Homeಕರ್ನಾಟಕಹಾರೋಹಳ್ಳಿ ಶ್ರೀರಾಮ ಪೂಜೆ; ಸಂಸದ ಪ್ರತಾಪ್ ಸಿಂಹಗೆ ದಲಿತ ಮುಖಂಡರಿಂದ ಘೇರಾವ್

ಹಾರೋಹಳ್ಳಿ ಶ್ರೀರಾಮ ಪೂಜೆ; ಸಂಸದ ಪ್ರತಾಪ್ ಸಿಂಹಗೆ ದಲಿತ ಮುಖಂಡರಿಂದ ಘೇರಾವ್

- Advertisement -
- Advertisement -

ಅಯೋಧ್ಯೆ ರಾಮನ ವಿಗ್ರಹ ಕೆತ್ತನೆಗೆ ಕಪ್ಪು ಶಿಲೆ ಸಿಕ್ಕ ಸ್ಥಳದಲ್ಲಿ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತ ಸಂಘಟನೆ ಮುಖಂಡರು ಘೇರಾವ್ ಹಾಕಿ, ಪೂಜೆಗೆ ಅವಕಾಶ ನೀಡದೆ ವಾಪಸ್ ಕಳುಹಿಸಿದ ಘಟನೆ ಮೈಸೂರಿನ ಹಾರೋಹಳ್ಳಿಯಲ್ಲಿ ಇಂದು ನಡೆದಿದೆ.

ಮೈಸೂರಿನ ಶಿಲ್ಪಿ ಕೆತ್ತನೆ ಮಾಡಿರುವ, ಉತ್ತರ ಪ್ರದೇಶದ ಆಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾ ಮೂರ್ತಿಯ ಕಪ್ಪು ಶಿಲೆ ಕಲ್ಲು ಹಾರೋಹಳ್ಳಿ ಬಳಿಯ ಗಯಜ್ಜೇಗೌಡನಪುರದ ದಲಿತ ಸಮುದಾಯದ ರಾಮದಾಸ್ ಅವರ ಜಮೀನಿನಲ್ಲಿ ಸಿಕ್ಕಿತ್ತು. ಈ ವಿಚಾರ ಬೆಳಕಿಗೆ ಬಂದ ನಂತರ, ‘ಇಲ್ಲಿ ರಾಮಮಂದಿರ ನಿರ್ಮಾಣ ಮಾಡಲಾಗುವುದು’ ಎಂದು ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆ ಭೂಮಿಪೂಜೆ ನಿಗದಿಪಡಿಸಲಾಗಿತ್ತು.

ಪೂಜಾ ಸ್ಥಳಕ್ಕೆ ಸಂಸದ ಪ್ರತಾಪ್ ಸಿಂಹ ಆಗಮಿಸುತ್ತಿದ್ದಂತೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತ ಸಂಘಟನೆಗಳ ಮುಖಂಡರು ಜಮೀನಿಗೆ ಪ್ರವೇಶ ನೀಡದೆ ಘೇರಾವ್ ಹಾಕಿದರು. ‘ಗೋ ಬ್ಯಾಕ್ ಪ್ರತಾಪ್ ಸಿಂಹ’, ‘ದಲಿತ ವಿರೋಧಿ ಪ್ರತಾಪ್ ಸಿಂಹನಿಗೆ ಧಿಕ್ಕಾರ’.. ಇತ್ಯಾದಿ ಘೋಷಣೆಗಳನ್ನು ಕೂಗಿದರು.

ಇದರಿಂದ ಮುಜುಗರಕ್ಕೆ ಒಳಗಾದ ಪ್ರತಾಪ್ ಸಿಂಹ, ಜನರಿಗೆ ಸಮಜಾಯಿಷಿ ನೀಡಲು ಮುಂದಾದರು. ಆದರೆ, ಗ್ರಾಮಸ್ಥರು ಮಾತ್ರ ಅವರ ಮಾತುಕೇಳಲು ಸಿದ್ಧವಿರಲಿಲ್ಲ. ‘ಇಲ್ಲಿಗೆ ನೀವು ಬರುವುದು ಬೇಡ, ಇಲ್ಲಿಂದ ಜಾಗ ಖಾಲಿ ಮಾಡಿ’ ಎಂದು ನಿಷ್ಠೂರವಾಗಿ ಹೇಳಿದರು.

‘ನೀವೊಬ್ಬ (ಪ್ರತಾಪ್ ಸಿಂಹ) ದಲಿತ ವಿರೋಧಿ. ನಿಮ್ಮ ನಡವಳಿಕೆಯಿಂದ ದಲಿತರ ಭಾವನೆಗೆ ಧಕ್ಕೆಯುಂಟಾಗಿದೆ. ಮಹಿಷ ದಸರಾ ಆಚರಣೆ ಸಂದರ್ಭದಲ್ಲಿ ದಲಿತರನ್ನು ತುಳಿದು ಹಾಕಿ ಬಿಡುತ್ತೇನೆ, ಹೊಸಕಿ ಹಾಕಿ ಬಿಡುತ್ತೇನೆ ಎಂದು ಬೆದರಿಸಿದ್ದ ನೀವು ದಲಿತರ ಜಮೀನಿಗೆ ಏಕೆ ಬರುತ್ತೀರಿ? ಇಲ್ಲಿಂದ ಹೊರಡಿ’ ಎಂದು ಮಾಜಿ ತಾಪಂ ಸದಸ್ಯರಾದ ಹಾರೋಹಳ್ಳಿ ಸುರೇಶ್ ಆಕ್ರೋಶ ಹೊರಹಾಕಿದರು.

‘ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ದಲಿತ ವಿರೋಧಿಯಲ್ಲ’ ಎಂದ ಸಂಸದ ಪ್ರತಾಪ್ ಸಿಂಹ, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ಮಾಡಿದರು. ಆದರೆ, ಸಂಸದರ ಯಾವ ಮಾತಿಗೂ ಸಮಾಧಾನಗೊಳ್ಳದ ಗ್ರಾಮಸ್ಥರು, ‘ನೀವು ಏನು ಹೇಳುವುದು ಬೇಡ, ಇಲ್ಲಿಂದ ವಾಪಸ್ ಹೋಗಿ’ ಎಂದು ಪಟ್ಟು ಹಿಡಿದರು.

ಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮಾಜಿ ಸಚಿವ ಸಾ.ರಾ.ಮಹೇಶ್ ಗ್ರಾಮಸ್ಥರ ಮನವೊಲಿಸಲು ಪ್ರಯತ್ನ ನಡೆಸಿದರು. ಗ್ರಾಮಸ್ಥರು ಮಾತು ಕೇಳಿದಿದ್ದಾಗ, ಸಂಸದ ಪ್ರತಾಪ್ ಸಿಂಹ ಅವರನ್ನೇ ಅಲ್ಲಿಂದ ವಾಪಸ್ ಹೋಗುವಂತೆ ಶಾಸಕರು ಮನವಿ ಮಾಡಿದರು. ಇದರಿಂದ ಬೇಸರಗೊಂಡ ಸಂಸದ ಪ್ರತಾಪ್ ಸಿಂಹ ಅಲ್ಲಿಂದ ಹೊರಟರು. ಆ ಬಳಿಕ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು.

ಇದನ್ನೂ ಓದಿ; ರೈಡ್ ರದ್ದುಗೊಳಿಸಿದ ಮಹಿಳೆಯ ಮೇಲೆ ಹಲ್ಲೆ; ಆಟೋ ಚಾಲಕನನ್ನು ಬಂಧಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...