Homeಮುಖಪುಟ'ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ' | ಹೋರಾಟಗಾರ ನದೀಮ್ ಖಾನ್‌ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ...

‘ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ’ | ಹೋರಾಟಗಾರ ನದೀಮ್ ಖಾನ್‌ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ ಪೊಲೀಸರಿಗೆ ಹೈಕೋರ್ಟ್ ತಪರಾಕಿ

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ ನದೀಮ್ ಖಾನ್‌ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಬಂಧನದಿಂದ ಮಧ್ಯಂತರ ಜಾಮೀನು ನೀಡಿದ್ದು, ಈ ವೇಳೆ ದೆಹಲಿ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅವರ ಭಾಷಣವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು, ‘ದ್ವೇಷಕ್ಕೆ ಉತ್ತೇಜನ ಮತ್ತು ಕ್ರಿಮಿನಲ್ ಪಿತೂರಿ’ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ರಾಷ್ಟ್ರದ ಸೌಹಾರ್ಧತೆ ಅಷ್ಟೊಂದು ದುರ್ಬಲವಾಗಿಲ್ಲ ಎಂದು ಹೇಳಿದೆ. 

ನಾಗರಿಕ ಹಕ್ಕುಗಳ ರಕ್ಷಣೆ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಂ ಖಾನ್‌ ಅವರನ್ನು ಶುಕ್ರವಾರದವರೆಗೆ ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಿ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಆದರೆ, ನಾಳೆ ವಿಚಾರಣೆಗೆ ಹಾಜರಾಗುವಂತೆ ಮತ್ತು ತನಿಖೆಗೆ ಸಹಕರಿಸುವಂತೆ ನದೀಂ ಖಾನ್‌ಗೆ ಕೋರ್ಟ್ ಸೂಚಿಸಿದೆ. ಹೋರಾಟಗಾರ ನದೀಮ್ ಖಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತನಿಖಾಧಿಕಾರಿಗಳ ಅನುಮತಿಯಿಲ್ಲದೆ ದೆಹಲಿಯನ್ನು ತೊರೆಯದಂತೆ ಅವರಿಗೆ ನಿರ್ದೇಶನ ನೀಡಲಾಗಿದ್ದು, ಜೊತೆಗೆ ನದೀಂ ಖಾನ್‌ ಮತ್ತು ಎಪಿಸಿಆರ್ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ನೋಟಿಸ್ ಜಾರಿ ಮಾಡಿದ್ದಾರೆ. ದೆಹಲಿ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ನದೀಂ ಖಾನ್ ಕೋರಿದ್ದರು.

ದೆಹಲಿ ಪೊಲೀಸರ ಎಫ್ಐಆರ್‌ ಪ್ರಕಾರ, ನವೆಂಬರ್ 21ರಂದು “ರೆಕಾರ್ಡ್ಸ್ ಆಫ್ ಹಿಂದೂಸ್ತಾನ್ ಇನ್ ಮೋದಿ ಸರ್ಕಾರ್” ಎಂಬ ಶೀರ್ಷಿಕೆಯ ವಿಡಿಯೋವನ್ನು ಯೂಟ್ಯೂಬ್‌ ನಲ್ಲಿ ಪೋಸ್ಟ್ ಮಾಡಲಾಗಿತ್ತು. ವಸ್ತು ಪ್ರದರ್ಶನದಲ್ಲಿ ಸ್ಟಾಲ್ ಹಾಕಿದ್ದ ವ್ಯಕ್ತಿಯೊಬ್ಬರು ಬ್ಯಾನರ್‌ನತ್ತ ಸನ್ನೆ ಮಾಡುತ್ತಿದ್ದುದನ್ನು ಈ ವಿಡಿಯೋ ತೋರಿಸಿದೆ.

ಈ ವಿಡಿಯೋದಲ್ಲಿ ನದೀಮ್ ಅವರು, ಅಖ್ಲಾಕ್, ರೋಹಿತ್ ವೇಮುಲಾ, ಪೆಹ್ಲು ಖಾನ್ ಅವರ ಬಗ್ಗೆ ಮಾತನಾಡುತ್ತಿದ್ದರು ಮತ್ತು 2020ರ ಶಾಹೀನ್ ಬಾಗ್ ಪ್ರತಿಭಟನೆಗಳು, ದೆಹಲಿ ಗಲಭೆಗಳನ್ನು ಇಲ್ಲಿ ಉಲ್ಲೇಖಿಸಿದ್ದಾರೆ. ಆ ಮೂಲಕ ನಿರ್ದಿಷ್ಟ ಸಮುದಾಯವನ್ನು ಬಲಿಪಶುಗಳಾಗಿ ಚಿತ್ರಿಸಿ ಜನರನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸ್ಟಾಲ್ ಅನ್ನು ಎಪಿಸಿಆರ್ ವತಿಯಿಂದ ಹಾಕಲಾಗಿದ್ದು ವಿಡಿಯೋದಲ್ಲಿ ಮಾತನಾಡುತ್ತಿರುವ ವ್ಯಕ್ತಿ ಖಾನ್ ಎಂದು ಪೊಲೀಸರು ಆರೋಪಿಸಿದ್ದಾರೆ.

ಜಾಮೀನು ನೀಡುವಾಗ ಹೈಕೋರ್ಟ್, “ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿದ್ದೇವೆ. ನಮ್ಮ ರಾಷ್ಟ್ರದ ಸೌಹಾರ್ದತೆ ಅಷ್ಟೊಂದು ದುರ್ಬಲವಾಗಿಲ್ಲ. ಇದು ಕೇವಲ ಒಂದು ಪ್ರದರ್ಶನ, ಕೇವಲ ಯಾರಾದರೂ ಕೂಗಿದ ಕೂಡಲೆ ಸೌಹಾರ್ದ ಕೆಡುವುದಿಲ್ಲ. ಜನರನ್ನು ಬುದ್ದಿವಂತರೆಂದು ಪರಿಗಣಿಸಿ… ಸಾಮಾನ್ಯ ಮನುಷ್ಯರು ಅಷ್ಟು ದುರ್ಬಲನಲ್ಲ…” ಎಂದು ಹೇಳಿದೆ.

“ದೇಶವು ನಮ್ಮ ಮೂಲಭೂತ ಹಕ್ಕುಗಳ ಬಗ್ಗೆ ಬಹಳ ಹೆಮ್ಮೆಪಡುತ್ತದೆ. ಆರ್ಟಿಕಲ್ 19 (1) (ಎ) ಅನ್ನು ರಕ್ಷಿಸಬೇಕು. ಇದರಿಂದ ಒಬ್ಬ ಸಾಮಾನ್ಯ ವ್ಯಕ್ತಿ ಪ್ರಚೋದನೆಗೆ ಒಳಗಾಗುತ್ತಾನೆ ಎಂದು ನೀವು ಭಾವಿಸಿದರೆ, ಸಾಮಾನ್ಯ ಮನುಷ್ಯನಿಗೆ ಏನೆಂದು ಅರ್ಥಮಾಡಿಕೊಳ್ಳುವ ಐಕ್ಯೂ ಇಲ್ಲ ಎಂದರ್ಥ. ಅವರಿಗೆ ಇದು ಸರಿ… ನಾವು ಬುದ್ದಿವಂತರು ದಯವಿಟ್ಟು ಸಾಮಾನ್ಯರ ಮೇಲೆ ಸ್ವಲ್ಪ ನಂಬಿಕೆ ಇಡಿ.” ಎಂದು ಕೋರ್ಟ್ ಹೇಳಿದೆ.

ನದೀಂ ಖಾನ್ ಅವರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್, ವಕೀಲರಾದ ತಾರಾ ನರುಲಾ, ತಮನ್ನಾ ಪಂಕಜ್, ಶಿವಂಗಿ ಶರ್ಮಾ, ಅಹ್ಮದ್ ಇಬ್ರಾಹಿಂ ಮತ್ತು ರೂಪಾಲಿ ಸ್ಯಾಮ್ಯುಯೆಲ್ ಪ್ರತಿನಿಧಿಸಿದರು. ಮುಂದಿನ ಶುಕ್ರವಾರದಂದು ನ್ಯಾಯಾಲಯವು ಈ ಪ್ರಕರಣದ ವಿಚಾರಣೆಗೆ ಸಿದ್ಧವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...