Homeಕರ್ನಾಟಕಹರ್ಷ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಹೆಸರು ಬಹಿರಂಗ

ಹರ್ಷ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಹೆಸರು ಬಹಿರಂಗ

ಹರ್ಷ ಕೊಲೆ ಪ್ರಕರಣದ ಸುತ್ತ ಸರ್ಕಾರ ಎಸಗುತ್ತಿರುವ ಲೋಪದೋಷಗಳ ಕುರಿತು ಚರ್ಚೆ ನಡೆಯುತ್ತಿದೆ.

- Advertisement -
- Advertisement -

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಹಚ್ಚಿದ್ದು, ಇಬ್ಬರ ಹೆಸರನ್ನು ಬಹಿರಂಗಪಡಿಸಿದೆ. ಕೊಲೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಕೊಲೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆಂಬ ಮಾಹಿತಿ ಇದೆ. ಶಿವಮೊಗ್ಗ ಬುದ್ಧನಗರದ ಖಾಸಿಫ್‌ (30), ಜೆಪಿ ನಗರದ ಸೈಯದ್ ನದೀಂ (20) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವರದಿಗಳ ಪ್ರಕಾರ ಐವರನ್ನೂ ವಶಕ್ಕೆ ಪಡೆದಿದ್ದು, ಇಬ್ಬರ ಹೆಸರನ್ನು ಮಾತ್ರ ಬಹಿರಂಗಪಡಿಸಲಾಗಿದೆ.

ವಾತಾವರಣ ತಿಳಿಯಾಗದ ಕಾರಣ ಬುಧವಾರ ಬೆಳಗಿನ ಜಾವ 6 ಗಂಟೆಯತನನ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಡಾ.ಸೆಲ್ಪಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ.

ಮೃತನ ಸಹೋದರಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಡಿಯೊ ವೈರಲ್ ಆಗಿದ್ದು, “ಹಿಂದೂ, ಹಿಂದುತ್ವ ಎಂದಿದ್ದಕ್ಕೆ ನನ್ನ ತಮ್ಮ ಆ ರೀತಿಯಲ್ಲಿ ಬಿದ್ದಿದ್ದಾರೆ. ನನ್ನೆಲ್ಲ ಹಿಂದೂ, ಮುಸ್ಲಿಂ ಸಹೋದರರಿಗೆ ಕೇಳಿಕೊಳ್ಳುತ್ತೇನೆ. ಅಪ್ಪ ಅಮ್ಮನಿಗೆ ಒಳ್ಳೆಯ ಮಕ್ಕಳಾಗಿರಿ, ಇದನ್ನೆಲ್ಲ ಮಾಡಿಕೊಳ್ಳಬೇಡಿ” ಎಂದು ಮನವಿ ಮಾಡಿದ್ದಾರೆ.

ಹಿಂಚಾಚಾರ; ಸರ್ಕಾರದ ನಡೆಗೆ ಖಂಡನೆ

ಶಿವಮೊಗ್ಗದಲ್ಲಿ ನಡೆದಿರುವ ವ್ಯಾಪಕ ಹಿಂಸಾಚಾರಕ್ಕೆ ಸಾರ್ವಜನಿಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಶವವನ್ನು ಮೆರವಣಿಗೆ ಮಾಡಿದ್ದರಿಂದ ಅಹಿತಕರ ಘಟನೆಗಳು ನಡೆದಿವೆ. ಇದಕ್ಕೆ ಸರ್ಕಾರವೇ ಹೊಣೆ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

“ಒಂದು ಪೊಲೀಸ್ ಠಾಣೆಯಲ್ಲಿ ಬಗೆಹರಿಯಬಹುದಾಗಿದ್ದ ಕೇಸನ್ನು ಇಡೀ ಒಂದು ಧರ್ಮಕ್ಕೆ, ರಾಜ್ಯಕ್ಕೆ ಹರಿದು ಹಂಚಿದ ಕೀರ್ತಿ ಈಶ್ವರಪ್ಪ ಮತ್ತು ಅವರ ಪಟಾಲಂಗೆ ಸೇರಬೇಕು..” ಎಂದು ಪತ್ರಕರ್ತ ವಿ.ಆರ್‌.ಕಾರ್ಪೆಂಟರ್‌ ಟೀಕಿಸಿದ್ದಾರೆ.

ಹಿರಿಯ ಪತ್ರಕರ್ತ ಆದಿತ್ಯ ಭಾರದ್ವಾಜ್ ಅವರು ಅಪರಾಧ ವರದಿಗಳ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾ, ಸರ್ಕಾರ ಮಾಡಿರುವ ಎಡವಟ್ಟಿನತ್ತ ಗಮನ ಸೆಳೆದಿದ್ದಾರೆ.

ಆದಿತ್ಯ ಅವರ ಪೋಸ್ಟ್ ಹೀಗಿದೆ:

ಹನ್ನೊಂದು ವರ್ಷಗಳ ನನ್ನ ಕ್ರೈಂ ವರದಿಗಾರಿಕೆಯ ಅನುಭವದಲ್ಲಿ ಹೇಳಬಲ್ಲೆ: ಕೋಮು ಸೂಕ್ಷ್ಮ ಪ್ರದೇಶದಲ್ಲಿ ಗಲಭೆಗೆ ಪ್ರಚೋದನೆ ನೀಡಬಲ್ಲ ಒಂದು ಸಾವು ಸಂಭಿವಿಸಿದರೆ, ಕಾನೂನು ಸುವ್ಯವಸ್ಥೆ ಕಾಪಾಡಲು ತೆಗೆದುಕೊಳ್ಳುವ ಮೊದಲ ಕ್ರಮ ಮೃತದೇಹದ ಮೆರವಣಿಗೆಯನ್ನು ತಡೆಯುವುದು, ಆದಷ್ಟು ಬೇಗ ಜನ ಜಂಗುಳಿ ಇಲ್ಲದೆ ಅಂತ್ಯಸಂಸ್ಕಾರ ನಡೆಸಿಬಿಡುವುದು.

ಆದರೆ ಇವತ್ತು ಗೃಹ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮೃತದೇಹದ ಮೆರವಣಿಗೆ ಮಾಡಲಾಗಿದೆ. ಹಿರಿಯ ಸಚಿವರಾದ ಈಶ್ವರಪ್ಪನವರು, ಮತ್ತು ಶಿವಮೊಗ್ಗದ ಸಂಸದರಾದ ರಾಘವೇಂದ್ರ ಅವರೇ ಈ ಮೆರವಣಿಗೆಯ ನೇತೃತ್ವ ವಹಿಸಿದ್ದರು! ಈ ಮೆರವಣಿಗೆ ಸಾಗಿದ ದಾರಿಯಲ್ಲೇ ದೊಂಬಿ ನಡೆದಿದೆ.

2002ರಲ್ಲಿ ಗೋಧ್ರಾದಲ್ಲಿ ಸತ್ತ ಕರಸೇವಕರ ಶವಗಳ ಮೆರವಣಿಗೆಯೇ ಕೋಮುಗಲಭೆಯನ್ನು ರಾಜ್ಯಕ್ಕೆಲ್ಲಾ ಹಬ್ಬಿಸಿತು. ಕಳೆದ ವರ್ಷ ಡಿಜೆ ಹಳ್ಳಿಯ ಗಲಭೆಯಲ್ಲಿ ಮೂರು ಜನ ಪೋಲೀಸ್ ಫೈರಿಂಗ್ ಅಲ್ಲಿ ಸತ್ತರು. ಮರುದಿನ ಈ ಮೂರು ಕುಟುಂಬಗಳನ್ನು ಸದ್ದುಗದ್ದಲವಿಲ್ಲದೆ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋದ ಪೋಲೀಸರು ಅಂತ್ಯಕ್ರಿಯೆ ನಡೆಸಿಕೊಟ್ಟರು. ಅವತ್ತು ಅಲ್ಲಿ ಆ ಮೂವರ ಮೃತದೇಹಗಳು ಡಿಜೆ ಹಳ್ಳಿಯಲ್ಲಿ ಇದ್ದಿದ್ದರೆ, ಸಾವಿರಾರು ಜನ ಸೇರಿದ್ದರೆ! ನೆನೆಸಿಕೊಳ್ಳಲೂ ಭಯ ಆಗುತ್ತೆ. ಹಾಥ್ರಸ್ ಅಲ್ಲಿ ಆ ನತದೃಷ್ಟ ಹುಡುಗಿಯ ಅಂತ್ಯಕ್ರಿಯೆಯೂ ಹೀಗೆ ಅವಸರದಲ್ಲಿ ನಡೆಯಿತು, ಆದರೆ ಅದರ ಉದ್ದೇಶ ಒಳ್ಳೆಯದಿರಲಿಲ್ಲ. ಸಾಕ್ಷಿ ನಾಶವೇ ಪ್ರಮುಖವಾಗಿತ್ತು. ಕುಟುಂಬಸ್ಥರ ಕೈಲಿ ಅಂತ್ಯಕ್ರಿಯೆ ನಡೆಸುವ ಮಾನವೀಯತೆಯೂ ಇಲ್ಲದಾಯಿತು.

ಇವತ್ತು ಮೃತದೇಹದ ಮೆರವಣಿಗೆಗೆ ಅವಕಾಶ ಮಾಡಿಕೊಟ್ಟಿದ್ದು ಅಕ್ಷರಶಃ ಅಪರಾಧ. ರಾಜಕಾರಣಿಗಳು ನೂರು ಹೇಳ್ತಾರೆ. ಆದರೆ ಶಿವಮೊಗ್ಗದ ಕಾನೂನು ಸುವ್ಯವಸ್ಥೆಗೆ ಜವಾಬ್ದಾರರಾದ ಪೋಲೀಸ್ ಅಧಿಕಾರಿಗಳು ವೃತ್ತಿಪರರಾಗಿದ್ದರೆ ಇದಕ್ಕೆ ಅವಕಾಶ ಮಾಡಿಕೊಡುತ್ತಿರಲಿಲ್ಲ.

ಇನ್ನು ಗೃಹಮಂತ್ರಿ ಆರಗ ಜ್ಞಾನೇಂದ್ರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೊಂದು ಕಿವಿ ಮಾತು. ಆಡಳಿತದ ಜವಾಬ್ದಾರಿ ಹೊತ್ತವರು ಎಲ್ಲಿ ರಾಜಕಾರಣವನ್ನು ನಿಲ್ಲಿಸಿಕೊಂಡು, ಆಡಳಿತಗಾರರಾಗಬೇಕು ಎಂಬ ಸ್ಪಷ್ಟತೆ ಹೊಂದಿರಬೇಕು. ಕಾನೂನು ಸುವ್ಯವಸ್ಥೆಯ ವಿಷಯದಲ್ಲಿ ಕರ್ನಾಟಕ by and large ಉತ್ತಮವಾಗಿದೆ. ಈಗಾಗಲೇ ನಮ್ಮನ್ನು ದಕ್ಷಿಣದ ಉತ್ತರಪ್ರದೇಶ ಎಂದು ಕರೆಯುತ್ತಿದ್ದಾರೆ. ಕಾನೂನು ಸುವ್ಯವಸ್ಥೆಯಲ್ಲೂ ನಾವು ಉತ್ತರಪ್ರದೇಶ ಆಗುವುದು ಬೇಡ. ಶಾಲೆ ಕಾಲೇಜುಗಳ ಕ್ಯಾಂಪಸ್ಸುಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದೆ ರಾಜ್ಯಾದ್ಯಂತ ರಜೆ ಘೋಷಿಸಿದಾಗಲೇ ಆಡಳಿತ ನಡೆಸುವವರಿಗೆ ಲಜ್ಜೆ ಮೂಡಬೇಕಿತ್ತು. ಈಗ ಶಿವಮೊಗ್ಗದ ಗಲಭೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲಾಗದ ಯಾವುದೇ ಸರ್ಕಾರವನ್ನು, ಪಕ್ಷಾತೀತವಾಗಿ, ನಮ್ಮ ನಾಡು ತಿರಸ್ಕರಿಸಿದೆ ಎಂಬುದನ್ನು ಮುಖ್ಯಮಂತ್ರಿಗಳು ಗುರುತಿಸಬೇಕು.

ಸಂಘಪರಿವಾರದಿಂದ ಹೊರಗೆ ಬಂದು, ಸಂಘಪರಿವಾರದ ಹಿಡನ್‌ ಅಜೆಂಡಾಗಳನ್ನು ಬಿಚ್ಚಿಡುತ್ತಿದ್ದ ದಿವಂಗತ ಮಹೇಂದ್ರಕುಮಾರ್‌ ಅವರ ಹಳೆಯ ವಿಡಿಯೊಗಳನ್ನು ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಹಂಚಿಕೊಂಡಿದ್ದಾರೆ.


ಇದನ್ನೂ ಓದಿರಿ: ಬಜರಂಗದಳ ಸದಸ್ಯನ ಕೊಲೆಯ ಹಿಂದೆ ಸಂಘಟನೆಗಳಿರುವ ಮಾಹಿತಿ ಸಿಕ್ಕಿಲ್ಲ: ಗೃಹಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...