Homeದಲಿತ್ ಫೈಲ್ಸ್ಹರಿಯಾಣ| ಕಳ್ಳತನ ಆರೋಪದ ಮೇಲೆ 12 ವರ್ಷದ ದಲಿತ ಬಾಲಕನಿಗೆ ಚಿತ್ರಹಿಂಸೆ; ಕಟ್ಟಿಹಾಕಿ ದೌರ್ಜನ್ಯ

ಹರಿಯಾಣ| ಕಳ್ಳತನ ಆರೋಪದ ಮೇಲೆ 12 ವರ್ಷದ ದಲಿತ ಬಾಲಕನಿಗೆ ಚಿತ್ರಹಿಂಸೆ; ಕಟ್ಟಿಹಾಕಿ ದೌರ್ಜನ್ಯ

- Advertisement -
- Advertisement -

12 ವರ್ಷದ ದಲಿತ ಬಾಲಕನ ಮೇಲೆ ಕಳ್ಳತನದ ಶಂಕೆಯಿಂದ ಹಲವಾರು ಗಂಟೆಗಳ ಕಾಲ ಚಿತ್ರಹಿಂಸೆ ನೀಡಿ ಅಕ್ರಮ ಬಂಧನದಲ್ಲಿಟ್ಟ ಆರೋಪದ ಮೇಲೆ ಕುಟುಂಬವೊಂದರ 10 ಸದಸ್ಯರ ವಿರುದ್ಧ ಹರಿಯಾಣದ ಪಲ್ವಾಲ್‌ನಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳ ವಿರುದ್ಧ, ಸ್ವಯಂಪ್ರೇರಣೆಯಿಂದ ನೋವುಂಟುಮಾಡುವುದು, ಅಕ್ರಮ ಬಂಧನ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಇತರ ಅಪರಾಧಗಳ ಜೊತೆಗೆ ಆರೋಪ ಹೊರಿಸಲಾಗಿದೆ. ಇಲ್ಲಿಯವರೆಗೆ ಓರ್ವ ಶಂಕಿತನನ್ನು ಮಾತ್ರ ಬಂಧಿಸಲಾಗಿದೆ. ಆದರೆ ಮೂವರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಅಪ್ರಾಪ್ತ ವಯಸ್ಕನನ್ನು ಹಿಡಿದಿಟ್ಟುಕೊಂಡಿದ್ದ ಗುಂಪು, ಅವನ ಕೈಕಾಲುಗಳನ್ನು ಕಟ್ಟಿ, ಪದೇ ಪದೇ ವಿದ್ಯುತ್ ಶಾಕ್‌ ನೀಡಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಬಾಲಕ ತನಿಖಾಧಿಕಾರಿಗಳಿಗೆ ತಿಳಿಸಿದ್ದಾನೆ.

ಪೊಲೀಸರ ಪ್ರಕಾರ, ಡಿಸೆಂಬರ್ 10 ಮತ್ತು 11 ರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಸಂತ್ರಸ್ತ ಬಾಲಕ, ತನ್ನ ವಿಧವೆ ತಾಯಿಯನ್ನು ಪೋಷಿಸಲು ಮದುವೆ ಮೆರವಣಿಗೆಗಳಲ್ಲಿ ದೀಪಗಳನ್ನು ಹೊರುವ ಕೆಲಸ ಮಾಡುತ್ತಿದ್ದ. ಕೆಲಸ ಮುಗಿಸಿ ಇಬ್ಬರು ಗೆಳೆಯರೊಂದಿಗೆ ಹೊಡಾಲ್‌ನಿಂದ ಬಂಚಾರಿ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ, ರಾತ್ರಿ 11.30 ರ ಸುಮಾರಿಗೆ ಕುಡಿದ ಮತ್ತಿನಲ್ಲಿದ್ದ ನಿವಾಸಿಗಳು ಚಲಾಯಿಸುತ್ತಿದ್ದ ಕಾರು ಅವರನ್ನು ಬೆನ್ನಟ್ಟಲು ಪ್ರಾರಂಭಿಸಿತು.

ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ, ಬಾಲಕ ಮನೆಯ ಆವರಣಕ್ಕೆ ಹಾರಿದ್ದಾನೆ. ಆದರೆ ಉಳಿದ ಇಬ್ಬರು ಹಳ್ಳಿಯ ಕಡೆಗೆ ಓಡಿಹೋದರು ಎಂದು ಬಾಲಕ ಹೇಳಿದ್ದಾನೆ.

“ಅವನು ಕಳ್ಳನೆಂದು ಶಂಕಿಸಿದ ನಿವಾಸಿಗಳು, ಅಪ್ರಾಪ್ತ ವಯಸ್ಕನನ್ನು ಹಿಡಿದರು. ಅವನು ಬಿಟ್ಟುಬಿಡುವಂತೆ ಬೇಡಿಕೊಳ್ಳುತ್ತಲೇ ಇದ್ದಾಗ, ಗುಂಪು ಬಾಲಕನ ಗುರುತು ಕೇಳಿದ ನಂತರ ಅವನ ಮೇಲೆ ಹಲ್ಲೆ ನಡೆಸಿದರು. ಅವರು ಬಾಲಕನನ್ನು ಮನೆಯೊಳಗೆ ಕರೆದೊಯ್ದು, ಅವನ ಕೈಕಾಲುಗಳನ್ನು ಕಟ್ಟಿ, ಮೂರ್ಛೆ ಹೋದ ನಂತರವೂ ಗಂಟೆಗಟ್ಟಲೆ ವಿದ್ಯುತ್ ಶಾಕ್ ನೀಡಿದರು” ಎಂದು ಅಧಿಕಾರಿ ಹೇಳಿದರು.

ಗುಂಪು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದೆ ಎಂದು ಬಲಿಪಶುವಿನ ಹೇಳಿಕೆಯನ್ನು ಉಲ್ಲೇಖಿಸಿ ಅಧಿಕಾರಿ ಹೇಳಿದರು.

ಅವರು ಹುಡುಗನನ್ನು ಬಂಧಿಸಿದ ಕೆಲವೇ ಗಂಟೆಗಳ ನಂತರ, ಅಂತಿಮವಾಗಿ ಪೊಲೀಸರಿಗೆ ಕರೆ ಮಾಡಿ ಬಲಿಪಶುವನ್ನು ವಶಕ್ಕೆ ಪಡೆದರು. 12 ವರ್ಷದ ಬಾಲಕ ಕಳ್ಳತನದ ಪ್ರಕರಣದಲ್ಲಿ ಶಂಕಿತನಾಗಿದ್ದರಿಂದ ಆ ಸಮಯದಲ್ಲಿ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹಲ್ಲೆಯ ಪರಿಣಾಮವಾಗಿ ಬಲಿಪಶುವಿನ ಎದೆ ಮತ್ತು ಹೊಟ್ಟೆಯ ಮೇಲೆ ಕನಿಷ್ಠ 16 ಸುಟ್ಟ ಗಾಯಗಳಾಗಿವೆ. ಕರೆಂಟ್ ವೈರ್‌ಗಳನ್ನು ಮುಟ್ಟಿದ್ದರಿಂದ ಅವನ ಎದೆ ಮತ್ತು ಹೊಟ್ಟೆಯ ಮೇಲೆ ಕನಿಷ್ಠ 16 ಸುಟ್ಟ ಗಾಯಗಳಾಗಿವೆ ಎಂದು ಅಪರಾಧ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರು ಈ ವಿಷಯದ ಕುರಿತು ಧ್ವನಿ ಎತ್ತಿದ ನಂತರ, ಡಿಸೆಂಬರ್ 13 ರಂದು, ಪೊಲೀಸರು ಹತ್ತು ಜನರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್‌ಗಳು 115 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 127(2) (ಅಕ್ರಮ ಬಂಧನ), 190 (ಕಾನೂನುಬಾಹಿರ ಸಭೆ), 191(2) (ಗಲಭೆ) ಮತ್ತು 351(3) (ಸಾವು ಅಥವಾ ಗಂಭೀರ ಗಾಯವನ್ನುಂಟುಮಾಡುವ ಬೆದರಿಕೆಯಿಂದ ಕ್ರಿಮಿನಲ್ ಬೆದರಿಕೆ) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ ಕಾಯ್ದೆ) ಮತ್ತು ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯಡಿಯಲ್ಲಿ ಮುಂಡ್ಕಟಿ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ.

ಡಿಸೆಂಬರ್ 11 ರಂದು ಮುಂಡ್ಕಟಿ ಪೊಲೀಸ್ ಠಾಣೆಯಿಂದ ತನಗೆ ಕರೆ ಬಂದಿತ್ತು ಎಂದು ಸಂತ್ರಸ್ತೆಯ ತಾಯಿ ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ. “ನಾನು ಅಲ್ಲಿಗೆ ತಲುಪಿದಾಗ ಮಗನನ್ನು ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡೆ. ಅವನಿಗೆ ನಡೆಯಲು ಸಹ ಸಾಧ್ಯವಾಗಲಿಲ್ಲ” ಎಂದು ಅವರು ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ.

“ನಾನು ಮಗನನ್ನು ಹೊಡಾಲ್‌ನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದೆ. ಆದರೆ, ಅವನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಬೇರೆ ಆಸ್ಪತ್ರೆಗೆ ಕಳುಹಿಸಿದರು. ನಾನು ಅವನನ್ನು ಪಲ್ವಾಲ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ದೆ, ಅಲ್ಲಿಂದ ಅವನನ್ನು ಫರಿದಾಬಾದ್‌ಗೆ ಸ್ಥಳಾಂತರಿಸಲಾಯಿತು” ಎಂದು ಅವರು ಹೇಳಿದರು.

ಡಿಎಸ್‌ಪಿ (ಹೊಡಾಲ್) ಸುರೇಂದರ್ ಕುಮಾರ್ ಮಾತನಾಡಿ, ಖಂಬಿ ಗ್ರಾಮದ ರಾಮ್ ಕುಮಾರ್ ಎಂದು ಗುರುತಿಸಲಾದ ಓರ್ವ ಆರೋಪಿಯನ್ನು ಮಾತ್ರ ಇಲ್ಲಿಯವರೆಗೆ ಬಂಧಿಸಲಾಗಿದೆ (ಡಿಸೆಂಬರ್ 20 ರಂದು) ಎಂದು ಹೇಳಿದರು. “ಮೂವರು ಪ್ರಮುಖ ಆರೋಪಿಗಳು ಬಂಚರಿಯಿಂದ ಓಡಿಹೋದ ನಂತರ ಈತ ಅವರಿಗೆ ಆಶ್ರಯ ನೀಡಿದ್ದನು” ಎಂದು ಅವರು ಹೇಳಿದರು.

ಡಿಸೆಂಬರ್ 22 ರಂದು ಮೂವರು ಪ್ರಮುಖ ಶಂಕಿತರು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಸಲ್ಲಿಸಿದರು. ಅಪ್ರಾಪ್ತ ವಯಸ್ಕನಿಗೆ ಆಗಿರುವ ಗಾಯಗಳ ಬಗ್ಗೆ ಯಾವುದೇ ವೈದ್ಯಕೀಯ ವರದಿ ಲಭ್ಯವಿಲ್ಲದ ಕಾರಣ, ಬುಧವಾರ ಪಲ್ವಾಲ್‌ನ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...