Homeಮುಖಪುಟಹರಿಯಾಣ | 20 ಕ್ಷೇತ್ರಗಳ ಇವಿಎಂಗಳನ್ನು ಸೀಲ್ ಮಾಡಲು ಕೇಳಿದ ಕಾಂಗ್ರೆಸ್

ಹರಿಯಾಣ | 20 ಕ್ಷೇತ್ರಗಳ ಇವಿಎಂಗಳನ್ನು ಸೀಲ್ ಮಾಡಲು ಕೇಳಿದ ಕಾಂಗ್ರೆಸ್

- Advertisement -
- Advertisement -

ಹರಿಯಾಣದ 20 ವಿಧಾನಸಭಾ ಕ್ಷೇತ್ರಗಳಲ್ಲಿನ ಮತ ಎಣಿಕೆ ಪ್ರಕ್ರಿಯೆಯಲ್ಲಿನ ಅಕ್ರಮಗಳ ಕುರಿತು ತನಿಖೆ ಪೂರ್ಣಗೊಳ್ಳುವವರೆಗೆ ವಿದ್ಯುನ್ಮಾನ ಮತಯಂತ್ರಗಳಿಗೆ ಮೊಹರು ಹಾಕುವಂತೆ ಕಾಂಗ್ರೆಸ್ ಬುಧವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. 90 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 37 ಕ್ಷೇತ್ರಗಳಲ್ಲಿ ಗೆದ್ದಿದೆ.ಹರಿಯಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳವಾರ ರಾಜ್ಯದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್ ನಾಯಕರಾದ ಪವನ್ ಖೇರಾ ಮತ್ತು ಜೈರಾಮ್ ರಮೇಶ್ ಅವರು ಮತ ಎಣಿಕೆ ಪ್ರಕ್ರಿಯೆ ಮತ್ತು ಹಲವಾರು ಜಿಲ್ಲೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳ ಕಾರ್ಯಚಟುವಟಿಕೆಗೆ ಸಂಬಂಧಿಸಿ “ಗಂಭೀರ ಸಮಸ್ಯೆಗಳನ್ನು” ಉಲ್ಲೇಖಿಸಿ, ಫಲಿತಾಂಶಗಳು “ಸ್ವೀಕಾರಾರ್ಹವಲ್ಲ” ಎಂದು ಹೇಳಿದ್ದರು.

 

ಇದನ್ನೂಓದಿ: ಕೇಂದ್ರದಿಂದ ₹1,78,173 ಕೋಟಿ ತೆರಿಗೆ ಹಂಚಿಕೆ; ಬಿಜೆಪಿ ಆಡಳಿತದ ರಾಜ್ಯಗಳಿಗೆ ಸಿಂಹಪಾಲು

ಬಿಜೆಪಿ ಗೆದ್ದ ಹಿಸಾರ್, ಮಹೇಂದ್ರಗಢ ಮತ್ತು ಪಾಣಿಪತ್ ಕ್ಷೇತ್ರಗಳಿಂದ ವಿದ್ಯುನ್ಮಾನ ಮತಯಂತ್ರಗಳು 99% ಬ್ಯಾಟರಿ ಮಟ್ಟವನ್ನು ಹೊಂದಿರುವ ಬಗ್ಗೆ ಕಾಂಗ್ರೆಸ್‌ಗೆ ದೂರುಗಳು ಬಂದಿವೆ ಎಂದು ಪಕ್ಷದ ನಾಯಕ ಪವನ್ ಖೇರಾ ಆರೋಪಿಸಿದ್ದಾರೆ. ಮತಯಂತ್ರಗಳು 60% ರಿಂದ 70% ವರೆಗೆ ಬ್ಯಾಟರಿ ಮಟ್ಟವನ್ನು ಹೊಂದಿದ್ದಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ್ದ ಚುನಾವಣಾ ಆಯೋಗ, ಕಾಂಗ್ರೆಸ್‌ನ ಹೇಳಿಕೆಗಳು, “ದೇಶದ ಶ್ರೀಮಂತ ಪ್ರಜಾಪ್ರಭುತ್ವ ಪರಂಪರೆಯಲ್ಲಿ ಈ ವರೆಗೆ ಕೇಳಿರದ” ವಿಷಯಗಳಾಗಿವೆ ಎಂದು ಹೇಳಿದೆ. ಚುನಾವಣಾ ಫಲಿತಾಂಶದ ಒಂದು ದಿನದ ನಂತರ ಕಾಂಗ್ರೆಸ್ ಈ ಆಗ್ರಹ ಮುಂದಿಟ್ಟಿದೆ. ಬಹುತೇಕ ಎಕ್ಸಿಟ್ ಪೋಲ್‌ಗಳು ರಾಜ್ಯದಲ್ಲಿ ಕಾಂಗ್ರೆಸ್‌ ಗೆಲುವಿನ ಬಗ್ಗೆ ಮುನ್ಸೂಚನೆ ನೀಡಿದ್ದವು.ಹರಿಯಾಣ

ಬುಧವಾರದಂದು ಪವನ್ ಖೇರಾ, ಜೈರಾಮ್ ರಮೇಶ್, ಕೆಸಿ ವೇಣುಗೋಪಾಲ್, ಅಶೋಕ್ ಗೆಹ್ಲೋಟ್, ಅಜಯ್ ಮಾಕನ್ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಸೇರಿದಂತೆ ಕಾಂಗ್ರೆಸ್ ನಾಯಕರ ನಿಯೋಗವು ನವದೆಹಲಿಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ ಅಕ್ರಮಗಳ ಕುರಿತು ಮನವಿ ಸಲ್ಲಿಸಿವೆ.

ವಿಡಿಯೊ ನೋಡಿ: 2026 Delimitation: ಲೋಕಸಭಾ ಸ್ಥಾನಗಳ ಸಂಖ್ಯೆ 848ಕ್ಕೆ ಹೆಚ್ಚಳ – ಯಾರಿಗೆ ಲಾಭ? ಯಾರಿಗೆ ನಷ್ಟ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...