Homeಕರ್ನಾಟಕಹರ್ಷ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಹೆಸರು ಬಹಿರಂಗ

ಹರ್ಷ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಹೆಸರು ಬಹಿರಂಗ

ಹರ್ಷ ಕೊಲೆ ಪ್ರಕರಣದ ಸುತ್ತ ಸರ್ಕಾರ ಎಸಗುತ್ತಿರುವ ಲೋಪದೋಷಗಳ ಕುರಿತು ಚರ್ಚೆ ನಡೆಯುತ್ತಿದೆ.

- Advertisement -
- Advertisement -

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಹಚ್ಚಿದ್ದು, ಇಬ್ಬರ ಹೆಸರನ್ನು ಬಹಿರಂಗಪಡಿಸಿದೆ. ಕೊಲೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಕೊಲೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆಂಬ ಮಾಹಿತಿ ಇದೆ. ಶಿವಮೊಗ್ಗ ಬುದ್ಧನಗರದ ಖಾಸಿಫ್‌ (30), ಜೆಪಿ ನಗರದ ಸೈಯದ್ ನದೀಂ (20) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವರದಿಗಳ ಪ್ರಕಾರ ಐವರನ್ನೂ ವಶಕ್ಕೆ ಪಡೆದಿದ್ದು, ಇಬ್ಬರ ಹೆಸರನ್ನು ಮಾತ್ರ ಬಹಿರಂಗಪಡಿಸಲಾಗಿದೆ.

ವಾತಾವರಣ ತಿಳಿಯಾಗದ ಕಾರಣ ಬುಧವಾರ ಬೆಳಗಿನ ಜಾವ 6 ಗಂಟೆಯತನನ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಡಾ.ಸೆಲ್ಪಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ.

ಮೃತನ ಸಹೋದರಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಡಿಯೊ ವೈರಲ್ ಆಗಿದ್ದು, “ಹಿಂದೂ, ಹಿಂದುತ್ವ ಎಂದಿದ್ದಕ್ಕೆ ನನ್ನ ತಮ್ಮ ಆ ರೀತಿಯಲ್ಲಿ ಬಿದ್ದಿದ್ದಾರೆ. ನನ್ನೆಲ್ಲ ಹಿಂದೂ, ಮುಸ್ಲಿಂ ಸಹೋದರರಿಗೆ ಕೇಳಿಕೊಳ್ಳುತ್ತೇನೆ. ಅಪ್ಪ ಅಮ್ಮನಿಗೆ ಒಳ್ಳೆಯ ಮಕ್ಕಳಾಗಿರಿ, ಇದನ್ನೆಲ್ಲ ಮಾಡಿಕೊಳ್ಳಬೇಡಿ” ಎಂದು ಮನವಿ ಮಾಡಿದ್ದಾರೆ.

ಹಿಂಚಾಚಾರ; ಸರ್ಕಾರದ ನಡೆಗೆ ಖಂಡನೆ

ಶಿವಮೊಗ್ಗದಲ್ಲಿ ನಡೆದಿರುವ ವ್ಯಾಪಕ ಹಿಂಸಾಚಾರಕ್ಕೆ ಸಾರ್ವಜನಿಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಶವವನ್ನು ಮೆರವಣಿಗೆ ಮಾಡಿದ್ದರಿಂದ ಅಹಿತಕರ ಘಟನೆಗಳು ನಡೆದಿವೆ. ಇದಕ್ಕೆ ಸರ್ಕಾರವೇ ಹೊಣೆ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

“ಒಂದು ಪೊಲೀಸ್ ಠಾಣೆಯಲ್ಲಿ ಬಗೆಹರಿಯಬಹುದಾಗಿದ್ದ ಕೇಸನ್ನು ಇಡೀ ಒಂದು ಧರ್ಮಕ್ಕೆ, ರಾಜ್ಯಕ್ಕೆ ಹರಿದು ಹಂಚಿದ ಕೀರ್ತಿ ಈಶ್ವರಪ್ಪ ಮತ್ತು ಅವರ ಪಟಾಲಂಗೆ ಸೇರಬೇಕು..” ಎಂದು ಪತ್ರಕರ್ತ ವಿ.ಆರ್‌.ಕಾರ್ಪೆಂಟರ್‌ ಟೀಕಿಸಿದ್ದಾರೆ.

ಹಿರಿಯ ಪತ್ರಕರ್ತ ಆದಿತ್ಯ ಭಾರದ್ವಾಜ್ ಅವರು ಅಪರಾಧ ವರದಿಗಳ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾ, ಸರ್ಕಾರ ಮಾಡಿರುವ ಎಡವಟ್ಟಿನತ್ತ ಗಮನ ಸೆಳೆದಿದ್ದಾರೆ.

ಆದಿತ್ಯ ಅವರ ಪೋಸ್ಟ್ ಹೀಗಿದೆ:

ಹನ್ನೊಂದು ವರ್ಷಗಳ ನನ್ನ ಕ್ರೈಂ ವರದಿಗಾರಿಕೆಯ ಅನುಭವದಲ್ಲಿ ಹೇಳಬಲ್ಲೆ: ಕೋಮು ಸೂಕ್ಷ್ಮ ಪ್ರದೇಶದಲ್ಲಿ ಗಲಭೆಗೆ ಪ್ರಚೋದನೆ ನೀಡಬಲ್ಲ ಒಂದು ಸಾವು ಸಂಭಿವಿಸಿದರೆ, ಕಾನೂನು ಸುವ್ಯವಸ್ಥೆ ಕಾಪಾಡಲು ತೆಗೆದುಕೊಳ್ಳುವ ಮೊದಲ ಕ್ರಮ ಮೃತದೇಹದ ಮೆರವಣಿಗೆಯನ್ನು ತಡೆಯುವುದು, ಆದಷ್ಟು ಬೇಗ ಜನ ಜಂಗುಳಿ ಇಲ್ಲದೆ ಅಂತ್ಯಸಂಸ್ಕಾರ ನಡೆಸಿಬಿಡುವುದು.

ಆದರೆ ಇವತ್ತು ಗೃಹ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮೃತದೇಹದ ಮೆರವಣಿಗೆ ಮಾಡಲಾಗಿದೆ. ಹಿರಿಯ ಸಚಿವರಾದ ಈಶ್ವರಪ್ಪನವರು, ಮತ್ತು ಶಿವಮೊಗ್ಗದ ಸಂಸದರಾದ ರಾಘವೇಂದ್ರ ಅವರೇ ಈ ಮೆರವಣಿಗೆಯ ನೇತೃತ್ವ ವಹಿಸಿದ್ದರು! ಈ ಮೆರವಣಿಗೆ ಸಾಗಿದ ದಾರಿಯಲ್ಲೇ ದೊಂಬಿ ನಡೆದಿದೆ.

2002ರಲ್ಲಿ ಗೋಧ್ರಾದಲ್ಲಿ ಸತ್ತ ಕರಸೇವಕರ ಶವಗಳ ಮೆರವಣಿಗೆಯೇ ಕೋಮುಗಲಭೆಯನ್ನು ರಾಜ್ಯಕ್ಕೆಲ್ಲಾ ಹಬ್ಬಿಸಿತು. ಕಳೆದ ವರ್ಷ ಡಿಜೆ ಹಳ್ಳಿಯ ಗಲಭೆಯಲ್ಲಿ ಮೂರು ಜನ ಪೋಲೀಸ್ ಫೈರಿಂಗ್ ಅಲ್ಲಿ ಸತ್ತರು. ಮರುದಿನ ಈ ಮೂರು ಕುಟುಂಬಗಳನ್ನು ಸದ್ದುಗದ್ದಲವಿಲ್ಲದೆ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋದ ಪೋಲೀಸರು ಅಂತ್ಯಕ್ರಿಯೆ ನಡೆಸಿಕೊಟ್ಟರು. ಅವತ್ತು ಅಲ್ಲಿ ಆ ಮೂವರ ಮೃತದೇಹಗಳು ಡಿಜೆ ಹಳ್ಳಿಯಲ್ಲಿ ಇದ್ದಿದ್ದರೆ, ಸಾವಿರಾರು ಜನ ಸೇರಿದ್ದರೆ! ನೆನೆಸಿಕೊಳ್ಳಲೂ ಭಯ ಆಗುತ್ತೆ. ಹಾಥ್ರಸ್ ಅಲ್ಲಿ ಆ ನತದೃಷ್ಟ ಹುಡುಗಿಯ ಅಂತ್ಯಕ್ರಿಯೆಯೂ ಹೀಗೆ ಅವಸರದಲ್ಲಿ ನಡೆಯಿತು, ಆದರೆ ಅದರ ಉದ್ದೇಶ ಒಳ್ಳೆಯದಿರಲಿಲ್ಲ. ಸಾಕ್ಷಿ ನಾಶವೇ ಪ್ರಮುಖವಾಗಿತ್ತು. ಕುಟುಂಬಸ್ಥರ ಕೈಲಿ ಅಂತ್ಯಕ್ರಿಯೆ ನಡೆಸುವ ಮಾನವೀಯತೆಯೂ ಇಲ್ಲದಾಯಿತು.

ಇವತ್ತು ಮೃತದೇಹದ ಮೆರವಣಿಗೆಗೆ ಅವಕಾಶ ಮಾಡಿಕೊಟ್ಟಿದ್ದು ಅಕ್ಷರಶಃ ಅಪರಾಧ. ರಾಜಕಾರಣಿಗಳು ನೂರು ಹೇಳ್ತಾರೆ. ಆದರೆ ಶಿವಮೊಗ್ಗದ ಕಾನೂನು ಸುವ್ಯವಸ್ಥೆಗೆ ಜವಾಬ್ದಾರರಾದ ಪೋಲೀಸ್ ಅಧಿಕಾರಿಗಳು ವೃತ್ತಿಪರರಾಗಿದ್ದರೆ ಇದಕ್ಕೆ ಅವಕಾಶ ಮಾಡಿಕೊಡುತ್ತಿರಲಿಲ್ಲ.

ಇನ್ನು ಗೃಹಮಂತ್ರಿ ಆರಗ ಜ್ಞಾನೇಂದ್ರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೊಂದು ಕಿವಿ ಮಾತು. ಆಡಳಿತದ ಜವಾಬ್ದಾರಿ ಹೊತ್ತವರು ಎಲ್ಲಿ ರಾಜಕಾರಣವನ್ನು ನಿಲ್ಲಿಸಿಕೊಂಡು, ಆಡಳಿತಗಾರರಾಗಬೇಕು ಎಂಬ ಸ್ಪಷ್ಟತೆ ಹೊಂದಿರಬೇಕು. ಕಾನೂನು ಸುವ್ಯವಸ್ಥೆಯ ವಿಷಯದಲ್ಲಿ ಕರ್ನಾಟಕ by and large ಉತ್ತಮವಾಗಿದೆ. ಈಗಾಗಲೇ ನಮ್ಮನ್ನು ದಕ್ಷಿಣದ ಉತ್ತರಪ್ರದೇಶ ಎಂದು ಕರೆಯುತ್ತಿದ್ದಾರೆ. ಕಾನೂನು ಸುವ್ಯವಸ್ಥೆಯಲ್ಲೂ ನಾವು ಉತ್ತರಪ್ರದೇಶ ಆಗುವುದು ಬೇಡ. ಶಾಲೆ ಕಾಲೇಜುಗಳ ಕ್ಯಾಂಪಸ್ಸುಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದೆ ರಾಜ್ಯಾದ್ಯಂತ ರಜೆ ಘೋಷಿಸಿದಾಗಲೇ ಆಡಳಿತ ನಡೆಸುವವರಿಗೆ ಲಜ್ಜೆ ಮೂಡಬೇಕಿತ್ತು. ಈಗ ಶಿವಮೊಗ್ಗದ ಗಲಭೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲಾಗದ ಯಾವುದೇ ಸರ್ಕಾರವನ್ನು, ಪಕ್ಷಾತೀತವಾಗಿ, ನಮ್ಮ ನಾಡು ತಿರಸ್ಕರಿಸಿದೆ ಎಂಬುದನ್ನು ಮುಖ್ಯಮಂತ್ರಿಗಳು ಗುರುತಿಸಬೇಕು.

ಸಂಘಪರಿವಾರದಿಂದ ಹೊರಗೆ ಬಂದು, ಸಂಘಪರಿವಾರದ ಹಿಡನ್‌ ಅಜೆಂಡಾಗಳನ್ನು ಬಿಚ್ಚಿಡುತ್ತಿದ್ದ ದಿವಂಗತ ಮಹೇಂದ್ರಕುಮಾರ್‌ ಅವರ ಹಳೆಯ ವಿಡಿಯೊಗಳನ್ನು ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಹಂಚಿಕೊಂಡಿದ್ದಾರೆ.


ಇದನ್ನೂ ಓದಿರಿ: ಬಜರಂಗದಳ ಸದಸ್ಯನ ಕೊಲೆಯ ಹಿಂದೆ ಸಂಘಟನೆಗಳಿರುವ ಮಾಹಿತಿ ಸಿಕ್ಕಿಲ್ಲ: ಗೃಹಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...