Homeಮುಖಪುಟಹಾರೋಹಳ್ಳಿ: ಒಂದೇ ವೇದಿಕೆಯಲ್ಲಿ ಅಶ್ವಥ್ ನಾರಾಯಣ್, ಅನಿತಾ ಕುಮಾರಸ್ವಾಮಿ ಜಟಾಪಟಿ

ಹಾರೋಹಳ್ಳಿ: ಒಂದೇ ವೇದಿಕೆಯಲ್ಲಿ ಅಶ್ವಥ್ ನಾರಾಯಣ್, ಅನಿತಾ ಕುಮಾರಸ್ವಾಮಿ ಜಟಾಪಟಿ

- Advertisement -
- Advertisement -

ರಾಮನಗರ ಜಿಲ್ಲೆಯ ಹಾರೋಹಳ್ಳಿ‌ ನೂತನ ತಾಲೂಕು ಉದ್ಘಾಟನೆ ಸಮಾರಂಭದ ವೇದಿಕೆಯಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತು ಸಚಿವ ಅಶ್ವಥ್ ನಾರಾಯಣ್ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದ ಘಟನೆ ಜರುಗಿದೆ. ಅಲ್ಲದೆ ಹಾರೋಹಳ್ಳಿ ಅಭಿವೃದ್ದಿಗೆ ಎಷ್ಟು ಹಣ ನೀಡಿದ್ದೀರಿ ದಾಖಲೆ ತೋರಿಸಿ ಎಂಬ ಕಾರ್ಯಕರ್ತರ ಪ್ರಶ್ನೆಗೆ ಸಚಿವರು ಉತ್ತರಿಸದೇ ಹೊರನಡೆದ ಪ್ರಸಂಗ ನಡೆದಿದೆ.

“ಬಿಜೆಪಿ ಸರ್ಕಾರವು ರಾಮನಗರ ಜಿಲ್ಲೆಯ ಅಭಿವೃದ್ದಿಗೆ ಸಾಕಷ್ಟು ಶ್ರಮಿಸಿರುವುದರಿಂದ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕೇವಲ ತಾಲೂಕು ರಚನೆಗೆ ತಾತ್ವಿಕ ಅನುಮೋದನೆ ಸಿಕಿತ್ತು. ಆದರೆ ಇದಕ್ಕೆ ಅಂತಿಮ ಅನುಮೊದನೆ ಹೊರಡಿಸಿದ್ದು ಬಿಜೆಪಿ ನೇತೃತ್ವದ ಸರ್ಕಾರ. ರಾಮನಗರ ಜಿಲ್ಲೆಗೆ ಸಂಬಂಧಿಸಿದ ಹಲವು ಹುದ್ದೆಗಳ ನೇಮಕಾತಿ ಕೂಡ ನಮ್ಮ ಸರ್ಕಾರದ ಅವಧಿಯಲ್ಲಿ ‌ಮಾಡಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿವಿ ಹಾಗೂ ಮೆಡಿಕಲ್ ಕಾಲೇಜು ಕಾಮಗಾರಿಗಳನ್ನು ಕೂಡ ಶೀಘ್ರವೇ ಆರಂಭಿಸಿ, ಮುಖ್ಯಮಂತ್ರಿಗಳ ಮೂಲಕ ಶಂಕುಸ್ಥಾಪನೆ ಮಾಡಲಾಗುತ್ತದೆ” ಎಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅನಿತಾ ಕುಮಾರಸ್ವಾಮಿಯವರು “ಹಾರೋಹಳ್ಳಿಯ ತಾಲೂಕು ರಚನೆಗೆ ಶ್ರಮಿಸಿದ್ದು ನಾನು. ಕುಮಾರಸ್ವಾಮಿ ಈ ಭಾಗದ ಶಾಸಕರಾದ ಮೇಲೆ ಈ ಕ್ಷೇತ್ರವು ಅಭಿವೃದ್ಧಿ ಆಗಿರುವುದನ್ನು ಎಲ್ಲರೂ ನೋಡಿದ್ದಾರೆ. ರಾಮನಗರಕ್ಕೆ 450 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಕೊಟ್ಟಿರುವುದಾಗಿ ಉಸ್ತುವಾರಿ ಸಚಿವರು ಹೇಳುತ್ತಾರೆ. ಆದರೆ, ಇದು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಆಗಿತ್ತು. ನೀರಿನ ಯೋಜನೆ ಬರುವಂತೆ ಮಾಡಿದ್ದೆ ಕುಮಾರಸ್ವಾಮಿ. ನನಗೆ ಸಚಿವರಂತೆ ಸುಳ್ಳು ಹೇಳಲು ಬರುವುದಿಲ್ಲ” ಎಂದು ಹಲವು ದಾಖಲೆಗಳನ್ನು ಪ್ರದರ್ಶಿಸಿದ್ದಾರೆ.

“ಈ ಕಾರ್ಯಕ್ರಮಕ್ಕೆ ನನ್ನನ್ನು ಕಾಟಾಚಾರಕ್ಕೆ ಕರೆದು ನಾನು ಬರುವ ಮೊದಲೇ ಟೇಪ್ ಕತ್ತರಿಸಿ ಎಲ್ಲಾ ಮುಗಿದುಹೋಗಿದೆ. ಇದು ನನಗೆ ಮುಂಚೆನೇ ಗೊತ್ತಿತ್ತು. ಆದರೂ ನಮ್ಮ ಜನತೆಗಾಗಿ ನಾನು ಬಂದಿದ್ದೇನೆ. ಈ ತಾಲೂಕು ಆಗಬೇಕಾದರೆ ನನ್ನ ಶ್ರಮಿ ಇದೆ. ಕುಮಾರಸ್ವಾಮಿಯವರ ಕಾಲದಲ್ಲಿ ಅಧಿಸೂಚನೆಯಾಗಿದೆ. ಆನಂತರ ನಾನು ಫಾಲೋ ಅಪ್ ಮಾಡಿ ಸದನದಲ್ಲಿ ಅಶೋಕ್‌ರವರಿಗೆ ಪ್ರಶ್ನೆ ಕೇಳಿದ್ದೆ. ಆನಂತರ ಕಂದಾಯ ಇಲಾಖೆ, ಎಷ್ಟು ಹುದ್ದೆ ಬೇಕು ಎಂದು ಜಿಲ್ಲಾಧಿಕಾರಿಗಳಿಂದ ಪತ್ರ ಸೇರಿ ಎಲ್ಲಾ ಫಾಲೋಅಪ್ ಮಾಡಿದ್ದೇನೆ. ಆ ದಾಖಲೆಗಳನ್ನು ತಂದಿದ್ದೇನೆ ನೋಡಿ” ಎಂದಿದ್ದಾರೆ.

ಇನ್ನು ಸಚಿವ ಅಶ್ವಥನಾರಾಯಣರವರು ಮಾತನಾಡುತ್ತಿದ್ದಾಗ ಮಧ್ಯ ಪ್ರವೇಶಿಸಿದ ದಲಿತ ಸಂಘಟನೆಯ ಕಾರ್ಯಕರ್ತರೊಬ್ಬರು, ಹಾರೋಹಳ್ಳಿ ತಾಲ್ಲೂಕಿಗೆ ಎಷ್ಟು ಅನುದಾನ ಮೀಸಲಿಟ್ಟಿದ್ದೀರಿ ಎಂದು ಪ್ರಶ್ನಿಸಿದರು. ಮತ್ತೊಬ್ಬರು ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರು ಒಳಮೀಸಲಾತಿ ಹೋರಾಟಕ್ಕೆ ಸಿಎಂ ಅನ್ನು ಕರೆದುಕೊಂಡು ಹೋಗಿ ಸಮಸ್ಯೆ ಆಲಿಸಿ ಎಂದು ಸಲಹೆ ನೀಡಿದರು. ಆದರೆ ಸಚಿವರು ಯಾವುದಕ್ಕೂ ಉತ್ತರಿಸಿದೆ ಸಭೆಯಿಂದ ಹೊರನಡೆದರು.

ಇದನ್ನೂ ಓದಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸಮೀಕ್ಷೆ: ಎಚ್.ಡಿ ಕುಮಾರಸ್ವಾಮಿ V/S ಸಿ.ಪಿ ಯೋಗಿಶ್ವರ್ ನಡುವೆ ಗೆಲುವು ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...