Homeಮುಖಪುಟಹರಿಯಾಣ: ಹಾಡಹಗಲೇ ಯುವತಿಯನ್ನು ಗುಂಡಿಟ್ಟು ಕೊಂದ ದುರ್ಷ್ಕಮಿ

ಹರಿಯಾಣ: ಹಾಡಹಗಲೇ ಯುವತಿಯನ್ನು ಗುಂಡಿಟ್ಟು ಕೊಂದ ದುರ್ಷ್ಕಮಿ

ತೌಸೀಫ್‌ ನನ್ನ ಮಗಳಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ನಾವು 2018 ರಲ್ಲಿ ದೂರು ನೀಡಿದ್ದೆವು ಮತ್ತು ನಮ್ಮ ಮಗಳ ಮರ್ಯಾದೆಗೆ ಅಂಜಿ ನಾವು ದೂರನ್ನು ಹಿಂತೆಗೆದುಕೊಂಡಿದ್ದೇವು.- ಮೃತಳ ತಂದೆ

- Advertisement -
- Advertisement -

ಹರಿಯಾಣ ರಾಜ್ಯದ ಫರೀದಾಬಾದ್​ನಲ್ಲಿ 21 ವರ್ಷದ ಯುವತಿಯನ್ನು ತನ್ನ ಕಾಲೇಜಿನ ಹೊರಗಡೆ ಹಾಡಹಗಲೇ ಗುಂಡಿಟ್ಟು ಕೊಲ್ಲಲಾಗಿದೆ. ದೆಹಲಿಯಿಂದ ಕೇವಲ 30 ಕಿ.ಮೀ ದೂರದಲ್ಲಿರುವ ಬೀದಿಯಲ್ಲಿ ನಡೆದಿರುವ ಘಟನೆಯ ಭಯಾನಕ ವೀಡಿಯೊದಲ್ಲಿ ಜನರಲ್ಲಿ ಆತಂಕ ಉಂಟುಮಡಿದೆ.

ಸೋಮವಾರ(ಅ.26) ಮಧ್ಯಾಹ್ನ 3.40 ರ ಸುಮಾರಿಗೆ ಫರೀದಾಬಾದ್‌ನ ಬಲ್ಲಾಬ್‌ಗಢದ ಕಾಲೇಜೊಂದರ ಹೊರಗೆ ಈ ಘಟನೆ ನಡೆದಿದ್ದು, ನಿಖಿತಾ ತೋಮರ್ ಎಂಬ ಯುವತಿ ಪರೀಕ್ಷೆ ಮುಗಿಸಿ ಕಾಲೇಜಿನಿಂದ ಹೊರ ಬರುತ್ತಿದ್ದಂತೆ ಈ ದುರಂತ ಸಂಭವಿಸಿದೆ. ಕೃತ್ಯ ನಡೆಸಿದ ಆರೋಪಿ ತೌಸೀಫ್ ಎಂಬುವವ​ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ತೌಸೀಫ್ ಮತ್ತು ಆತನ ಸ್ನೇಹಿತ ರೆಹಾನ್, ನಿಖಿತಾರನ್ನು ಅಪಹರಿಸಲು ಆಕೆ ಕಾಲೇಜಿನಿಂದ ಹೊರಬರುವುದನ್ನೇ ಕಾಯುತ್ತಾ ಕಾರಿನಲ್ಲಿ ಕುಳಿತ್ತಿದ್ದರು. ತೌಸೀಫ್ ಮತ್ತು ನಿಖಿತಾ ಒಬ್ಬರಿಗೊಬ್ಬರು ಪರಿಚಯವಿದ್ದರು ಜೊತೆಗೆ ಆರೋಪಿ ತೌಸೀಫ್ ಈ ಹಿಂದೆ ಕೂಡ 2018 ರಲ್ಲಿ ಆಕೆಯನ್ನು ಅಪಹರಿಸಿದ್ದರು ಎಂದು ಫರೀದಾಬಾದ್ ಪೊಲೀಸ್ ಅಧಿಕಾರಿ ಒ.ಪಿ.ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ನವರಾತ್ರಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ

ಯುವತಿಯನ್ನು ಅಪಹರಿಸಲು ಯತ್ನಿಸುವ ದೃಶ್ಯ ಹತ್ತಿರದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವತಿ ಬಂದೂಕು ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ಕಾಣಿಸುತ್ತದೆ. ಗುಂಡಿನ ದಾಳಿಗೆ ಒಳಗಾಗಿದ್ದ ನಿಖಿತಾರನ್ನು ಆಸ್ಪತ್ರೆಗೆ ಕೊಂಡೊಯ್ಯಲಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಮೃತ ನಿಖಿತಾ ತಂದೆ 2018 ರಲ್ಲಿ ಆತನ ವಿರುದ್ಧ ದೂರು ನೀಡಿದ್ದರೂ ಅದನ್ನು ಹಿಂತೆಗೆದುಕೊಂಡಿದ್ದರು. ಸದ್ಯ ಆರೋಪಿಗಳಾದ ತೌಸೀಫ್‌ ಮತ್ತು ರೆಹಾನ್ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ತೌಸೀಫ್‌ ನನ್ನ ಮಗಳಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ನಾವು 2018 ರಲ್ಲಿ ದೂರು ನೀಡಿದ್ದೆವು ಮತ್ತು ನಮ್ಮ ಮಗಳ ಮರ್ಯಾದೆಗೆ ಅಂಜಿ ನಾವು ದೂರನ್ನು ಹಿಂತೆಗೆದುಕೊಂಡಿದ್ದೇವು. ಆದರೆ ಈಗ ಅವರು ನನ್ನ ಮಗಳನ್ನು ಕೊಂದಿದ್ದಾರೆ” ಎಂದು ತಂದೆ ಎನ್‌ಡಿಟಿವಿಗೆ ತಿಳಿಸಿದ್ದಾರೆ. “ನನ್ನ ಮಗಳಿಗೆ ನ್ಯಾಯ ಬೇಕು. ಆಕೆಯನ್ನು ಕೊಂದ ರೀತಿಯೇ ಅವರಿಗು ಶಿಕ್ಷೆಯಾಗಬೇಕು ಎಂದು ನಿಖಿತಾ ಅವರ ತಾಯಿ ಆಕ್ರೋಶ ಹೊರಹಾಕಿದ್ದಾರೆ.

ಇದರ ಜೊತೆಗೆ ಯುವತಿಯ ಕುಟುಂಬ ಆಕೆಯ ಹತ್ಯೆಯನ್ನು ‘ಲವ್ ಜಿಹಾದ್’ ಎಂದು ಆರೋಪಿಸಿದೆ. ಘಟನೆ ಸಂಬಂಧ ನಗರದಲ್ಲಿ ಭಾರಿ ಪ್ರತಿಭಟನೆ ನಡೆಸಲಾಗಿದೆ. ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನ ಪಡಿಸುವಲ್ಲಿ ಸಫಲರಾಗಿದ್ದಾರೆ.

ಇಂಡಿಯಾ ಟುಡೆ ಜೊತೆ ಮಾತನಾಡಿರುವ ಸಂತ್ರಸ್ತೆಯ ಸಹೋದರಿ, “ಆರೋಪಿ 2018 ರಲ್ಲಿ ನಮ್ಮ ಸಹೋದರಿಯನ್ನು ಅಪಹರಿಸಲು ಯತ್ನಿಸಿದಾಗ, ಪೊಲೀಸರು ಏನನ್ನೂ ಮಾಡಲಿಲ್ಲ ಮತ್ತು ಬದಲಿಗೆ ನಮಗೆ ರಾಜಿ ಮಾಡಿಕೊಳ್ಳಲು  ಹೇಳಿದರು” ಎಂದು ಆರೋಪಿಸಿದ್ದಾರೆ.

ಜೊತೆಗೆ “ಆರೋಪಿ ತೌಸೀಫ್ ನಿಖಿತಾರನ್ನು ಮತಾಂತರಗೊಳಿಸಲು ಮತ್ತು ಮದುವೆಯಾಗಲು ಕೇಳುತ್ತಿದ್ದನು. ನಮ್ಮ ಸಹೋದರಿ ಒಪ್ಪಿರಲಿಲ್ಲ” ಎಂದು ಸಂತ್ರಸ್ತೆಯ ಸಹೋದರಿ ಆರೋಪಿಸಿದ್ದಾಳೆ.

ಇನ್ನು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ವಿಡಿಯೋದಿಂದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಘಟನೆಯನ್ನು ಗಮನಿಸಿದ್ದು, ಇತರ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹರಿಯಾಣ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದೆ.


ಇದನ್ನೂ ಓದಿ:  ಯುಪಿ: ಬಂದೂಕು ತೋರಿಸಿ 22 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...