Homeಮುಖಪುಟ'ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ' | ಹೋರಾಟಗಾರ ನದೀಮ್ ಖಾನ್‌ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ...

‘ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ’ | ಹೋರಾಟಗಾರ ನದೀಮ್ ಖಾನ್‌ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ ಪೊಲೀಸರಿಗೆ ಹೈಕೋರ್ಟ್ ತಪರಾಕಿ

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ ನದೀಮ್ ಖಾನ್‌ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಬಂಧನದಿಂದ ಮಧ್ಯಂತರ ಜಾಮೀನು ನೀಡಿದ್ದು, ಈ ವೇಳೆ ದೆಹಲಿ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅವರ ಭಾಷಣವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು, ‘ದ್ವೇಷಕ್ಕೆ ಉತ್ತೇಜನ ಮತ್ತು ಕ್ರಿಮಿನಲ್ ಪಿತೂರಿ’ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ರಾಷ್ಟ್ರದ ಸೌಹಾರ್ಧತೆ ಅಷ್ಟೊಂದು ದುರ್ಬಲವಾಗಿಲ್ಲ ಎಂದು ಹೇಳಿದೆ. 

ನಾಗರಿಕ ಹಕ್ಕುಗಳ ರಕ್ಷಣೆ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಂ ಖಾನ್‌ ಅವರನ್ನು ಶುಕ್ರವಾರದವರೆಗೆ ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಿ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಆದರೆ, ನಾಳೆ ವಿಚಾರಣೆಗೆ ಹಾಜರಾಗುವಂತೆ ಮತ್ತು ತನಿಖೆಗೆ ಸಹಕರಿಸುವಂತೆ ನದೀಂ ಖಾನ್‌ಗೆ ಕೋರ್ಟ್ ಸೂಚಿಸಿದೆ. ಹೋರಾಟಗಾರ ನದೀಮ್ ಖಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತನಿಖಾಧಿಕಾರಿಗಳ ಅನುಮತಿಯಿಲ್ಲದೆ ದೆಹಲಿಯನ್ನು ತೊರೆಯದಂತೆ ಅವರಿಗೆ ನಿರ್ದೇಶನ ನೀಡಲಾಗಿದ್ದು, ಜೊತೆಗೆ ನದೀಂ ಖಾನ್‌ ಮತ್ತು ಎಪಿಸಿಆರ್ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ನೋಟಿಸ್ ಜಾರಿ ಮಾಡಿದ್ದಾರೆ. ದೆಹಲಿ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ನದೀಂ ಖಾನ್ ಕೋರಿದ್ದರು.

ದೆಹಲಿ ಪೊಲೀಸರ ಎಫ್ಐಆರ್‌ ಪ್ರಕಾರ, ನವೆಂಬರ್ 21ರಂದು “ರೆಕಾರ್ಡ್ಸ್ ಆಫ್ ಹಿಂದೂಸ್ತಾನ್ ಇನ್ ಮೋದಿ ಸರ್ಕಾರ್” ಎಂಬ ಶೀರ್ಷಿಕೆಯ ವಿಡಿಯೋವನ್ನು ಯೂಟ್ಯೂಬ್‌ ನಲ್ಲಿ ಪೋಸ್ಟ್ ಮಾಡಲಾಗಿತ್ತು. ವಸ್ತು ಪ್ರದರ್ಶನದಲ್ಲಿ ಸ್ಟಾಲ್ ಹಾಕಿದ್ದ ವ್ಯಕ್ತಿಯೊಬ್ಬರು ಬ್ಯಾನರ್‌ನತ್ತ ಸನ್ನೆ ಮಾಡುತ್ತಿದ್ದುದನ್ನು ಈ ವಿಡಿಯೋ ತೋರಿಸಿದೆ.

ಈ ವಿಡಿಯೋದಲ್ಲಿ ನದೀಮ್ ಅವರು, ಅಖ್ಲಾಕ್, ರೋಹಿತ್ ವೇಮುಲಾ, ಪೆಹ್ಲು ಖಾನ್ ಅವರ ಬಗ್ಗೆ ಮಾತನಾಡುತ್ತಿದ್ದರು ಮತ್ತು 2020ರ ಶಾಹೀನ್ ಬಾಗ್ ಪ್ರತಿಭಟನೆಗಳು, ದೆಹಲಿ ಗಲಭೆಗಳನ್ನು ಇಲ್ಲಿ ಉಲ್ಲೇಖಿಸಿದ್ದಾರೆ. ಆ ಮೂಲಕ ನಿರ್ದಿಷ್ಟ ಸಮುದಾಯವನ್ನು ಬಲಿಪಶುಗಳಾಗಿ ಚಿತ್ರಿಸಿ ಜನರನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸ್ಟಾಲ್ ಅನ್ನು ಎಪಿಸಿಆರ್ ವತಿಯಿಂದ ಹಾಕಲಾಗಿದ್ದು ವಿಡಿಯೋದಲ್ಲಿ ಮಾತನಾಡುತ್ತಿರುವ ವ್ಯಕ್ತಿ ಖಾನ್ ಎಂದು ಪೊಲೀಸರು ಆರೋಪಿಸಿದ್ದಾರೆ.

ಜಾಮೀನು ನೀಡುವಾಗ ಹೈಕೋರ್ಟ್, “ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿದ್ದೇವೆ. ನಮ್ಮ ರಾಷ್ಟ್ರದ ಸೌಹಾರ್ದತೆ ಅಷ್ಟೊಂದು ದುರ್ಬಲವಾಗಿಲ್ಲ. ಇದು ಕೇವಲ ಒಂದು ಪ್ರದರ್ಶನ, ಕೇವಲ ಯಾರಾದರೂ ಕೂಗಿದ ಕೂಡಲೆ ಸೌಹಾರ್ದ ಕೆಡುವುದಿಲ್ಲ. ಜನರನ್ನು ಬುದ್ದಿವಂತರೆಂದು ಪರಿಗಣಿಸಿ… ಸಾಮಾನ್ಯ ಮನುಷ್ಯರು ಅಷ್ಟು ದುರ್ಬಲನಲ್ಲ…” ಎಂದು ಹೇಳಿದೆ.

“ದೇಶವು ನಮ್ಮ ಮೂಲಭೂತ ಹಕ್ಕುಗಳ ಬಗ್ಗೆ ಬಹಳ ಹೆಮ್ಮೆಪಡುತ್ತದೆ. ಆರ್ಟಿಕಲ್ 19 (1) (ಎ) ಅನ್ನು ರಕ್ಷಿಸಬೇಕು. ಇದರಿಂದ ಒಬ್ಬ ಸಾಮಾನ್ಯ ವ್ಯಕ್ತಿ ಪ್ರಚೋದನೆಗೆ ಒಳಗಾಗುತ್ತಾನೆ ಎಂದು ನೀವು ಭಾವಿಸಿದರೆ, ಸಾಮಾನ್ಯ ಮನುಷ್ಯನಿಗೆ ಏನೆಂದು ಅರ್ಥಮಾಡಿಕೊಳ್ಳುವ ಐಕ್ಯೂ ಇಲ್ಲ ಎಂದರ್ಥ. ಅವರಿಗೆ ಇದು ಸರಿ… ನಾವು ಬುದ್ದಿವಂತರು ದಯವಿಟ್ಟು ಸಾಮಾನ್ಯರ ಮೇಲೆ ಸ್ವಲ್ಪ ನಂಬಿಕೆ ಇಡಿ.” ಎಂದು ಕೋರ್ಟ್ ಹೇಳಿದೆ.

ನದೀಂ ಖಾನ್ ಅವರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್, ವಕೀಲರಾದ ತಾರಾ ನರುಲಾ, ತಮನ್ನಾ ಪಂಕಜ್, ಶಿವಂಗಿ ಶರ್ಮಾ, ಅಹ್ಮದ್ ಇಬ್ರಾಹಿಂ ಮತ್ತು ರೂಪಾಲಿ ಸ್ಯಾಮ್ಯುಯೆಲ್ ಪ್ರತಿನಿಧಿಸಿದರು. ಮುಂದಿನ ಶುಕ್ರವಾರದಂದು ನ್ಯಾಯಾಲಯವು ಈ ಪ್ರಕರಣದ ವಿಚಾರಣೆಗೆ ಸಿದ್ಧವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...