Homeಮುಖಪುಟಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್

ಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್

ಭವಿಷ್ಯದ ದಿನಗಳಲ್ಲಿ ಪ್ರಖ್ಯಾತ ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಮೋದಿಯವರ ಮೂರು ಪ್ರಮುಖ ವೈಫಲ್ಯಗಳಾದ ಕೋವಿಡ್ 19, ಜಿಎಸ್‌ಟಿ ಮತ್ತು ನೋಟು ಅಮಾನ್ಯೀಕರಣದ ಬಗ್ಗೆ ಅಧ್ಯಯನ ನಡೆಸುತ್ತದೆ ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಕೋವಿಡ್ 19, ಜಿಎಸ್‌ಟಿ ಮತ್ತು ನೋಟು ಅಮಾನ್ಯೀಕರಣ.. ಮೋದಿಯ ಈ ಮೂರು ವೈಫಲ್ಯಗಳ ಕುರಿತು ಭವಿಷ್ಯದಲ್ಲಿ ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ರಷ್ಯಾವನ್ನು ಹಿಂದಿಕ್ಕಿ ಭಾರತವು ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಪ್ರಪಂಚದ ಮೂರನೇ ರಾಷ್ಟ್ರವಾದ (6.9 ಲಕ್ಷ) ಬಳಿಕ ಇಂದು ಮುಂಜಾನೆ ಏರುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಗ್ರಾಫ್ ಅನ್ನು ರಾಹುಲ್ ಗಾಂಧಿ ಟ್ವೀಟ್‌ ಮಾಡಿದ್ದಾರೆ.

ದೇಶದಲ್ಲಿ ನರೇಂದ್ರ ಮೋದಿಯವರು ಲಾಕ್‌ಡೌನ್‌ ಹೇರಿದಾಗ ಕೊರೊನಾ ಪ್ರಕರಣಗಳಲ್ಲಿ ಭಾರತವು 48ನೇ ಸ್ಥಾನದಲ್ಲಿತ್ತು. ಅಂದು ನರೇಂದ್ರ ಮೋದಿಯವರು ಮಹಾಭಾರತ ಯುದ್ಧವು 18 ದಿನದಲ್ಲಿ ವಿಜಯಿಯಾಗಿತ್ತು. ನಾವು 21 ದಿನಗಳಲ್ಲಿ ಕೊರೊನಾ ವಿರುದ್ಧ ಜಯ ಸಾಧಿಸೋಣ ಎಂದು ಕರೆ ನೀಡಿದ್ದರು. ಅಲ್ಲದೇ ಚಪ್ಪಾಳೆ ಬಡಿಯಿರಿ, ತಟ್ಟೆ ಲೋಟ ಬಡಿಯಿರಿ, ದೀಪ ಹಚ್ಚಿ ಎಂದು ಕರೆ ನೀಡಿದ್ದರು. ಇಂದು ಲಾಕ್ ಡೌನ್ ಘೋಷಿಸಿ 103ನೇ ದಿನವಾಗಿದ್ದು ಕೊರೊನಾ ಪ್ರಕರಣಗಳಲ್ಲಿ ಭಾರತ 6.9 ಲಕ್ಷ ಪ್ರಕರಣಗಳೊಂದಿಗೆ 3 ನೇ ಸ್ಥಾನಕ್ಕೆ ಬಂದು ನಿಂತಿದೆ. ಕೊರೊನಾ ನಿರ್ವಹಣೆಯಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ರಾಹುಲ್ ಗಾಂಧಿ ತಮ್ಮ ವಿಡಿಯೋ ಮೂಲಕ ಟೀಕಿಸಿದ್ದಾರೆ.

ಹಾಗಾಗಿ ಭವಿಷ್ಯದ ದಿನಗಳಲ್ಲಿ ಪ್ರಖ್ಯಾತ ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಮೋದಿಯವರ ಮೂರು ಪ್ರಮುಖ ವೈಫಲ್ಯಗಳಾದ ಕೋವಿಡ್ 19, ಜಿಎಸ್‌ಟಿ ಮತ್ತು ನೋಟು ಅಮಾನ್ಯೀಕರಣದ ಬಗ್ಗೆ ಅಧ್ಯಯನ ನಡೆಸುತ್ತದೆ ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ.

ಜೂನ್‌ನಲ್ಲಿ ಅಮೆರಿಕದ ಮಾಜಿ ರಾಜತಾಂತ್ರಿಕ ನಿಕೋಲಸ್ ಬರ್ನ್ಸ್ ಅವರೊಂದಿಗಿನ ಸಂಭಾಷಣೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವು ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. “ನಮ್ಮಲ್ಲಿ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಸರ್ಕಾರವಿದೆ. ಇದು ಕಠಿಣ ಲಾಕ್‌ಡೌನ್ ವಿಧಿಸಲು ನಿರ್ಧರಿಸಿತು ಮತ್ತು ಇದರ ಫಲಿತಾಂಶವು ಎಲ್ಲರಿಗೂ ಕಾಣುತ್ತದೆ. ನೀವು ಸಾವಿರಾರು ವಲಸೆ ಕಾರ್ಮಿಕರನ್ನು ತಮ್ಮ ಊರಿಗೆ ಸಾವಿರಾರು ಕಿಲೋಮೀಟರ್ ನಡೆದುಕೊಂಡು ಹೋಗಿದ್ದೀರಿ. ಈ ರೀತಿಯ ನಾಯಕತ್ವವು ತುಂಬಾ ವಿಚ್ಛಿದ್ರಕಾರಕವಾಗಿದೆ” ಎಂದು ಅವರು ಟೀಕಿಸಿದ್ದರು.

ನೋಟು ಅಮಾನ್ಯೀಕರಣ ಘೋಷಿಸುವಾಗ, ಜಿಎಸ್‌ಟಿ ಜಾರಿಗೆ ತರುವಾಗ ಮತ್ತು ಲಾಕ್‌ಡೌನ್ ವಿಧಿಸುವಾಗ ಮೋದಿಯವರು ತಜ್ಞರ, ವಿರೋಧ ಪಕ್ಷಗಳ ಸಲಹೆ ಕೇಳಿಲ್ಲ. ಏಕಾಏಕಿ ಹೇರಿದ ಪರಿಣಾಮ ದೇಶದ ಕೋಟ್ಯಂತರ ಜನರು ತೊಂದರೆಗೀಡಾಗಿದ್ದಾರೆ. ಅಲ್ಲದೇ ಕೋವಿಡ್ ವಿರುದ್ಧ ಹೋರಾಡುವ ಯಾವುದೇ ಸಮರ್ಪಕ ಯೋಜನೆಯನ್ನು ನರೇಂದ್ರ ಮೋದಿಯವರು ಹೊಂದಿಲ್ಲವೆಂಬುದು ರಾಹುಲ್ ಗಾಂಧಿಯವರ ಆರೋಪವಾಗಿದೆ.

ಭಾರತವೂ ಕೊರೊನಾ ಪೀಡಿತ ಮೂರನೇ ಕೆಟ್ಟ ರಾಷ್ಟ್ರವಾಗಿದೆ. ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ವಿರುದ್ಧದ ಯುದ್ಧ ಕೇವಲ 21 ದಿನಗಳು ಮಾತ್ರ ಎಂದು ವಿಶ್ವಾಸದಿಂದ ಹೇಳಿದ್ದರು ಎಂದು ಯುವ ಚಿಂತಕ ಧೃವ್ ರಾಠೀ ಟ್ವೀಟ್ ಮಾಡಿದ್ದಾರೆ.


ಇದನ್ನೂ ಒದಿ: ಶ್ರೀರಾಮುಲುರವರೆ, ನಿಮ್ಮ ಅಣ್ತಮ್ಮಂದಿರು ಜೈಲು ಸೇರಿದ್ದು ನೆನಪಿರಲಿ: ಸಿದ್ದರಾಮಯ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....