Homeಅಂತರಾಷ್ಟ್ರೀಯಅನುದಾನ ತಡೆ ಹಿಡಿದ ಟ್ರಂಪ್ ಆಡಳಿತ: ಕಾನೂನು ಸಮರಕ್ಕೆ ಮುಂದಾದ ಹಾರ್ವರ್ಡ್‌ ವಿವಿ

ಅನುದಾನ ತಡೆ ಹಿಡಿದ ಟ್ರಂಪ್ ಆಡಳಿತ: ಕಾನೂನು ಸಮರಕ್ಕೆ ಮುಂದಾದ ಹಾರ್ವರ್ಡ್‌ ವಿವಿ

- Advertisement -
- Advertisement -

ತನ್ನ ತಾಳಕ್ಕೆ ತಕ್ಕಂತೆ ಕುಣಿಯದ್ದಕ್ಕೆ 2.2 ಬಿಲಿಯನ್ ಡಾಲರ್‌ಗಿಂತ ಹೆಚ್ಚಿನ ಅನುದಾನವನ್ನು ತಡೆ ಹಿಡಿದ ಟ್ರಂಪ್ ಆಡಳಿತದ ವಿರುದ್ಧ ಮೊಕದ್ದಮೆ ದಾಖಲಿಸಿರುವುದಾಗಿ ಹಾರ್ವರ್ಡ್‌ ವಿಶ್ವ ವಿದ್ಯಾಲಯ ಪ್ರಕಟಿಸಿದೆ.

ಏಪ್ರಿಲ್ 11ರಂದು ಹಾರ್ವರ್ಡ್‌ಗೆ ಬರೆದ ಪತ್ರದಲ್ಲಿ, ಟ್ರಂಪ್ ಆಡಳಿತವು ವಿಶ್ವವಿದ್ಯಾಲಯದ ಚಟುವಟಿಕೆಗಳಿಗೆ ಮೂಗುದಾರ ಹಾಕುವ ಹಲವು ಬೇಡಿಕೆಗಳನ್ನು ಮುಂದಿಟ್ಟಿತ್ತು.

ಅಮೆರಿಕನ್ ಮೌಲ್ಯಗಳಿಗೆ ವಿರುದ್ದವಾಗಿರುವ ವಿದ್ಯಾರ್ಥಿಗಳ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಬೇಕು.ಯಹೂದಿ ವಿರೋಧಿ ಮನಸ್ಥಿತಿಯನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನು ಪರಿಶೀಲಿಸಲು ಬಾಹ್ಯ ಸರ್ಕಾರ-ಅನುಮೋದಿತ ಪಕ್ಷಕ್ಕೆ ಅವಕಾಶ ನೀಡಬೇಕು. ಕ್ಯಾಂಪಸ್‌ನಲ್ಲಿ ಮಾಸ್ಕ್‌ ನಿಷೇಧಿಸುವುದು, ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ ಉಪಕ್ರಮಗಳನ್ನು ಕೊನೆಗೊಳಿಸುವುದು, ಅಪರಾಧ ಚಟುವಟಿಕೆ, ಹಿಂಸೆ ಅಥವಾ ಕಿರುಕುಳವನ್ನು ಉತ್ತೇಜಿಸುವ ಆರೋಪ ಹೊತ್ತಿರುವ ವಿದ್ಯಾರ್ಥಿ ಕ್ಲಬ್‌ಗಳ ಮಾನ್ಯತೆ ರದ್ದುಪಡಿಸುವುದು ಸರ್ಕಾರದ ಬೇಡಿಕೆಗಳಲ್ಲಿ ಸೇರಿವೆ.

ಏಪ್ರಿಲ್ 14ರಂದು ವಿಶ್ವವಿದ್ಯಾಲಯ ಸಮುದಾಯಕ್ಕೆ ಬರೆದ ಹಾರ್ವರ್ಡ್ ಅಧ್ಯಕ್ಷ ಅಲನ್ ಗಾರ್ಬರ್ ವಿಶ್ವವಿದ್ಯಾನಿಲಯವು ಸರ್ಕಾರ ಬೇಡಿಕೆಗಳಿಗೆ ಮಣಿಯುವುದಿಲ್ಲ ಎಂದು ಹೇಳಿದ್ದರು. ಈ ಬೆನ್ನಲ್ಲೇ ಸರ್ಕಾರ ಅನುದಾನ ತಡೆ ಹಿಡಿದಿದೆ ಎಂದು ವರದಿಯಾಗಿದೆ.

“ವಿಶ್ವ ವಿದ್ಯಾಲಯದ ವೈದ್ಯಕೀಯ, ವೈಜ್ಞಾನಿಕ, ತಾಂತ್ರಿಕ ಮತ್ತು ಇತರ ವಿಭಾಗಗಳು ಮತ್ತು ಯಹೂದಿ ವಿರೋಧಿ ಮನಸ್ಥಿತಿಗಳ ನಡುವೆ ಸಂಪರ್ಕ ಇರುವುದನ್ನು ತೋರಿಸಲು ಸರ್ಕಾರಕ್ಕೆ ಸಾಧ್ಯವಿಲ್ಲ. ಈ ವಿಭಾಗಗಳು ಅಮೆರಿಕನ್ನರ ಜೀವಗಳನ್ನು ಉಳಿಸುವ, ಅಮೆರಿಕನ್ನರ ಯಶಸ್ಸನ್ನು ಬೆಳೆಸುವ, ಅಮೆರಿಕನ್ ಭದ್ರತೆಯನ್ನು ಕಾಪಾಡುವ ಮತ್ತು ನಾವೀನ್ಯತೆಯಲ್ಲಿ ಜಾಗತಿಕ ನಾಯಕನಾಗಿ ಅಮೆರಿಕದ ಸ್ಥಾನವನ್ನು ಕಾಯ್ದುಕೊಳ್ಳುವ ಗುರಿಯನ್ನು ಹೊಂದಿವೆ” ಎಂದು ಬೋಸ್ಟನ್ ಫೆಡರಲ್ ನ್ಯಾಯಾಲಯಕ್ಕೆ ಸಲ್ಲಿಸಲಾದ ಮೊಕದ್ದಮೆಯಲ್ಲಿ ಹಾರ್ವರ್ಡ್‌ ಹೇಳಿದೆ.

“ಹಾರ್ವರ್ಡ್‌ನ ಸಂಶೋಧನಾ ಕಾರ್ಯಕ್ರಮಗಳು, ಆ ಸಂಶೋಧನೆಯ ಫಲಾನುಭವಿಗಳು ಮತ್ತು ಅಮೆರಿಕದ ನಾವೀನ್ಯತೆ ಮತ್ತು ಪ್ರಗತಿಯನ್ನು ಹೆಚ್ಚಿಸುವ ರಾಷ್ಟ್ರೀಯ ಹಿತಾಸಕ್ತಿಯ ಶತಕೋಟಿ ಡಾಲರ್‌ಗಳ ಫೆಡರಲ್ ಸಂಶೋಧನಾ ನಿಧಿಯನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸುವುದರಿಂದ ಉಂಟಾಗುವ ಗಮನಾರ್ಹ ಪರಿಣಾಮಗಳನ್ನು ಸರ್ಕಾರ ಒಪ್ಪಿಕೊಂಡಿಲ್ಲ” ಎಂದು ಆರೋಪಿಸಿದೆ.

ಅನುದಾ ಸ್ಥಗಿತವನ್ನು “ಅನಿಯಂತ್ರಿತ ಮತ್ತು ವಿಚಿತ್ರವಾದದ್ದು” ಎಂದು ಕರೆದಿರುವ ಹಾರ್ವರ್ಡ್‌, ಇದು ನಾಗರಿಕ ಹಕ್ಕುಗಳ ಕಾಯ್ದೆಯ ಶೀರ್ಷಿಕೆ VIರ ಶಾಸನಬದ್ಧ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದೆ. ವಿವಿ ಆರೋಪಕ್ಕೆ ಸರ್ಕಾರ ತಿರುಗೇಟು ಕೊಟ್ಟಿದೆ.

“ಹಾರ್ವರ್ಡ್‌ನಂತಹ ಸಂಸ್ಥೆಗಳಿಗೆ ಫೆಡರಲ್ ಅನುದಾನ ಕೊನೆಗೊಳ್ಳುತ್ತಿದೆ. ಈ ಸಂಸ್ಥೆಗಳು ಹೆಣಗಾಡುತ್ತಿರುವ ಅಮೆರಿಕನ್ನರ ತೆರಿಗೆ ಹಣದಿಂದ ತಮ್ಮ ಅಧಿಕಾರಿಗಳನ್ನು ಶ್ರೀಮಂತಗೊಳಿಸುತ್ತಿವೆ.
ತೆರಿಗೆದಾರರ ನಿಧಿಗಳು ಒಂದು ಸವಲತ್ತು. ಆ ಸವಲತ್ತನ್ನು ಪಡೆಯಲು ಅಗತ್ಯವಾದ ಮೂಲಭೂತ ಷರತ್ತುಗಳನ್ನು ಪೂರೈಸಲು ಹಾರ್ವರ್ಡ್ ವಿಫಲವಾಗಿದೆ” ಎಂದು ಶ್ವೇತಭವನದ ವಕ್ತಾರ ಹ್ಯಾರಿಸನ್ ಫೀಲ್ಡ್ಸ್ ಸೋಮವಾರ ಹೇಳಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ (ಎಂಜಿಎನ್‌ಆರ್‌ಇಜಿಎ) ಹೆಸರು ಮತ್ತು ನಿಬಂಧನಗೆಳನ್ನು ಬದಲಿಸುವ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್),2025 (ವಿಬಿ-ಜಿ ರಾಮ್‌ ಜಿ) ಮಸೂದೆಗೆ...

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ. ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ...

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

ಢಾಕಾ: ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ...

ತೀವ್ರ ವಿರೋಧಗಳ ನಡುವೆ ಗಣರಾಜ್ಯೋತ್ಸವ ಆಚರಣೆಯಲ್ಲಿ ‘ವಂದೇ ಮಾತರಂ’ ಹಾಡಲು ನಿರ್ಧರಿಸಿದ ಕೇಂದ್ರ ಸರ್ಕಾರ 

ಗಣರಾಜ್ಯೋತ್ಸವದ ಸಂದರ್ಭದಲ್ಲಿ 'ವಂದೇ ಮಾತರಂ' ಗೀತೆಯನ್ನು ಪ್ರಧಾನವಾಗಿ ಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಯುರೋಪಿಯನ್ ಒಕ್ಕೂಟದ ನಾಯಕರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಆಂಟೋನಿಯೊ ಕೋಸ್ಟಾ ಮುಂದಿನ ತಿಂಗಳು ಭಾರತಕ್ಕೆ ಆಗಮಿಸುವ...

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ. ಈ ಬೆನ್ನಲ್ಲೇ...

ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಬಾಗಲಕೋಟೆ: ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ ಶಿಕ್ಷಕ ದಂಪತಿ ಬುದ್ಧಿಮಾಂದ್ಯನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಧೋಳ ತಾಲೂಕಿನ ಮಂಟೂರು ಗ್ರಾಮದ 16...

ಜೆಫ್ರಿ ಎಪ್‌ಸ್ಟೀನ್ ಫೈಲ್ಸ್: ನ್ಯಾಯಾಂಗ ಇಲಾಖೆಯ ವೆಬ್ ಪುಟದಿಂದ ಟ್ರಂಪ್ ಫೋಟೋ ಸೇರಿದಂತೆ 16 ದಾಖಲೆಗಳು ಕಣ್ಮರೆ 

ನ್ಯೂಯಾರ್ಕ್: ಜೆಫ್ರಿ ಎಪ್‌ಸ್ಟೀನ್ ಗೆ ಸಂಬಂಧಿಸಿದ ದಾಖಲೆಗಳಿರುವ ಅಮೆರಿಕದ ನ್ಯಾಯ ಇಲಾಖೆಯ (Justice Department) ಸಾರ್ವಜನಿಕ ವೆಬ್‌ಪುಟದಿಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಸೇರಿದಂತೆ ಕನಿಷ್ಟ 16 ದಾಖಲೆಗಳು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಪ್ರಾಪ್ತ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್...

ದಕ್ಷಿಣ ಆಫ್ರಿಕಾದಲ್ಲಿ ಸಾರ್ವಜನಿಕರ ಮೇಲೆ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಜನರ ಸಾವು 

ಜೋಹಾನ್ಸ್‌ಬರ್ಗ್‌ನ ಹೊರಗಿನ ಬಾರ್‌ನಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ...

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20)...