Homeಕರ್ನಾಟಕಹರ್ಷ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಹೆಸರು ಬಹಿರಂಗ

ಹರ್ಷ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಹೆಸರು ಬಹಿರಂಗ

ಹರ್ಷ ಕೊಲೆ ಪ್ರಕರಣದ ಸುತ್ತ ಸರ್ಕಾರ ಎಸಗುತ್ತಿರುವ ಲೋಪದೋಷಗಳ ಕುರಿತು ಚರ್ಚೆ ನಡೆಯುತ್ತಿದೆ.

- Advertisement -
- Advertisement -

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಹಚ್ಚಿದ್ದು, ಇಬ್ಬರ ಹೆಸರನ್ನು ಬಹಿರಂಗಪಡಿಸಿದೆ. ಕೊಲೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಕೊಲೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆಂಬ ಮಾಹಿತಿ ಇದೆ. ಶಿವಮೊಗ್ಗ ಬುದ್ಧನಗರದ ಖಾಸಿಫ್‌ (30), ಜೆಪಿ ನಗರದ ಸೈಯದ್ ನದೀಂ (20) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವರದಿಗಳ ಪ್ರಕಾರ ಐವರನ್ನೂ ವಶಕ್ಕೆ ಪಡೆದಿದ್ದು, ಇಬ್ಬರ ಹೆಸರನ್ನು ಮಾತ್ರ ಬಹಿರಂಗಪಡಿಸಲಾಗಿದೆ.

ವಾತಾವರಣ ತಿಳಿಯಾಗದ ಕಾರಣ ಬುಧವಾರ ಬೆಳಗಿನ ಜಾವ 6 ಗಂಟೆಯತನನ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಡಾ.ಸೆಲ್ಪಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ.

ಮೃತನ ಸಹೋದರಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಡಿಯೊ ವೈರಲ್ ಆಗಿದ್ದು, “ಹಿಂದೂ, ಹಿಂದುತ್ವ ಎಂದಿದ್ದಕ್ಕೆ ನನ್ನ ತಮ್ಮ ಆ ರೀತಿಯಲ್ಲಿ ಬಿದ್ದಿದ್ದಾರೆ. ನನ್ನೆಲ್ಲ ಹಿಂದೂ, ಮುಸ್ಲಿಂ ಸಹೋದರರಿಗೆ ಕೇಳಿಕೊಳ್ಳುತ್ತೇನೆ. ಅಪ್ಪ ಅಮ್ಮನಿಗೆ ಒಳ್ಳೆಯ ಮಕ್ಕಳಾಗಿರಿ, ಇದನ್ನೆಲ್ಲ ಮಾಡಿಕೊಳ್ಳಬೇಡಿ” ಎಂದು ಮನವಿ ಮಾಡಿದ್ದಾರೆ.

ಹಿಂಚಾಚಾರ; ಸರ್ಕಾರದ ನಡೆಗೆ ಖಂಡನೆ

ಶಿವಮೊಗ್ಗದಲ್ಲಿ ನಡೆದಿರುವ ವ್ಯಾಪಕ ಹಿಂಸಾಚಾರಕ್ಕೆ ಸಾರ್ವಜನಿಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಶವವನ್ನು ಮೆರವಣಿಗೆ ಮಾಡಿದ್ದರಿಂದ ಅಹಿತಕರ ಘಟನೆಗಳು ನಡೆದಿವೆ. ಇದಕ್ಕೆ ಸರ್ಕಾರವೇ ಹೊಣೆ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

“ಒಂದು ಪೊಲೀಸ್ ಠಾಣೆಯಲ್ಲಿ ಬಗೆಹರಿಯಬಹುದಾಗಿದ್ದ ಕೇಸನ್ನು ಇಡೀ ಒಂದು ಧರ್ಮಕ್ಕೆ, ರಾಜ್ಯಕ್ಕೆ ಹರಿದು ಹಂಚಿದ ಕೀರ್ತಿ ಈಶ್ವರಪ್ಪ ಮತ್ತು ಅವರ ಪಟಾಲಂಗೆ ಸೇರಬೇಕು..” ಎಂದು ಪತ್ರಕರ್ತ ವಿ.ಆರ್‌.ಕಾರ್ಪೆಂಟರ್‌ ಟೀಕಿಸಿದ್ದಾರೆ.

ಹಿರಿಯ ಪತ್ರಕರ್ತ ಆದಿತ್ಯ ಭಾರದ್ವಾಜ್ ಅವರು ಅಪರಾಧ ವರದಿಗಳ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾ, ಸರ್ಕಾರ ಮಾಡಿರುವ ಎಡವಟ್ಟಿನತ್ತ ಗಮನ ಸೆಳೆದಿದ್ದಾರೆ.

ಆದಿತ್ಯ ಅವರ ಪೋಸ್ಟ್ ಹೀಗಿದೆ:

ಹನ್ನೊಂದು ವರ್ಷಗಳ ನನ್ನ ಕ್ರೈಂ ವರದಿಗಾರಿಕೆಯ ಅನುಭವದಲ್ಲಿ ಹೇಳಬಲ್ಲೆ: ಕೋಮು ಸೂಕ್ಷ್ಮ ಪ್ರದೇಶದಲ್ಲಿ ಗಲಭೆಗೆ ಪ್ರಚೋದನೆ ನೀಡಬಲ್ಲ ಒಂದು ಸಾವು ಸಂಭಿವಿಸಿದರೆ, ಕಾನೂನು ಸುವ್ಯವಸ್ಥೆ ಕಾಪಾಡಲು ತೆಗೆದುಕೊಳ್ಳುವ ಮೊದಲ ಕ್ರಮ ಮೃತದೇಹದ ಮೆರವಣಿಗೆಯನ್ನು ತಡೆಯುವುದು, ಆದಷ್ಟು ಬೇಗ ಜನ ಜಂಗುಳಿ ಇಲ್ಲದೆ ಅಂತ್ಯಸಂಸ್ಕಾರ ನಡೆಸಿಬಿಡುವುದು.

ಆದರೆ ಇವತ್ತು ಗೃಹ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮೃತದೇಹದ ಮೆರವಣಿಗೆ ಮಾಡಲಾಗಿದೆ. ಹಿರಿಯ ಸಚಿವರಾದ ಈಶ್ವರಪ್ಪನವರು, ಮತ್ತು ಶಿವಮೊಗ್ಗದ ಸಂಸದರಾದ ರಾಘವೇಂದ್ರ ಅವರೇ ಈ ಮೆರವಣಿಗೆಯ ನೇತೃತ್ವ ವಹಿಸಿದ್ದರು! ಈ ಮೆರವಣಿಗೆ ಸಾಗಿದ ದಾರಿಯಲ್ಲೇ ದೊಂಬಿ ನಡೆದಿದೆ.

2002ರಲ್ಲಿ ಗೋಧ್ರಾದಲ್ಲಿ ಸತ್ತ ಕರಸೇವಕರ ಶವಗಳ ಮೆರವಣಿಗೆಯೇ ಕೋಮುಗಲಭೆಯನ್ನು ರಾಜ್ಯಕ್ಕೆಲ್ಲಾ ಹಬ್ಬಿಸಿತು. ಕಳೆದ ವರ್ಷ ಡಿಜೆ ಹಳ್ಳಿಯ ಗಲಭೆಯಲ್ಲಿ ಮೂರು ಜನ ಪೋಲೀಸ್ ಫೈರಿಂಗ್ ಅಲ್ಲಿ ಸತ್ತರು. ಮರುದಿನ ಈ ಮೂರು ಕುಟುಂಬಗಳನ್ನು ಸದ್ದುಗದ್ದಲವಿಲ್ಲದೆ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋದ ಪೋಲೀಸರು ಅಂತ್ಯಕ್ರಿಯೆ ನಡೆಸಿಕೊಟ್ಟರು. ಅವತ್ತು ಅಲ್ಲಿ ಆ ಮೂವರ ಮೃತದೇಹಗಳು ಡಿಜೆ ಹಳ್ಳಿಯಲ್ಲಿ ಇದ್ದಿದ್ದರೆ, ಸಾವಿರಾರು ಜನ ಸೇರಿದ್ದರೆ! ನೆನೆಸಿಕೊಳ್ಳಲೂ ಭಯ ಆಗುತ್ತೆ. ಹಾಥ್ರಸ್ ಅಲ್ಲಿ ಆ ನತದೃಷ್ಟ ಹುಡುಗಿಯ ಅಂತ್ಯಕ್ರಿಯೆಯೂ ಹೀಗೆ ಅವಸರದಲ್ಲಿ ನಡೆಯಿತು, ಆದರೆ ಅದರ ಉದ್ದೇಶ ಒಳ್ಳೆಯದಿರಲಿಲ್ಲ. ಸಾಕ್ಷಿ ನಾಶವೇ ಪ್ರಮುಖವಾಗಿತ್ತು. ಕುಟುಂಬಸ್ಥರ ಕೈಲಿ ಅಂತ್ಯಕ್ರಿಯೆ ನಡೆಸುವ ಮಾನವೀಯತೆಯೂ ಇಲ್ಲದಾಯಿತು.

ಇವತ್ತು ಮೃತದೇಹದ ಮೆರವಣಿಗೆಗೆ ಅವಕಾಶ ಮಾಡಿಕೊಟ್ಟಿದ್ದು ಅಕ್ಷರಶಃ ಅಪರಾಧ. ರಾಜಕಾರಣಿಗಳು ನೂರು ಹೇಳ್ತಾರೆ. ಆದರೆ ಶಿವಮೊಗ್ಗದ ಕಾನೂನು ಸುವ್ಯವಸ್ಥೆಗೆ ಜವಾಬ್ದಾರರಾದ ಪೋಲೀಸ್ ಅಧಿಕಾರಿಗಳು ವೃತ್ತಿಪರರಾಗಿದ್ದರೆ ಇದಕ್ಕೆ ಅವಕಾಶ ಮಾಡಿಕೊಡುತ್ತಿರಲಿಲ್ಲ.

ಇನ್ನು ಗೃಹಮಂತ್ರಿ ಆರಗ ಜ್ಞಾನೇಂದ್ರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೊಂದು ಕಿವಿ ಮಾತು. ಆಡಳಿತದ ಜವಾಬ್ದಾರಿ ಹೊತ್ತವರು ಎಲ್ಲಿ ರಾಜಕಾರಣವನ್ನು ನಿಲ್ಲಿಸಿಕೊಂಡು, ಆಡಳಿತಗಾರರಾಗಬೇಕು ಎಂಬ ಸ್ಪಷ್ಟತೆ ಹೊಂದಿರಬೇಕು. ಕಾನೂನು ಸುವ್ಯವಸ್ಥೆಯ ವಿಷಯದಲ್ಲಿ ಕರ್ನಾಟಕ by and large ಉತ್ತಮವಾಗಿದೆ. ಈಗಾಗಲೇ ನಮ್ಮನ್ನು ದಕ್ಷಿಣದ ಉತ್ತರಪ್ರದೇಶ ಎಂದು ಕರೆಯುತ್ತಿದ್ದಾರೆ. ಕಾನೂನು ಸುವ್ಯವಸ್ಥೆಯಲ್ಲೂ ನಾವು ಉತ್ತರಪ್ರದೇಶ ಆಗುವುದು ಬೇಡ. ಶಾಲೆ ಕಾಲೇಜುಗಳ ಕ್ಯಾಂಪಸ್ಸುಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದೆ ರಾಜ್ಯಾದ್ಯಂತ ರಜೆ ಘೋಷಿಸಿದಾಗಲೇ ಆಡಳಿತ ನಡೆಸುವವರಿಗೆ ಲಜ್ಜೆ ಮೂಡಬೇಕಿತ್ತು. ಈಗ ಶಿವಮೊಗ್ಗದ ಗಲಭೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲಾಗದ ಯಾವುದೇ ಸರ್ಕಾರವನ್ನು, ಪಕ್ಷಾತೀತವಾಗಿ, ನಮ್ಮ ನಾಡು ತಿರಸ್ಕರಿಸಿದೆ ಎಂಬುದನ್ನು ಮುಖ್ಯಮಂತ್ರಿಗಳು ಗುರುತಿಸಬೇಕು.

ಸಂಘಪರಿವಾರದಿಂದ ಹೊರಗೆ ಬಂದು, ಸಂಘಪರಿವಾರದ ಹಿಡನ್‌ ಅಜೆಂಡಾಗಳನ್ನು ಬಿಚ್ಚಿಡುತ್ತಿದ್ದ ದಿವಂಗತ ಮಹೇಂದ್ರಕುಮಾರ್‌ ಅವರ ಹಳೆಯ ವಿಡಿಯೊಗಳನ್ನು ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಹಂಚಿಕೊಂಡಿದ್ದಾರೆ.


ಇದನ್ನೂ ಓದಿರಿ: ಬಜರಂಗದಳ ಸದಸ್ಯನ ಕೊಲೆಯ ಹಿಂದೆ ಸಂಘಟನೆಗಳಿರುವ ಮಾಹಿತಿ ಸಿಕ್ಕಿಲ್ಲ: ಗೃಹಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...