Homeಮುಖಪುಟಹರಿಯಾಣ | 20 ಕ್ಷೇತ್ರಗಳ ಇವಿಎಂಗಳನ್ನು ಸೀಲ್ ಮಾಡಲು ಕೇಳಿದ ಕಾಂಗ್ರೆಸ್

ಹರಿಯಾಣ | 20 ಕ್ಷೇತ್ರಗಳ ಇವಿಎಂಗಳನ್ನು ಸೀಲ್ ಮಾಡಲು ಕೇಳಿದ ಕಾಂಗ್ರೆಸ್

- Advertisement -
- Advertisement -

ಹರಿಯಾಣದ 20 ವಿಧಾನಸಭಾ ಕ್ಷೇತ್ರಗಳಲ್ಲಿನ ಮತ ಎಣಿಕೆ ಪ್ರಕ್ರಿಯೆಯಲ್ಲಿನ ಅಕ್ರಮಗಳ ಕುರಿತು ತನಿಖೆ ಪೂರ್ಣಗೊಳ್ಳುವವರೆಗೆ ವಿದ್ಯುನ್ಮಾನ ಮತಯಂತ್ರಗಳಿಗೆ ಮೊಹರು ಹಾಕುವಂತೆ ಕಾಂಗ್ರೆಸ್ ಬುಧವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. 90 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 37 ಕ್ಷೇತ್ರಗಳಲ್ಲಿ ಗೆದ್ದಿದೆ.ಹರಿಯಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳವಾರ ರಾಜ್ಯದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್ ನಾಯಕರಾದ ಪವನ್ ಖೇರಾ ಮತ್ತು ಜೈರಾಮ್ ರಮೇಶ್ ಅವರು ಮತ ಎಣಿಕೆ ಪ್ರಕ್ರಿಯೆ ಮತ್ತು ಹಲವಾರು ಜಿಲ್ಲೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳ ಕಾರ್ಯಚಟುವಟಿಕೆಗೆ ಸಂಬಂಧಿಸಿ “ಗಂಭೀರ ಸಮಸ್ಯೆಗಳನ್ನು” ಉಲ್ಲೇಖಿಸಿ, ಫಲಿತಾಂಶಗಳು “ಸ್ವೀಕಾರಾರ್ಹವಲ್ಲ” ಎಂದು ಹೇಳಿದ್ದರು.

 

ಇದನ್ನೂಓದಿ: ಕೇಂದ್ರದಿಂದ ₹1,78,173 ಕೋಟಿ ತೆರಿಗೆ ಹಂಚಿಕೆ; ಬಿಜೆಪಿ ಆಡಳಿತದ ರಾಜ್ಯಗಳಿಗೆ ಸಿಂಹಪಾಲು

ಬಿಜೆಪಿ ಗೆದ್ದ ಹಿಸಾರ್, ಮಹೇಂದ್ರಗಢ ಮತ್ತು ಪಾಣಿಪತ್ ಕ್ಷೇತ್ರಗಳಿಂದ ವಿದ್ಯುನ್ಮಾನ ಮತಯಂತ್ರಗಳು 99% ಬ್ಯಾಟರಿ ಮಟ್ಟವನ್ನು ಹೊಂದಿರುವ ಬಗ್ಗೆ ಕಾಂಗ್ರೆಸ್‌ಗೆ ದೂರುಗಳು ಬಂದಿವೆ ಎಂದು ಪಕ್ಷದ ನಾಯಕ ಪವನ್ ಖೇರಾ ಆರೋಪಿಸಿದ್ದಾರೆ. ಮತಯಂತ್ರಗಳು 60% ರಿಂದ 70% ವರೆಗೆ ಬ್ಯಾಟರಿ ಮಟ್ಟವನ್ನು ಹೊಂದಿದ್ದಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ್ದ ಚುನಾವಣಾ ಆಯೋಗ, ಕಾಂಗ್ರೆಸ್‌ನ ಹೇಳಿಕೆಗಳು, “ದೇಶದ ಶ್ರೀಮಂತ ಪ್ರಜಾಪ್ರಭುತ್ವ ಪರಂಪರೆಯಲ್ಲಿ ಈ ವರೆಗೆ ಕೇಳಿರದ” ವಿಷಯಗಳಾಗಿವೆ ಎಂದು ಹೇಳಿದೆ. ಚುನಾವಣಾ ಫಲಿತಾಂಶದ ಒಂದು ದಿನದ ನಂತರ ಕಾಂಗ್ರೆಸ್ ಈ ಆಗ್ರಹ ಮುಂದಿಟ್ಟಿದೆ. ಬಹುತೇಕ ಎಕ್ಸಿಟ್ ಪೋಲ್‌ಗಳು ರಾಜ್ಯದಲ್ಲಿ ಕಾಂಗ್ರೆಸ್‌ ಗೆಲುವಿನ ಬಗ್ಗೆ ಮುನ್ಸೂಚನೆ ನೀಡಿದ್ದವು.ಹರಿಯಾಣ

ಬುಧವಾರದಂದು ಪವನ್ ಖೇರಾ, ಜೈರಾಮ್ ರಮೇಶ್, ಕೆಸಿ ವೇಣುಗೋಪಾಲ್, ಅಶೋಕ್ ಗೆಹ್ಲೋಟ್, ಅಜಯ್ ಮಾಕನ್ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಸೇರಿದಂತೆ ಕಾಂಗ್ರೆಸ್ ನಾಯಕರ ನಿಯೋಗವು ನವದೆಹಲಿಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ ಅಕ್ರಮಗಳ ಕುರಿತು ಮನವಿ ಸಲ್ಲಿಸಿವೆ.

ವಿಡಿಯೊ ನೋಡಿ: 2026 Delimitation: ಲೋಕಸಭಾ ಸ್ಥಾನಗಳ ಸಂಖ್ಯೆ 848ಕ್ಕೆ ಹೆಚ್ಚಳ – ಯಾರಿಗೆ ಲಾಭ? ಯಾರಿಗೆ ನಷ್ಟ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...