Homeಕರ್ನಾಟಕಹರ್ಷ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಹೆಸರು ಬಹಿರಂಗ

ಹರ್ಷ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಹೆಸರು ಬಹಿರಂಗ

ಹರ್ಷ ಕೊಲೆ ಪ್ರಕರಣದ ಸುತ್ತ ಸರ್ಕಾರ ಎಸಗುತ್ತಿರುವ ಲೋಪದೋಷಗಳ ಕುರಿತು ಚರ್ಚೆ ನಡೆಯುತ್ತಿದೆ.

- Advertisement -
- Advertisement -

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಹಚ್ಚಿದ್ದು, ಇಬ್ಬರ ಹೆಸರನ್ನು ಬಹಿರಂಗಪಡಿಸಿದೆ. ಕೊಲೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಕೊಲೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆಂಬ ಮಾಹಿತಿ ಇದೆ. ಶಿವಮೊಗ್ಗ ಬುದ್ಧನಗರದ ಖಾಸಿಫ್‌ (30), ಜೆಪಿ ನಗರದ ಸೈಯದ್ ನದೀಂ (20) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವರದಿಗಳ ಪ್ರಕಾರ ಐವರನ್ನೂ ವಶಕ್ಕೆ ಪಡೆದಿದ್ದು, ಇಬ್ಬರ ಹೆಸರನ್ನು ಮಾತ್ರ ಬಹಿರಂಗಪಡಿಸಲಾಗಿದೆ.

ವಾತಾವರಣ ತಿಳಿಯಾಗದ ಕಾರಣ ಬುಧವಾರ ಬೆಳಗಿನ ಜಾವ 6 ಗಂಟೆಯತನನ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಡಾ.ಸೆಲ್ಪಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ.

ಮೃತನ ಸಹೋದರಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಡಿಯೊ ವೈರಲ್ ಆಗಿದ್ದು, “ಹಿಂದೂ, ಹಿಂದುತ್ವ ಎಂದಿದ್ದಕ್ಕೆ ನನ್ನ ತಮ್ಮ ಆ ರೀತಿಯಲ್ಲಿ ಬಿದ್ದಿದ್ದಾರೆ. ನನ್ನೆಲ್ಲ ಹಿಂದೂ, ಮುಸ್ಲಿಂ ಸಹೋದರರಿಗೆ ಕೇಳಿಕೊಳ್ಳುತ್ತೇನೆ. ಅಪ್ಪ ಅಮ್ಮನಿಗೆ ಒಳ್ಳೆಯ ಮಕ್ಕಳಾಗಿರಿ, ಇದನ್ನೆಲ್ಲ ಮಾಡಿಕೊಳ್ಳಬೇಡಿ” ಎಂದು ಮನವಿ ಮಾಡಿದ್ದಾರೆ.

ಹಿಂಚಾಚಾರ; ಸರ್ಕಾರದ ನಡೆಗೆ ಖಂಡನೆ

ಶಿವಮೊಗ್ಗದಲ್ಲಿ ನಡೆದಿರುವ ವ್ಯಾಪಕ ಹಿಂಸಾಚಾರಕ್ಕೆ ಸಾರ್ವಜನಿಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಶವವನ್ನು ಮೆರವಣಿಗೆ ಮಾಡಿದ್ದರಿಂದ ಅಹಿತಕರ ಘಟನೆಗಳು ನಡೆದಿವೆ. ಇದಕ್ಕೆ ಸರ್ಕಾರವೇ ಹೊಣೆ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

“ಒಂದು ಪೊಲೀಸ್ ಠಾಣೆಯಲ್ಲಿ ಬಗೆಹರಿಯಬಹುದಾಗಿದ್ದ ಕೇಸನ್ನು ಇಡೀ ಒಂದು ಧರ್ಮಕ್ಕೆ, ರಾಜ್ಯಕ್ಕೆ ಹರಿದು ಹಂಚಿದ ಕೀರ್ತಿ ಈಶ್ವರಪ್ಪ ಮತ್ತು ಅವರ ಪಟಾಲಂಗೆ ಸೇರಬೇಕು..” ಎಂದು ಪತ್ರಕರ್ತ ವಿ.ಆರ್‌.ಕಾರ್ಪೆಂಟರ್‌ ಟೀಕಿಸಿದ್ದಾರೆ.

ಹಿರಿಯ ಪತ್ರಕರ್ತ ಆದಿತ್ಯ ಭಾರದ್ವಾಜ್ ಅವರು ಅಪರಾಧ ವರದಿಗಳ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾ, ಸರ್ಕಾರ ಮಾಡಿರುವ ಎಡವಟ್ಟಿನತ್ತ ಗಮನ ಸೆಳೆದಿದ್ದಾರೆ.

ಆದಿತ್ಯ ಅವರ ಪೋಸ್ಟ್ ಹೀಗಿದೆ:

ಹನ್ನೊಂದು ವರ್ಷಗಳ ನನ್ನ ಕ್ರೈಂ ವರದಿಗಾರಿಕೆಯ ಅನುಭವದಲ್ಲಿ ಹೇಳಬಲ್ಲೆ: ಕೋಮು ಸೂಕ್ಷ್ಮ ಪ್ರದೇಶದಲ್ಲಿ ಗಲಭೆಗೆ ಪ್ರಚೋದನೆ ನೀಡಬಲ್ಲ ಒಂದು ಸಾವು ಸಂಭಿವಿಸಿದರೆ, ಕಾನೂನು ಸುವ್ಯವಸ್ಥೆ ಕಾಪಾಡಲು ತೆಗೆದುಕೊಳ್ಳುವ ಮೊದಲ ಕ್ರಮ ಮೃತದೇಹದ ಮೆರವಣಿಗೆಯನ್ನು ತಡೆಯುವುದು, ಆದಷ್ಟು ಬೇಗ ಜನ ಜಂಗುಳಿ ಇಲ್ಲದೆ ಅಂತ್ಯಸಂಸ್ಕಾರ ನಡೆಸಿಬಿಡುವುದು.

ಆದರೆ ಇವತ್ತು ಗೃಹ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮೃತದೇಹದ ಮೆರವಣಿಗೆ ಮಾಡಲಾಗಿದೆ. ಹಿರಿಯ ಸಚಿವರಾದ ಈಶ್ವರಪ್ಪನವರು, ಮತ್ತು ಶಿವಮೊಗ್ಗದ ಸಂಸದರಾದ ರಾಘವೇಂದ್ರ ಅವರೇ ಈ ಮೆರವಣಿಗೆಯ ನೇತೃತ್ವ ವಹಿಸಿದ್ದರು! ಈ ಮೆರವಣಿಗೆ ಸಾಗಿದ ದಾರಿಯಲ್ಲೇ ದೊಂಬಿ ನಡೆದಿದೆ.

2002ರಲ್ಲಿ ಗೋಧ್ರಾದಲ್ಲಿ ಸತ್ತ ಕರಸೇವಕರ ಶವಗಳ ಮೆರವಣಿಗೆಯೇ ಕೋಮುಗಲಭೆಯನ್ನು ರಾಜ್ಯಕ್ಕೆಲ್ಲಾ ಹಬ್ಬಿಸಿತು. ಕಳೆದ ವರ್ಷ ಡಿಜೆ ಹಳ್ಳಿಯ ಗಲಭೆಯಲ್ಲಿ ಮೂರು ಜನ ಪೋಲೀಸ್ ಫೈರಿಂಗ್ ಅಲ್ಲಿ ಸತ್ತರು. ಮರುದಿನ ಈ ಮೂರು ಕುಟುಂಬಗಳನ್ನು ಸದ್ದುಗದ್ದಲವಿಲ್ಲದೆ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋದ ಪೋಲೀಸರು ಅಂತ್ಯಕ್ರಿಯೆ ನಡೆಸಿಕೊಟ್ಟರು. ಅವತ್ತು ಅಲ್ಲಿ ಆ ಮೂವರ ಮೃತದೇಹಗಳು ಡಿಜೆ ಹಳ್ಳಿಯಲ್ಲಿ ಇದ್ದಿದ್ದರೆ, ಸಾವಿರಾರು ಜನ ಸೇರಿದ್ದರೆ! ನೆನೆಸಿಕೊಳ್ಳಲೂ ಭಯ ಆಗುತ್ತೆ. ಹಾಥ್ರಸ್ ಅಲ್ಲಿ ಆ ನತದೃಷ್ಟ ಹುಡುಗಿಯ ಅಂತ್ಯಕ್ರಿಯೆಯೂ ಹೀಗೆ ಅವಸರದಲ್ಲಿ ನಡೆಯಿತು, ಆದರೆ ಅದರ ಉದ್ದೇಶ ಒಳ್ಳೆಯದಿರಲಿಲ್ಲ. ಸಾಕ್ಷಿ ನಾಶವೇ ಪ್ರಮುಖವಾಗಿತ್ತು. ಕುಟುಂಬಸ್ಥರ ಕೈಲಿ ಅಂತ್ಯಕ್ರಿಯೆ ನಡೆಸುವ ಮಾನವೀಯತೆಯೂ ಇಲ್ಲದಾಯಿತು.

ಇವತ್ತು ಮೃತದೇಹದ ಮೆರವಣಿಗೆಗೆ ಅವಕಾಶ ಮಾಡಿಕೊಟ್ಟಿದ್ದು ಅಕ್ಷರಶಃ ಅಪರಾಧ. ರಾಜಕಾರಣಿಗಳು ನೂರು ಹೇಳ್ತಾರೆ. ಆದರೆ ಶಿವಮೊಗ್ಗದ ಕಾನೂನು ಸುವ್ಯವಸ್ಥೆಗೆ ಜವಾಬ್ದಾರರಾದ ಪೋಲೀಸ್ ಅಧಿಕಾರಿಗಳು ವೃತ್ತಿಪರರಾಗಿದ್ದರೆ ಇದಕ್ಕೆ ಅವಕಾಶ ಮಾಡಿಕೊಡುತ್ತಿರಲಿಲ್ಲ.

ಇನ್ನು ಗೃಹಮಂತ್ರಿ ಆರಗ ಜ್ಞಾನೇಂದ್ರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೊಂದು ಕಿವಿ ಮಾತು. ಆಡಳಿತದ ಜವಾಬ್ದಾರಿ ಹೊತ್ತವರು ಎಲ್ಲಿ ರಾಜಕಾರಣವನ್ನು ನಿಲ್ಲಿಸಿಕೊಂಡು, ಆಡಳಿತಗಾರರಾಗಬೇಕು ಎಂಬ ಸ್ಪಷ್ಟತೆ ಹೊಂದಿರಬೇಕು. ಕಾನೂನು ಸುವ್ಯವಸ್ಥೆಯ ವಿಷಯದಲ್ಲಿ ಕರ್ನಾಟಕ by and large ಉತ್ತಮವಾಗಿದೆ. ಈಗಾಗಲೇ ನಮ್ಮನ್ನು ದಕ್ಷಿಣದ ಉತ್ತರಪ್ರದೇಶ ಎಂದು ಕರೆಯುತ್ತಿದ್ದಾರೆ. ಕಾನೂನು ಸುವ್ಯವಸ್ಥೆಯಲ್ಲೂ ನಾವು ಉತ್ತರಪ್ರದೇಶ ಆಗುವುದು ಬೇಡ. ಶಾಲೆ ಕಾಲೇಜುಗಳ ಕ್ಯಾಂಪಸ್ಸುಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದೆ ರಾಜ್ಯಾದ್ಯಂತ ರಜೆ ಘೋಷಿಸಿದಾಗಲೇ ಆಡಳಿತ ನಡೆಸುವವರಿಗೆ ಲಜ್ಜೆ ಮೂಡಬೇಕಿತ್ತು. ಈಗ ಶಿವಮೊಗ್ಗದ ಗಲಭೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲಾಗದ ಯಾವುದೇ ಸರ್ಕಾರವನ್ನು, ಪಕ್ಷಾತೀತವಾಗಿ, ನಮ್ಮ ನಾಡು ತಿರಸ್ಕರಿಸಿದೆ ಎಂಬುದನ್ನು ಮುಖ್ಯಮಂತ್ರಿಗಳು ಗುರುತಿಸಬೇಕು.

ಸಂಘಪರಿವಾರದಿಂದ ಹೊರಗೆ ಬಂದು, ಸಂಘಪರಿವಾರದ ಹಿಡನ್‌ ಅಜೆಂಡಾಗಳನ್ನು ಬಿಚ್ಚಿಡುತ್ತಿದ್ದ ದಿವಂಗತ ಮಹೇಂದ್ರಕುಮಾರ್‌ ಅವರ ಹಳೆಯ ವಿಡಿಯೊಗಳನ್ನು ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಹಂಚಿಕೊಂಡಿದ್ದಾರೆ.


ಇದನ್ನೂ ಓದಿರಿ: ಬಜರಂಗದಳ ಸದಸ್ಯನ ಕೊಲೆಯ ಹಿಂದೆ ಸಂಘಟನೆಗಳಿರುವ ಮಾಹಿತಿ ಸಿಕ್ಕಿಲ್ಲ: ಗೃಹಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...