರು.

“ನಾನು ಮಾಂತ್ರಿಕನಲ್ಲ; ಸಾಮಾನ್ಯ ನಾಗರಿಕ ಎಂದು ನಾನು ಮೊದಲೇ ಹೇಳಿದ್ದೇನೆ. ನನಗೆ ತಿಳಿದಿರುವ ಮತ್ತು ಗೊತ್ತಿಲ್ಲದ ವಿಷಯಗಳಿವೆ. ಈ ದೇಶವನ್ನು ಮೇಲಕ್ಕೆತ್ತಲು ಜ್ಞಾನ ಮತ್ತು ಕೌಶಲ್ಯ ಹೊಂದಿರುವವರನ್ನು ಒಟ್ಟುಗೂಡಿಸುವುದು ನನ್ನ ಗುರಿಯಾಗಿದೆ” ಎಂದು ಅವರು ಹೇಳಿದರು.

ನ್ಯಾಶನಲ್ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟವನ್ನು ಮುನ್ನಡೆಸುವ ಜೆವಿಪಿಯು ಕ್ರಾಂತಿಕಾರಿ ಹಿನ್ನೆಲೆ ಹೊಂದಿದೆ. 1970 ಮತ್ತು 1980 ರ ದಶಕಗಳ ಸಮಾಜವಾದಿ ಹೋರಾಟದಲ್ಲಿ ಎರಡು ವಿಫಲ ಸಶಸ್ತ್ರ ದಂಗೆಗಳನ್ನು ನಡೆಸಿತು. ಮುಂದಿನ ವರ್ಷಗಳಲ್ಲಿ, ಜೆವಿಪಿ ಪ್ರಜಾಸತ್ತಾತ್ಮಕ ರಾಜಕೀಯಕ್ಕೆ ಪರಿವರ್ತನೆಯಾಯಿತು. ಸಾಂದರ್ಭಿಕವಾಗಿ ವಿವಿಧ ಅಧ್ಯಕ್ಷರನ್ನು ಬೆಂಬಲಿಸುವಾಗ ವಿರೋಧ ಪಕ್ಷದಲ್ಲಿ ಉಳಿಯಿತು.

ವಿಡಿಯೊ ನೋಡಿ: ಗೌರಿ ಲಂಕೇಶ್ ನೆನಪು-2024; ಕವಿತೆ ವಾಚನ : ಲಕ್ಷ್ಮಣ್ ಮಂಡಲಗೇರಾ- ರಂಗ ಕನಸು ಕಲಾ ತಂಡ ರಾಯಚೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...