Homeಮುಖಪುಟ'ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ' | ಹೋರಾಟಗಾರ ನದೀಮ್ ಖಾನ್‌ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ...

‘ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ’ | ಹೋರಾಟಗಾರ ನದೀಮ್ ಖಾನ್‌ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ ಪೊಲೀಸರಿಗೆ ಹೈಕೋರ್ಟ್ ತಪರಾಕಿ

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ ನದೀಮ್ ಖಾನ್‌ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಬಂಧನದಿಂದ ಮಧ್ಯಂತರ ಜಾಮೀನು ನೀಡಿದ್ದು, ಈ ವೇಳೆ ದೆಹಲಿ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅವರ ಭಾಷಣವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು, ‘ದ್ವೇಷಕ್ಕೆ ಉತ್ತೇಜನ ಮತ್ತು ಕ್ರಿಮಿನಲ್ ಪಿತೂರಿ’ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ರಾಷ್ಟ್ರದ ಸೌಹಾರ್ಧತೆ ಅಷ್ಟೊಂದು ದುರ್ಬಲವಾಗಿಲ್ಲ ಎಂದು ಹೇಳಿದೆ. 

ನಾಗರಿಕ ಹಕ್ಕುಗಳ ರಕ್ಷಣೆ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಂ ಖಾನ್‌ ಅವರನ್ನು ಶುಕ್ರವಾರದವರೆಗೆ ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಿ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಆದರೆ, ನಾಳೆ ವಿಚಾರಣೆಗೆ ಹಾಜರಾಗುವಂತೆ ಮತ್ತು ತನಿಖೆಗೆ ಸಹಕರಿಸುವಂತೆ ನದೀಂ ಖಾನ್‌ಗೆ ಕೋರ್ಟ್ ಸೂಚಿಸಿದೆ. ಹೋರಾಟಗಾರ ನದೀಮ್ ಖಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತನಿಖಾಧಿಕಾರಿಗಳ ಅನುಮತಿಯಿಲ್ಲದೆ ದೆಹಲಿಯನ್ನು ತೊರೆಯದಂತೆ ಅವರಿಗೆ ನಿರ್ದೇಶನ ನೀಡಲಾಗಿದ್ದು, ಜೊತೆಗೆ ನದೀಂ ಖಾನ್‌ ಮತ್ತು ಎಪಿಸಿಆರ್ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ನೋಟಿಸ್ ಜಾರಿ ಮಾಡಿದ್ದಾರೆ. ದೆಹಲಿ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ನದೀಂ ಖಾನ್ ಕೋರಿದ್ದರು.

ದೆಹಲಿ ಪೊಲೀಸರ ಎಫ್ಐಆರ್‌ ಪ್ರಕಾರ, ನವೆಂಬರ್ 21ರಂದು “ರೆಕಾರ್ಡ್ಸ್ ಆಫ್ ಹಿಂದೂಸ್ತಾನ್ ಇನ್ ಮೋದಿ ಸರ್ಕಾರ್” ಎಂಬ ಶೀರ್ಷಿಕೆಯ ವಿಡಿಯೋವನ್ನು ಯೂಟ್ಯೂಬ್‌ ನಲ್ಲಿ ಪೋಸ್ಟ್ ಮಾಡಲಾಗಿತ್ತು. ವಸ್ತು ಪ್ರದರ್ಶನದಲ್ಲಿ ಸ್ಟಾಲ್ ಹಾಕಿದ್ದ ವ್ಯಕ್ತಿಯೊಬ್ಬರು ಬ್ಯಾನರ್‌ನತ್ತ ಸನ್ನೆ ಮಾಡುತ್ತಿದ್ದುದನ್ನು ಈ ವಿಡಿಯೋ ತೋರಿಸಿದೆ.

ಈ ವಿಡಿಯೋದಲ್ಲಿ ನದೀಮ್ ಅವರು, ಅಖ್ಲಾಕ್, ರೋಹಿತ್ ವೇಮುಲಾ, ಪೆಹ್ಲು ಖಾನ್ ಅವರ ಬಗ್ಗೆ ಮಾತನಾಡುತ್ತಿದ್ದರು ಮತ್ತು 2020ರ ಶಾಹೀನ್ ಬಾಗ್ ಪ್ರತಿಭಟನೆಗಳು, ದೆಹಲಿ ಗಲಭೆಗಳನ್ನು ಇಲ್ಲಿ ಉಲ್ಲೇಖಿಸಿದ್ದಾರೆ. ಆ ಮೂಲಕ ನಿರ್ದಿಷ್ಟ ಸಮುದಾಯವನ್ನು ಬಲಿಪಶುಗಳಾಗಿ ಚಿತ್ರಿಸಿ ಜನರನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸ್ಟಾಲ್ ಅನ್ನು ಎಪಿಸಿಆರ್ ವತಿಯಿಂದ ಹಾಕಲಾಗಿದ್ದು ವಿಡಿಯೋದಲ್ಲಿ ಮಾತನಾಡುತ್ತಿರುವ ವ್ಯಕ್ತಿ ಖಾನ್ ಎಂದು ಪೊಲೀಸರು ಆರೋಪಿಸಿದ್ದಾರೆ.

ಜಾಮೀನು ನೀಡುವಾಗ ಹೈಕೋರ್ಟ್, “ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿದ್ದೇವೆ. ನಮ್ಮ ರಾಷ್ಟ್ರದ ಸೌಹಾರ್ದತೆ ಅಷ್ಟೊಂದು ದುರ್ಬಲವಾಗಿಲ್ಲ. ಇದು ಕೇವಲ ಒಂದು ಪ್ರದರ್ಶನ, ಕೇವಲ ಯಾರಾದರೂ ಕೂಗಿದ ಕೂಡಲೆ ಸೌಹಾರ್ದ ಕೆಡುವುದಿಲ್ಲ. ಜನರನ್ನು ಬುದ್ದಿವಂತರೆಂದು ಪರಿಗಣಿಸಿ… ಸಾಮಾನ್ಯ ಮನುಷ್ಯರು ಅಷ್ಟು ದುರ್ಬಲನಲ್ಲ…” ಎಂದು ಹೇಳಿದೆ.

“ದೇಶವು ನಮ್ಮ ಮೂಲಭೂತ ಹಕ್ಕುಗಳ ಬಗ್ಗೆ ಬಹಳ ಹೆಮ್ಮೆಪಡುತ್ತದೆ. ಆರ್ಟಿಕಲ್ 19 (1) (ಎ) ಅನ್ನು ರಕ್ಷಿಸಬೇಕು. ಇದರಿಂದ ಒಬ್ಬ ಸಾಮಾನ್ಯ ವ್ಯಕ್ತಿ ಪ್ರಚೋದನೆಗೆ ಒಳಗಾಗುತ್ತಾನೆ ಎಂದು ನೀವು ಭಾವಿಸಿದರೆ, ಸಾಮಾನ್ಯ ಮನುಷ್ಯನಿಗೆ ಏನೆಂದು ಅರ್ಥಮಾಡಿಕೊಳ್ಳುವ ಐಕ್ಯೂ ಇಲ್ಲ ಎಂದರ್ಥ. ಅವರಿಗೆ ಇದು ಸರಿ… ನಾವು ಬುದ್ದಿವಂತರು ದಯವಿಟ್ಟು ಸಾಮಾನ್ಯರ ಮೇಲೆ ಸ್ವಲ್ಪ ನಂಬಿಕೆ ಇಡಿ.” ಎಂದು ಕೋರ್ಟ್ ಹೇಳಿದೆ.

ನದೀಂ ಖಾನ್ ಅವರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್, ವಕೀಲರಾದ ತಾರಾ ನರುಲಾ, ತಮನ್ನಾ ಪಂಕಜ್, ಶಿವಂಗಿ ಶರ್ಮಾ, ಅಹ್ಮದ್ ಇಬ್ರಾಹಿಂ ಮತ್ತು ರೂಪಾಲಿ ಸ್ಯಾಮ್ಯುಯೆಲ್ ಪ್ರತಿನಿಧಿಸಿದರು. ಮುಂದಿನ ಶುಕ್ರವಾರದಂದು ನ್ಯಾಯಾಲಯವು ಈ ಪ್ರಕರಣದ ವಿಚಾರಣೆಗೆ ಸಿದ್ಧವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...