Homeಮುಖಪುಟಹಾರೋಹಳ್ಳಿ: ಒಂದೇ ವೇದಿಕೆಯಲ್ಲಿ ಅಶ್ವಥ್ ನಾರಾಯಣ್, ಅನಿತಾ ಕುಮಾರಸ್ವಾಮಿ ಜಟಾಪಟಿ

ಹಾರೋಹಳ್ಳಿ: ಒಂದೇ ವೇದಿಕೆಯಲ್ಲಿ ಅಶ್ವಥ್ ನಾರಾಯಣ್, ಅನಿತಾ ಕುಮಾರಸ್ವಾಮಿ ಜಟಾಪಟಿ

- Advertisement -
- Advertisement -

ರಾಮನಗರ ಜಿಲ್ಲೆಯ ಹಾರೋಹಳ್ಳಿ‌ ನೂತನ ತಾಲೂಕು ಉದ್ಘಾಟನೆ ಸಮಾರಂಭದ ವೇದಿಕೆಯಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತು ಸಚಿವ ಅಶ್ವಥ್ ನಾರಾಯಣ್ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದ ಘಟನೆ ಜರುಗಿದೆ. ಅಲ್ಲದೆ ಹಾರೋಹಳ್ಳಿ ಅಭಿವೃದ್ದಿಗೆ ಎಷ್ಟು ಹಣ ನೀಡಿದ್ದೀರಿ ದಾಖಲೆ ತೋರಿಸಿ ಎಂಬ ಕಾರ್ಯಕರ್ತರ ಪ್ರಶ್ನೆಗೆ ಸಚಿವರು ಉತ್ತರಿಸದೇ ಹೊರನಡೆದ ಪ್ರಸಂಗ ನಡೆದಿದೆ.

“ಬಿಜೆಪಿ ಸರ್ಕಾರವು ರಾಮನಗರ ಜಿಲ್ಲೆಯ ಅಭಿವೃದ್ದಿಗೆ ಸಾಕಷ್ಟು ಶ್ರಮಿಸಿರುವುದರಿಂದ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕೇವಲ ತಾಲೂಕು ರಚನೆಗೆ ತಾತ್ವಿಕ ಅನುಮೋದನೆ ಸಿಕಿತ್ತು. ಆದರೆ ಇದಕ್ಕೆ ಅಂತಿಮ ಅನುಮೊದನೆ ಹೊರಡಿಸಿದ್ದು ಬಿಜೆಪಿ ನೇತೃತ್ವದ ಸರ್ಕಾರ. ರಾಮನಗರ ಜಿಲ್ಲೆಗೆ ಸಂಬಂಧಿಸಿದ ಹಲವು ಹುದ್ದೆಗಳ ನೇಮಕಾತಿ ಕೂಡ ನಮ್ಮ ಸರ್ಕಾರದ ಅವಧಿಯಲ್ಲಿ ‌ಮಾಡಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿವಿ ಹಾಗೂ ಮೆಡಿಕಲ್ ಕಾಲೇಜು ಕಾಮಗಾರಿಗಳನ್ನು ಕೂಡ ಶೀಘ್ರವೇ ಆರಂಭಿಸಿ, ಮುಖ್ಯಮಂತ್ರಿಗಳ ಮೂಲಕ ಶಂಕುಸ್ಥಾಪನೆ ಮಾಡಲಾಗುತ್ತದೆ” ಎಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅನಿತಾ ಕುಮಾರಸ್ವಾಮಿಯವರು “ಹಾರೋಹಳ್ಳಿಯ ತಾಲೂಕು ರಚನೆಗೆ ಶ್ರಮಿಸಿದ್ದು ನಾನು. ಕುಮಾರಸ್ವಾಮಿ ಈ ಭಾಗದ ಶಾಸಕರಾದ ಮೇಲೆ ಈ ಕ್ಷೇತ್ರವು ಅಭಿವೃದ್ಧಿ ಆಗಿರುವುದನ್ನು ಎಲ್ಲರೂ ನೋಡಿದ್ದಾರೆ. ರಾಮನಗರಕ್ಕೆ 450 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಕೊಟ್ಟಿರುವುದಾಗಿ ಉಸ್ತುವಾರಿ ಸಚಿವರು ಹೇಳುತ್ತಾರೆ. ಆದರೆ, ಇದು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಆಗಿತ್ತು. ನೀರಿನ ಯೋಜನೆ ಬರುವಂತೆ ಮಾಡಿದ್ದೆ ಕುಮಾರಸ್ವಾಮಿ. ನನಗೆ ಸಚಿವರಂತೆ ಸುಳ್ಳು ಹೇಳಲು ಬರುವುದಿಲ್ಲ” ಎಂದು ಹಲವು ದಾಖಲೆಗಳನ್ನು ಪ್ರದರ್ಶಿಸಿದ್ದಾರೆ.

“ಈ ಕಾರ್ಯಕ್ರಮಕ್ಕೆ ನನ್ನನ್ನು ಕಾಟಾಚಾರಕ್ಕೆ ಕರೆದು ನಾನು ಬರುವ ಮೊದಲೇ ಟೇಪ್ ಕತ್ತರಿಸಿ ಎಲ್ಲಾ ಮುಗಿದುಹೋಗಿದೆ. ಇದು ನನಗೆ ಮುಂಚೆನೇ ಗೊತ್ತಿತ್ತು. ಆದರೂ ನಮ್ಮ ಜನತೆಗಾಗಿ ನಾನು ಬಂದಿದ್ದೇನೆ. ಈ ತಾಲೂಕು ಆಗಬೇಕಾದರೆ ನನ್ನ ಶ್ರಮಿ ಇದೆ. ಕುಮಾರಸ್ವಾಮಿಯವರ ಕಾಲದಲ್ಲಿ ಅಧಿಸೂಚನೆಯಾಗಿದೆ. ಆನಂತರ ನಾನು ಫಾಲೋ ಅಪ್ ಮಾಡಿ ಸದನದಲ್ಲಿ ಅಶೋಕ್‌ರವರಿಗೆ ಪ್ರಶ್ನೆ ಕೇಳಿದ್ದೆ. ಆನಂತರ ಕಂದಾಯ ಇಲಾಖೆ, ಎಷ್ಟು ಹುದ್ದೆ ಬೇಕು ಎಂದು ಜಿಲ್ಲಾಧಿಕಾರಿಗಳಿಂದ ಪತ್ರ ಸೇರಿ ಎಲ್ಲಾ ಫಾಲೋಅಪ್ ಮಾಡಿದ್ದೇನೆ. ಆ ದಾಖಲೆಗಳನ್ನು ತಂದಿದ್ದೇನೆ ನೋಡಿ” ಎಂದಿದ್ದಾರೆ.

ಇನ್ನು ಸಚಿವ ಅಶ್ವಥನಾರಾಯಣರವರು ಮಾತನಾಡುತ್ತಿದ್ದಾಗ ಮಧ್ಯ ಪ್ರವೇಶಿಸಿದ ದಲಿತ ಸಂಘಟನೆಯ ಕಾರ್ಯಕರ್ತರೊಬ್ಬರು, ಹಾರೋಹಳ್ಳಿ ತಾಲ್ಲೂಕಿಗೆ ಎಷ್ಟು ಅನುದಾನ ಮೀಸಲಿಟ್ಟಿದ್ದೀರಿ ಎಂದು ಪ್ರಶ್ನಿಸಿದರು. ಮತ್ತೊಬ್ಬರು ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರು ಒಳಮೀಸಲಾತಿ ಹೋರಾಟಕ್ಕೆ ಸಿಎಂ ಅನ್ನು ಕರೆದುಕೊಂಡು ಹೋಗಿ ಸಮಸ್ಯೆ ಆಲಿಸಿ ಎಂದು ಸಲಹೆ ನೀಡಿದರು. ಆದರೆ ಸಚಿವರು ಯಾವುದಕ್ಕೂ ಉತ್ತರಿಸಿದೆ ಸಭೆಯಿಂದ ಹೊರನಡೆದರು.

ಇದನ್ನೂ ಓದಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸಮೀಕ್ಷೆ: ಎಚ್.ಡಿ ಕುಮಾರಸ್ವಾಮಿ V/S ಸಿ.ಪಿ ಯೋಗಿಶ್ವರ್ ನಡುವೆ ಗೆಲುವು ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...