Homeಮುಖಪುಟಹರಿಯಾಣ: ಹಾಡಹಗಲೇ ಯುವತಿಯನ್ನು ಗುಂಡಿಟ್ಟು ಕೊಂದ ದುರ್ಷ್ಕಮಿ

ಹರಿಯಾಣ: ಹಾಡಹಗಲೇ ಯುವತಿಯನ್ನು ಗುಂಡಿಟ್ಟು ಕೊಂದ ದುರ್ಷ್ಕಮಿ

ತೌಸೀಫ್‌ ನನ್ನ ಮಗಳಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ನಾವು 2018 ರಲ್ಲಿ ದೂರು ನೀಡಿದ್ದೆವು ಮತ್ತು ನಮ್ಮ ಮಗಳ ಮರ್ಯಾದೆಗೆ ಅಂಜಿ ನಾವು ದೂರನ್ನು ಹಿಂತೆಗೆದುಕೊಂಡಿದ್ದೇವು.- ಮೃತಳ ತಂದೆ

- Advertisement -
- Advertisement -

ಹರಿಯಾಣ ರಾಜ್ಯದ ಫರೀದಾಬಾದ್​ನಲ್ಲಿ 21 ವರ್ಷದ ಯುವತಿಯನ್ನು ತನ್ನ ಕಾಲೇಜಿನ ಹೊರಗಡೆ ಹಾಡಹಗಲೇ ಗುಂಡಿಟ್ಟು ಕೊಲ್ಲಲಾಗಿದೆ. ದೆಹಲಿಯಿಂದ ಕೇವಲ 30 ಕಿ.ಮೀ ದೂರದಲ್ಲಿರುವ ಬೀದಿಯಲ್ಲಿ ನಡೆದಿರುವ ಘಟನೆಯ ಭಯಾನಕ ವೀಡಿಯೊದಲ್ಲಿ ಜನರಲ್ಲಿ ಆತಂಕ ಉಂಟುಮಡಿದೆ.

ಸೋಮವಾರ(ಅ.26) ಮಧ್ಯಾಹ್ನ 3.40 ರ ಸುಮಾರಿಗೆ ಫರೀದಾಬಾದ್‌ನ ಬಲ್ಲಾಬ್‌ಗಢದ ಕಾಲೇಜೊಂದರ ಹೊರಗೆ ಈ ಘಟನೆ ನಡೆದಿದ್ದು, ನಿಖಿತಾ ತೋಮರ್ ಎಂಬ ಯುವತಿ ಪರೀಕ್ಷೆ ಮುಗಿಸಿ ಕಾಲೇಜಿನಿಂದ ಹೊರ ಬರುತ್ತಿದ್ದಂತೆ ಈ ದುರಂತ ಸಂಭವಿಸಿದೆ. ಕೃತ್ಯ ನಡೆಸಿದ ಆರೋಪಿ ತೌಸೀಫ್ ಎಂಬುವವ​ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ತೌಸೀಫ್ ಮತ್ತು ಆತನ ಸ್ನೇಹಿತ ರೆಹಾನ್, ನಿಖಿತಾರನ್ನು ಅಪಹರಿಸಲು ಆಕೆ ಕಾಲೇಜಿನಿಂದ ಹೊರಬರುವುದನ್ನೇ ಕಾಯುತ್ತಾ ಕಾರಿನಲ್ಲಿ ಕುಳಿತ್ತಿದ್ದರು. ತೌಸೀಫ್ ಮತ್ತು ನಿಖಿತಾ ಒಬ್ಬರಿಗೊಬ್ಬರು ಪರಿಚಯವಿದ್ದರು ಜೊತೆಗೆ ಆರೋಪಿ ತೌಸೀಫ್ ಈ ಹಿಂದೆ ಕೂಡ 2018 ರಲ್ಲಿ ಆಕೆಯನ್ನು ಅಪಹರಿಸಿದ್ದರು ಎಂದು ಫರೀದಾಬಾದ್ ಪೊಲೀಸ್ ಅಧಿಕಾರಿ ಒ.ಪಿ.ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ನವರಾತ್ರಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ

ಯುವತಿಯನ್ನು ಅಪಹರಿಸಲು ಯತ್ನಿಸುವ ದೃಶ್ಯ ಹತ್ತಿರದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವತಿ ಬಂದೂಕು ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ಕಾಣಿಸುತ್ತದೆ. ಗುಂಡಿನ ದಾಳಿಗೆ ಒಳಗಾಗಿದ್ದ ನಿಖಿತಾರನ್ನು ಆಸ್ಪತ್ರೆಗೆ ಕೊಂಡೊಯ್ಯಲಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಮೃತ ನಿಖಿತಾ ತಂದೆ 2018 ರಲ್ಲಿ ಆತನ ವಿರುದ್ಧ ದೂರು ನೀಡಿದ್ದರೂ ಅದನ್ನು ಹಿಂತೆಗೆದುಕೊಂಡಿದ್ದರು. ಸದ್ಯ ಆರೋಪಿಗಳಾದ ತೌಸೀಫ್‌ ಮತ್ತು ರೆಹಾನ್ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ತೌಸೀಫ್‌ ನನ್ನ ಮಗಳಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ನಾವು 2018 ರಲ್ಲಿ ದೂರು ನೀಡಿದ್ದೆವು ಮತ್ತು ನಮ್ಮ ಮಗಳ ಮರ್ಯಾದೆಗೆ ಅಂಜಿ ನಾವು ದೂರನ್ನು ಹಿಂತೆಗೆದುಕೊಂಡಿದ್ದೇವು. ಆದರೆ ಈಗ ಅವರು ನನ್ನ ಮಗಳನ್ನು ಕೊಂದಿದ್ದಾರೆ” ಎಂದು ತಂದೆ ಎನ್‌ಡಿಟಿವಿಗೆ ತಿಳಿಸಿದ್ದಾರೆ. “ನನ್ನ ಮಗಳಿಗೆ ನ್ಯಾಯ ಬೇಕು. ಆಕೆಯನ್ನು ಕೊಂದ ರೀತಿಯೇ ಅವರಿಗು ಶಿಕ್ಷೆಯಾಗಬೇಕು ಎಂದು ನಿಖಿತಾ ಅವರ ತಾಯಿ ಆಕ್ರೋಶ ಹೊರಹಾಕಿದ್ದಾರೆ.

ಇದರ ಜೊತೆಗೆ ಯುವತಿಯ ಕುಟುಂಬ ಆಕೆಯ ಹತ್ಯೆಯನ್ನು ‘ಲವ್ ಜಿಹಾದ್’ ಎಂದು ಆರೋಪಿಸಿದೆ. ಘಟನೆ ಸಂಬಂಧ ನಗರದಲ್ಲಿ ಭಾರಿ ಪ್ರತಿಭಟನೆ ನಡೆಸಲಾಗಿದೆ. ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನ ಪಡಿಸುವಲ್ಲಿ ಸಫಲರಾಗಿದ್ದಾರೆ.

ಇಂಡಿಯಾ ಟುಡೆ ಜೊತೆ ಮಾತನಾಡಿರುವ ಸಂತ್ರಸ್ತೆಯ ಸಹೋದರಿ, “ಆರೋಪಿ 2018 ರಲ್ಲಿ ನಮ್ಮ ಸಹೋದರಿಯನ್ನು ಅಪಹರಿಸಲು ಯತ್ನಿಸಿದಾಗ, ಪೊಲೀಸರು ಏನನ್ನೂ ಮಾಡಲಿಲ್ಲ ಮತ್ತು ಬದಲಿಗೆ ನಮಗೆ ರಾಜಿ ಮಾಡಿಕೊಳ್ಳಲು  ಹೇಳಿದರು” ಎಂದು ಆರೋಪಿಸಿದ್ದಾರೆ.

ಜೊತೆಗೆ “ಆರೋಪಿ ತೌಸೀಫ್ ನಿಖಿತಾರನ್ನು ಮತಾಂತರಗೊಳಿಸಲು ಮತ್ತು ಮದುವೆಯಾಗಲು ಕೇಳುತ್ತಿದ್ದನು. ನಮ್ಮ ಸಹೋದರಿ ಒಪ್ಪಿರಲಿಲ್ಲ” ಎಂದು ಸಂತ್ರಸ್ತೆಯ ಸಹೋದರಿ ಆರೋಪಿಸಿದ್ದಾಳೆ.

ಇನ್ನು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ವಿಡಿಯೋದಿಂದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಘಟನೆಯನ್ನು ಗಮನಿಸಿದ್ದು, ಇತರ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹರಿಯಾಣ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದೆ.


ಇದನ್ನೂ ಓದಿ:  ಯುಪಿ: ಬಂದೂಕು ತೋರಿಸಿ 22 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...