Homeಕರ್ನಾಟಕಹಾರೋಹಳ್ಳಿ ಶ್ರೀರಾಮ ಪೂಜೆ; ಸಂಸದ ಪ್ರತಾಪ್ ಸಿಂಹಗೆ ದಲಿತ ಮುಖಂಡರಿಂದ ಘೇರಾವ್

ಹಾರೋಹಳ್ಳಿ ಶ್ರೀರಾಮ ಪೂಜೆ; ಸಂಸದ ಪ್ರತಾಪ್ ಸಿಂಹಗೆ ದಲಿತ ಮುಖಂಡರಿಂದ ಘೇರಾವ್

- Advertisement -
- Advertisement -

ಅಯೋಧ್ಯೆ ರಾಮನ ವಿಗ್ರಹ ಕೆತ್ತನೆಗೆ ಕಪ್ಪು ಶಿಲೆ ಸಿಕ್ಕ ಸ್ಥಳದಲ್ಲಿ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತ ಸಂಘಟನೆ ಮುಖಂಡರು ಘೇರಾವ್ ಹಾಕಿ, ಪೂಜೆಗೆ ಅವಕಾಶ ನೀಡದೆ ವಾಪಸ್ ಕಳುಹಿಸಿದ ಘಟನೆ ಮೈಸೂರಿನ ಹಾರೋಹಳ್ಳಿಯಲ್ಲಿ ಇಂದು ನಡೆದಿದೆ.

ಮೈಸೂರಿನ ಶಿಲ್ಪಿ ಕೆತ್ತನೆ ಮಾಡಿರುವ, ಉತ್ತರ ಪ್ರದೇಶದ ಆಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾ ಮೂರ್ತಿಯ ಕಪ್ಪು ಶಿಲೆ ಕಲ್ಲು ಹಾರೋಹಳ್ಳಿ ಬಳಿಯ ಗಯಜ್ಜೇಗೌಡನಪುರದ ದಲಿತ ಸಮುದಾಯದ ರಾಮದಾಸ್ ಅವರ ಜಮೀನಿನಲ್ಲಿ ಸಿಕ್ಕಿತ್ತು. ಈ ವಿಚಾರ ಬೆಳಕಿಗೆ ಬಂದ ನಂತರ, ‘ಇಲ್ಲಿ ರಾಮಮಂದಿರ ನಿರ್ಮಾಣ ಮಾಡಲಾಗುವುದು’ ಎಂದು ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆ ಭೂಮಿಪೂಜೆ ನಿಗದಿಪಡಿಸಲಾಗಿತ್ತು.

ಪೂಜಾ ಸ್ಥಳಕ್ಕೆ ಸಂಸದ ಪ್ರತಾಪ್ ಸಿಂಹ ಆಗಮಿಸುತ್ತಿದ್ದಂತೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತ ಸಂಘಟನೆಗಳ ಮುಖಂಡರು ಜಮೀನಿಗೆ ಪ್ರವೇಶ ನೀಡದೆ ಘೇರಾವ್ ಹಾಕಿದರು. ‘ಗೋ ಬ್ಯಾಕ್ ಪ್ರತಾಪ್ ಸಿಂಹ’, ‘ದಲಿತ ವಿರೋಧಿ ಪ್ರತಾಪ್ ಸಿಂಹನಿಗೆ ಧಿಕ್ಕಾರ’.. ಇತ್ಯಾದಿ ಘೋಷಣೆಗಳನ್ನು ಕೂಗಿದರು.

ಇದರಿಂದ ಮುಜುಗರಕ್ಕೆ ಒಳಗಾದ ಪ್ರತಾಪ್ ಸಿಂಹ, ಜನರಿಗೆ ಸಮಜಾಯಿಷಿ ನೀಡಲು ಮುಂದಾದರು. ಆದರೆ, ಗ್ರಾಮಸ್ಥರು ಮಾತ್ರ ಅವರ ಮಾತುಕೇಳಲು ಸಿದ್ಧವಿರಲಿಲ್ಲ. ‘ಇಲ್ಲಿಗೆ ನೀವು ಬರುವುದು ಬೇಡ, ಇಲ್ಲಿಂದ ಜಾಗ ಖಾಲಿ ಮಾಡಿ’ ಎಂದು ನಿಷ್ಠೂರವಾಗಿ ಹೇಳಿದರು.

‘ನೀವೊಬ್ಬ (ಪ್ರತಾಪ್ ಸಿಂಹ) ದಲಿತ ವಿರೋಧಿ. ನಿಮ್ಮ ನಡವಳಿಕೆಯಿಂದ ದಲಿತರ ಭಾವನೆಗೆ ಧಕ್ಕೆಯುಂಟಾಗಿದೆ. ಮಹಿಷ ದಸರಾ ಆಚರಣೆ ಸಂದರ್ಭದಲ್ಲಿ ದಲಿತರನ್ನು ತುಳಿದು ಹಾಕಿ ಬಿಡುತ್ತೇನೆ, ಹೊಸಕಿ ಹಾಕಿ ಬಿಡುತ್ತೇನೆ ಎಂದು ಬೆದರಿಸಿದ್ದ ನೀವು ದಲಿತರ ಜಮೀನಿಗೆ ಏಕೆ ಬರುತ್ತೀರಿ? ಇಲ್ಲಿಂದ ಹೊರಡಿ’ ಎಂದು ಮಾಜಿ ತಾಪಂ ಸದಸ್ಯರಾದ ಹಾರೋಹಳ್ಳಿ ಸುರೇಶ್ ಆಕ್ರೋಶ ಹೊರಹಾಕಿದರು.

‘ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ದಲಿತ ವಿರೋಧಿಯಲ್ಲ’ ಎಂದ ಸಂಸದ ಪ್ರತಾಪ್ ಸಿಂಹ, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ಮಾಡಿದರು. ಆದರೆ, ಸಂಸದರ ಯಾವ ಮಾತಿಗೂ ಸಮಾಧಾನಗೊಳ್ಳದ ಗ್ರಾಮಸ್ಥರು, ‘ನೀವು ಏನು ಹೇಳುವುದು ಬೇಡ, ಇಲ್ಲಿಂದ ವಾಪಸ್ ಹೋಗಿ’ ಎಂದು ಪಟ್ಟು ಹಿಡಿದರು.

ಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮಾಜಿ ಸಚಿವ ಸಾ.ರಾ.ಮಹೇಶ್ ಗ್ರಾಮಸ್ಥರ ಮನವೊಲಿಸಲು ಪ್ರಯತ್ನ ನಡೆಸಿದರು. ಗ್ರಾಮಸ್ಥರು ಮಾತು ಕೇಳಿದಿದ್ದಾಗ, ಸಂಸದ ಪ್ರತಾಪ್ ಸಿಂಹ ಅವರನ್ನೇ ಅಲ್ಲಿಂದ ವಾಪಸ್ ಹೋಗುವಂತೆ ಶಾಸಕರು ಮನವಿ ಮಾಡಿದರು. ಇದರಿಂದ ಬೇಸರಗೊಂಡ ಸಂಸದ ಪ್ರತಾಪ್ ಸಿಂಹ ಅಲ್ಲಿಂದ ಹೊರಟರು. ಆ ಬಳಿಕ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು.

ಇದನ್ನೂ ಓದಿ; ರೈಡ್ ರದ್ದುಗೊಳಿಸಿದ ಮಹಿಳೆಯ ಮೇಲೆ ಹಲ್ಲೆ; ಆಟೋ ಚಾಲಕನನ್ನು ಬಂಧಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...