Homeಮುಖಪುಟ'ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ' | ಹೋರಾಟಗಾರ ನದೀಮ್ ಖಾನ್‌ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ...

‘ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ’ | ಹೋರಾಟಗಾರ ನದೀಮ್ ಖಾನ್‌ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ ಪೊಲೀಸರಿಗೆ ಹೈಕೋರ್ಟ್ ತಪರಾಕಿ

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ ನದೀಮ್ ಖಾನ್‌ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಬಂಧನದಿಂದ ಮಧ್ಯಂತರ ಜಾಮೀನು ನೀಡಿದ್ದು, ಈ ವೇಳೆ ದೆಹಲಿ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅವರ ಭಾಷಣವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು, ‘ದ್ವೇಷಕ್ಕೆ ಉತ್ತೇಜನ ಮತ್ತು ಕ್ರಿಮಿನಲ್ ಪಿತೂರಿ’ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ರಾಷ್ಟ್ರದ ಸೌಹಾರ್ಧತೆ ಅಷ್ಟೊಂದು ದುರ್ಬಲವಾಗಿಲ್ಲ ಎಂದು ಹೇಳಿದೆ. 

ನಾಗರಿಕ ಹಕ್ಕುಗಳ ರಕ್ಷಣೆ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಂ ಖಾನ್‌ ಅವರನ್ನು ಶುಕ್ರವಾರದವರೆಗೆ ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಿ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಆದರೆ, ನಾಳೆ ವಿಚಾರಣೆಗೆ ಹಾಜರಾಗುವಂತೆ ಮತ್ತು ತನಿಖೆಗೆ ಸಹಕರಿಸುವಂತೆ ನದೀಂ ಖಾನ್‌ಗೆ ಕೋರ್ಟ್ ಸೂಚಿಸಿದೆ. ಹೋರಾಟಗಾರ ನದೀಮ್ ಖಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತನಿಖಾಧಿಕಾರಿಗಳ ಅನುಮತಿಯಿಲ್ಲದೆ ದೆಹಲಿಯನ್ನು ತೊರೆಯದಂತೆ ಅವರಿಗೆ ನಿರ್ದೇಶನ ನೀಡಲಾಗಿದ್ದು, ಜೊತೆಗೆ ನದೀಂ ಖಾನ್‌ ಮತ್ತು ಎಪಿಸಿಆರ್ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ನೋಟಿಸ್ ಜಾರಿ ಮಾಡಿದ್ದಾರೆ. ದೆಹಲಿ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ನದೀಂ ಖಾನ್ ಕೋರಿದ್ದರು.

ದೆಹಲಿ ಪೊಲೀಸರ ಎಫ್ಐಆರ್‌ ಪ್ರಕಾರ, ನವೆಂಬರ್ 21ರಂದು “ರೆಕಾರ್ಡ್ಸ್ ಆಫ್ ಹಿಂದೂಸ್ತಾನ್ ಇನ್ ಮೋದಿ ಸರ್ಕಾರ್” ಎಂಬ ಶೀರ್ಷಿಕೆಯ ವಿಡಿಯೋವನ್ನು ಯೂಟ್ಯೂಬ್‌ ನಲ್ಲಿ ಪೋಸ್ಟ್ ಮಾಡಲಾಗಿತ್ತು. ವಸ್ತು ಪ್ರದರ್ಶನದಲ್ಲಿ ಸ್ಟಾಲ್ ಹಾಕಿದ್ದ ವ್ಯಕ್ತಿಯೊಬ್ಬರು ಬ್ಯಾನರ್‌ನತ್ತ ಸನ್ನೆ ಮಾಡುತ್ತಿದ್ದುದನ್ನು ಈ ವಿಡಿಯೋ ತೋರಿಸಿದೆ.

ಈ ವಿಡಿಯೋದಲ್ಲಿ ನದೀಮ್ ಅವರು, ಅಖ್ಲಾಕ್, ರೋಹಿತ್ ವೇಮುಲಾ, ಪೆಹ್ಲು ಖಾನ್ ಅವರ ಬಗ್ಗೆ ಮಾತನಾಡುತ್ತಿದ್ದರು ಮತ್ತು 2020ರ ಶಾಹೀನ್ ಬಾಗ್ ಪ್ರತಿಭಟನೆಗಳು, ದೆಹಲಿ ಗಲಭೆಗಳನ್ನು ಇಲ್ಲಿ ಉಲ್ಲೇಖಿಸಿದ್ದಾರೆ. ಆ ಮೂಲಕ ನಿರ್ದಿಷ್ಟ ಸಮುದಾಯವನ್ನು ಬಲಿಪಶುಗಳಾಗಿ ಚಿತ್ರಿಸಿ ಜನರನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸ್ಟಾಲ್ ಅನ್ನು ಎಪಿಸಿಆರ್ ವತಿಯಿಂದ ಹಾಕಲಾಗಿದ್ದು ವಿಡಿಯೋದಲ್ಲಿ ಮಾತನಾಡುತ್ತಿರುವ ವ್ಯಕ್ತಿ ಖಾನ್ ಎಂದು ಪೊಲೀಸರು ಆರೋಪಿಸಿದ್ದಾರೆ.

ಜಾಮೀನು ನೀಡುವಾಗ ಹೈಕೋರ್ಟ್, “ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿದ್ದೇವೆ. ನಮ್ಮ ರಾಷ್ಟ್ರದ ಸೌಹಾರ್ದತೆ ಅಷ್ಟೊಂದು ದುರ್ಬಲವಾಗಿಲ್ಲ. ಇದು ಕೇವಲ ಒಂದು ಪ್ರದರ್ಶನ, ಕೇವಲ ಯಾರಾದರೂ ಕೂಗಿದ ಕೂಡಲೆ ಸೌಹಾರ್ದ ಕೆಡುವುದಿಲ್ಲ. ಜನರನ್ನು ಬುದ್ದಿವಂತರೆಂದು ಪರಿಗಣಿಸಿ… ಸಾಮಾನ್ಯ ಮನುಷ್ಯರು ಅಷ್ಟು ದುರ್ಬಲನಲ್ಲ…” ಎಂದು ಹೇಳಿದೆ.

“ದೇಶವು ನಮ್ಮ ಮೂಲಭೂತ ಹಕ್ಕುಗಳ ಬಗ್ಗೆ ಬಹಳ ಹೆಮ್ಮೆಪಡುತ್ತದೆ. ಆರ್ಟಿಕಲ್ 19 (1) (ಎ) ಅನ್ನು ರಕ್ಷಿಸಬೇಕು. ಇದರಿಂದ ಒಬ್ಬ ಸಾಮಾನ್ಯ ವ್ಯಕ್ತಿ ಪ್ರಚೋದನೆಗೆ ಒಳಗಾಗುತ್ತಾನೆ ಎಂದು ನೀವು ಭಾವಿಸಿದರೆ, ಸಾಮಾನ್ಯ ಮನುಷ್ಯನಿಗೆ ಏನೆಂದು ಅರ್ಥಮಾಡಿಕೊಳ್ಳುವ ಐಕ್ಯೂ ಇಲ್ಲ ಎಂದರ್ಥ. ಅವರಿಗೆ ಇದು ಸರಿ… ನಾವು ಬುದ್ದಿವಂತರು ದಯವಿಟ್ಟು ಸಾಮಾನ್ಯರ ಮೇಲೆ ಸ್ವಲ್ಪ ನಂಬಿಕೆ ಇಡಿ.” ಎಂದು ಕೋರ್ಟ್ ಹೇಳಿದೆ.

ನದೀಂ ಖಾನ್ ಅವರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್, ವಕೀಲರಾದ ತಾರಾ ನರುಲಾ, ತಮನ್ನಾ ಪಂಕಜ್, ಶಿವಂಗಿ ಶರ್ಮಾ, ಅಹ್ಮದ್ ಇಬ್ರಾಹಿಂ ಮತ್ತು ರೂಪಾಲಿ ಸ್ಯಾಮ್ಯುಯೆಲ್ ಪ್ರತಿನಿಧಿಸಿದರು. ಮುಂದಿನ ಶುಕ್ರವಾರದಂದು ನ್ಯಾಯಾಲಯವು ಈ ಪ್ರಕರಣದ ವಿಚಾರಣೆಗೆ ಸಿದ್ಧವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...