Homeಅಂತರಾಷ್ಟ್ರೀಯಅನುದಾನ ತಡೆ ಹಿಡಿದ ಟ್ರಂಪ್ ಆಡಳಿತ: ಕಾನೂನು ಸಮರಕ್ಕೆ ಮುಂದಾದ ಹಾರ್ವರ್ಡ್‌ ವಿವಿ

ಅನುದಾನ ತಡೆ ಹಿಡಿದ ಟ್ರಂಪ್ ಆಡಳಿತ: ಕಾನೂನು ಸಮರಕ್ಕೆ ಮುಂದಾದ ಹಾರ್ವರ್ಡ್‌ ವಿವಿ

- Advertisement -
- Advertisement -

ತನ್ನ ತಾಳಕ್ಕೆ ತಕ್ಕಂತೆ ಕುಣಿಯದ್ದಕ್ಕೆ 2.2 ಬಿಲಿಯನ್ ಡಾಲರ್‌ಗಿಂತ ಹೆಚ್ಚಿನ ಅನುದಾನವನ್ನು ತಡೆ ಹಿಡಿದ ಟ್ರಂಪ್ ಆಡಳಿತದ ವಿರುದ್ಧ ಮೊಕದ್ದಮೆ ದಾಖಲಿಸಿರುವುದಾಗಿ ಹಾರ್ವರ್ಡ್‌ ವಿಶ್ವ ವಿದ್ಯಾಲಯ ಪ್ರಕಟಿಸಿದೆ.

ಏಪ್ರಿಲ್ 11ರಂದು ಹಾರ್ವರ್ಡ್‌ಗೆ ಬರೆದ ಪತ್ರದಲ್ಲಿ, ಟ್ರಂಪ್ ಆಡಳಿತವು ವಿಶ್ವವಿದ್ಯಾಲಯದ ಚಟುವಟಿಕೆಗಳಿಗೆ ಮೂಗುದಾರ ಹಾಕುವ ಹಲವು ಬೇಡಿಕೆಗಳನ್ನು ಮುಂದಿಟ್ಟಿತ್ತು.

ಅಮೆರಿಕನ್ ಮೌಲ್ಯಗಳಿಗೆ ವಿರುದ್ದವಾಗಿರುವ ವಿದ್ಯಾರ್ಥಿಗಳ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಬೇಕು.ಯಹೂದಿ ವಿರೋಧಿ ಮನಸ್ಥಿತಿಯನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನು ಪರಿಶೀಲಿಸಲು ಬಾಹ್ಯ ಸರ್ಕಾರ-ಅನುಮೋದಿತ ಪಕ್ಷಕ್ಕೆ ಅವಕಾಶ ನೀಡಬೇಕು. ಕ್ಯಾಂಪಸ್‌ನಲ್ಲಿ ಮಾಸ್ಕ್‌ ನಿಷೇಧಿಸುವುದು, ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ ಉಪಕ್ರಮಗಳನ್ನು ಕೊನೆಗೊಳಿಸುವುದು, ಅಪರಾಧ ಚಟುವಟಿಕೆ, ಹಿಂಸೆ ಅಥವಾ ಕಿರುಕುಳವನ್ನು ಉತ್ತೇಜಿಸುವ ಆರೋಪ ಹೊತ್ತಿರುವ ವಿದ್ಯಾರ್ಥಿ ಕ್ಲಬ್‌ಗಳ ಮಾನ್ಯತೆ ರದ್ದುಪಡಿಸುವುದು ಸರ್ಕಾರದ ಬೇಡಿಕೆಗಳಲ್ಲಿ ಸೇರಿವೆ.

ಏಪ್ರಿಲ್ 14ರಂದು ವಿಶ್ವವಿದ್ಯಾಲಯ ಸಮುದಾಯಕ್ಕೆ ಬರೆದ ಹಾರ್ವರ್ಡ್ ಅಧ್ಯಕ್ಷ ಅಲನ್ ಗಾರ್ಬರ್ ವಿಶ್ವವಿದ್ಯಾನಿಲಯವು ಸರ್ಕಾರ ಬೇಡಿಕೆಗಳಿಗೆ ಮಣಿಯುವುದಿಲ್ಲ ಎಂದು ಹೇಳಿದ್ದರು. ಈ ಬೆನ್ನಲ್ಲೇ ಸರ್ಕಾರ ಅನುದಾನ ತಡೆ ಹಿಡಿದಿದೆ ಎಂದು ವರದಿಯಾಗಿದೆ.

“ವಿಶ್ವ ವಿದ್ಯಾಲಯದ ವೈದ್ಯಕೀಯ, ವೈಜ್ಞಾನಿಕ, ತಾಂತ್ರಿಕ ಮತ್ತು ಇತರ ವಿಭಾಗಗಳು ಮತ್ತು ಯಹೂದಿ ವಿರೋಧಿ ಮನಸ್ಥಿತಿಗಳ ನಡುವೆ ಸಂಪರ್ಕ ಇರುವುದನ್ನು ತೋರಿಸಲು ಸರ್ಕಾರಕ್ಕೆ ಸಾಧ್ಯವಿಲ್ಲ. ಈ ವಿಭಾಗಗಳು ಅಮೆರಿಕನ್ನರ ಜೀವಗಳನ್ನು ಉಳಿಸುವ, ಅಮೆರಿಕನ್ನರ ಯಶಸ್ಸನ್ನು ಬೆಳೆಸುವ, ಅಮೆರಿಕನ್ ಭದ್ರತೆಯನ್ನು ಕಾಪಾಡುವ ಮತ್ತು ನಾವೀನ್ಯತೆಯಲ್ಲಿ ಜಾಗತಿಕ ನಾಯಕನಾಗಿ ಅಮೆರಿಕದ ಸ್ಥಾನವನ್ನು ಕಾಯ್ದುಕೊಳ್ಳುವ ಗುರಿಯನ್ನು ಹೊಂದಿವೆ” ಎಂದು ಬೋಸ್ಟನ್ ಫೆಡರಲ್ ನ್ಯಾಯಾಲಯಕ್ಕೆ ಸಲ್ಲಿಸಲಾದ ಮೊಕದ್ದಮೆಯಲ್ಲಿ ಹಾರ್ವರ್ಡ್‌ ಹೇಳಿದೆ.

“ಹಾರ್ವರ್ಡ್‌ನ ಸಂಶೋಧನಾ ಕಾರ್ಯಕ್ರಮಗಳು, ಆ ಸಂಶೋಧನೆಯ ಫಲಾನುಭವಿಗಳು ಮತ್ತು ಅಮೆರಿಕದ ನಾವೀನ್ಯತೆ ಮತ್ತು ಪ್ರಗತಿಯನ್ನು ಹೆಚ್ಚಿಸುವ ರಾಷ್ಟ್ರೀಯ ಹಿತಾಸಕ್ತಿಯ ಶತಕೋಟಿ ಡಾಲರ್‌ಗಳ ಫೆಡರಲ್ ಸಂಶೋಧನಾ ನಿಧಿಯನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸುವುದರಿಂದ ಉಂಟಾಗುವ ಗಮನಾರ್ಹ ಪರಿಣಾಮಗಳನ್ನು ಸರ್ಕಾರ ಒಪ್ಪಿಕೊಂಡಿಲ್ಲ” ಎಂದು ಆರೋಪಿಸಿದೆ.

ಅನುದಾ ಸ್ಥಗಿತವನ್ನು “ಅನಿಯಂತ್ರಿತ ಮತ್ತು ವಿಚಿತ್ರವಾದದ್ದು” ಎಂದು ಕರೆದಿರುವ ಹಾರ್ವರ್ಡ್‌, ಇದು ನಾಗರಿಕ ಹಕ್ಕುಗಳ ಕಾಯ್ದೆಯ ಶೀರ್ಷಿಕೆ VIರ ಶಾಸನಬದ್ಧ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದೆ. ವಿವಿ ಆರೋಪಕ್ಕೆ ಸರ್ಕಾರ ತಿರುಗೇಟು ಕೊಟ್ಟಿದೆ.

“ಹಾರ್ವರ್ಡ್‌ನಂತಹ ಸಂಸ್ಥೆಗಳಿಗೆ ಫೆಡರಲ್ ಅನುದಾನ ಕೊನೆಗೊಳ್ಳುತ್ತಿದೆ. ಈ ಸಂಸ್ಥೆಗಳು ಹೆಣಗಾಡುತ್ತಿರುವ ಅಮೆರಿಕನ್ನರ ತೆರಿಗೆ ಹಣದಿಂದ ತಮ್ಮ ಅಧಿಕಾರಿಗಳನ್ನು ಶ್ರೀಮಂತಗೊಳಿಸುತ್ತಿವೆ.
ತೆರಿಗೆದಾರರ ನಿಧಿಗಳು ಒಂದು ಸವಲತ್ತು. ಆ ಸವಲತ್ತನ್ನು ಪಡೆಯಲು ಅಗತ್ಯವಾದ ಮೂಲಭೂತ ಷರತ್ತುಗಳನ್ನು ಪೂರೈಸಲು ಹಾರ್ವರ್ಡ್ ವಿಫಲವಾಗಿದೆ” ಎಂದು ಶ್ವೇತಭವನದ ವಕ್ತಾರ ಹ್ಯಾರಿಸನ್ ಫೀಲ್ಡ್ಸ್ ಸೋಮವಾರ ಹೇಳಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...