ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ತನ್ನ ವೆಬ್ಸೈಟ್ನಲ್ಲಿ ಬಹಳ ತಡವಾಗಿ ಅಪ್ಡೇಡ್ ಮಾಡಿದ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪತ್ರ ಬರೆದಿದ್ದಾರೆ.
ಬೆಳಿಗ್ಗೆ 9ರಿಂದ 11 ಗಂಟೆಯ ನಡುವೆ ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಫಲಿತಾಂಶದ ಮಾಹಿತಿ ಬಹಳ ತಡವಾಗಿ ನೀಡಲಾಗಿದೆ ಜೈರಾಮ್ ರಮೇಶ್ ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಲೋಕಸಭಾ ಚುನಾವಣೆಯಂತೆಯೇ, ಹರಿಯಾಣ ಚುನಾವಣೆಯಲ್ಲಿ ನಾವು ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಚುನಾವಣಾ ಫಲಿತಾಂಶಗಳ ಕ್ಷಣ ಕ್ಷಣದ ಅಂಕಿ-ಅಂಶಗಳ ಅಪ್ಲೋಡ್ ಮಾಡುವ ಕಾರ್ಯದಲ್ಲಿ ನಿಧಾನಗತಿಯನ್ನು ನೋಡಿದ್ದೇವೆ. ದಾರಿ ತಪ್ಪಿಸುವ ರೀತಿ ಮಾಹಿತಿ ಅಪ್ಲೋಡ್ ಮಾಡಲು ಬಿಜೆಪಿ ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆಯಾ? ಎಂದು ಅವರು ಪ್ರಶ್ನಿಸಿದ್ದಾರೆ.
Here is my letter to @ECISVEEP on the inordinate and unacceptable delay in updating trends in the Haryana assembly elections pic.twitter.com/Lvq747seTz
— Jairam Ramesh (@Jairam_Ramesh) October 8, 2024
ಸುಳ್ಳು ಮತ್ತು ದುರುದ್ದೇಶಪೂರಿತ ಸುದ್ದಿಗಳನ್ನು ತಕ್ಷಣವೇ ಎದುರಿಸಲು ವೆಬ್ಸೈಟ್ನಲ್ಲಿ ನಿಜವಾದ ಮತ್ತು ನಿಖರವಾದ ಅಂಕಿ ಅಂಶಗಳನ್ನು ಅಪ್ಲೋಡ್ ಮಾಡಲು ಅಧಿಕಾರಿಗಳಿಗೆ ತಕ್ಷಣವೇ ನಿರ್ದೇಶನಗಳನ್ನು ನೀಡುವಂತೆ ಜೈರಾಮ್ ರಮೇಶ್ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.
ಇಂದು (ಅ.8) ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾದಾಗ ಹರಿಯಾಣದಲ್ಲಿ ಕಾಂಗ್ರೆಸ್ ಭಾರೀ ಮುನ್ನಡೆ ಸಾಧಿಸಿತ್ತು. ಆದರೆ, ಸುಮಾರು 11 ಗಂಟೆಗೆ ಏಕಾಏಕಿ ಟ್ರೆಂಡ್ ಬದಲಾಗಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.
ಈ ಸುದ್ದಿ ಬರೆಯುವ ಹೊತ್ತಿಗೆ (ಮಧ್ಯಾಹ್ನ 2 ಗಂಟೆ) ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ನೀಡಲಾದ ಮಾಹಿತಿ ಪ್ರಕಾರ, ಬಿಜೆಪಿ 48, ಕಾಂಗ್ರೆಸ್ 37 ಸ್ವತಂತ್ರ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರು.
ಇದನ್ನೂ ಓದಿ : Haryana Assembly Elections 2024 | ಹರಿಯಾಣ ಚುನಾವಣಾ ಫಲಿತಾಂಶ


