Homeಚಳವಳಿ'ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು' - ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

‘ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು’ – ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

"ಇದು ಸಮಾಜದ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಈಗ ಮುಂಚೂಣಿಯಲ್ಲಿ ನಿಲ್ಲದಿದ್ದರೆ ನಾನು ಕೇವಲ ರಾಜಕೀಯ ಮಾಡುತ್ತೇನೆ ಎಂದು ಜನರು ಭಾವಿಸುತ್ತಾರೆ"

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ಹರಿಯಾಣದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಅವರೊಂದಿಗೆ ಧರಣಿ ಮಾಡುತ್ತಿರುವ ಬಿಜೆಪಿ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಚೌಧರಿ ಬಿರೇಂದರ್ ಸಿಂಗ್, “ರೈತರ ಪ್ರತಿಭಟನೆ ಈಗ ಎಲ್ಲರ ಆಂದೋಲನವಾಗಿದೆ” ಎಂದು ಹೇಳಿದ್ದಾರೆ.

ಸರ್ ಛೋಟು ರಾಮ್ ಮಂಚ್‌ನ ಸದಸ್ಯರು ಧರಣಿಯನ್ನು ಆಯೋಜಿಸಿದ್ದಾರೆ. ಬಿರೇಂದರ್ ಸಿಂಗ್ ಅವರು, ಸ್ವಾತಂತ್ರಪೂರ್ವ ಭಾರತದ ಝಾಟ್ ನಾಯಕ ಸರ್ ಚೋಟು ರಾಮ್ ಅವರ ಮೊಮ್ಮಗನಾಗಿದ್ದು, ರೈತರುನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತಾನು ಉತ್ಸುಕನಾಗಿದ್ದೇನೆ ಹೇಳಿದ್ದಾರೆ.

ಇದನ್ನೂ ಓದಿ: ಹಿಂಸೆಯನ್ನೆ ಸ್ಥಾಯಿಯಾಗಿಟ್ಟುಕೊಂಡು ಕಾರುಣ್ಯವನ್ನು ಶೋಧಿಸಿದ ’ಕಿಮ್ ಕಿ ಡುಕ್’

“ನಾನು ರೈತರೊಂದಿಗೆ ನಿಲ್ಲುತ್ತೇನೆ. ಇದು ಪ್ರತಿಯೊಬ್ಬರ ಪ್ರತಿಭಟನೆಯಾಗಿದೆ. ಇದು ಸಮಾಜದ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ನಾನೀಗಲೇ ಕಣಕ್ಕೆ ಇಳಿದಿದ್ದೇನೆ. ಈಗ ಮುಂಚೂಣಿಯಲ್ಲಿ ನಿಲ್ಲದಿದ್ದರೆ ನಾನು ಕೇವಲ ರಾಜಕೀಯ ಮಾಡುತ್ತೇನೆ ಎಂದು ಜನರು ಭಾವಿಸುತ್ತಾರೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೃಷಿ ಕಾನೂನಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ನಿನ್ನೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂ ಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಇದನ್ನೂ ಓದಿ: BJP ಮತ್ತು RSS ಸಿಖ್ ಜನಾಂಗವನ್ನು ಮುಗಿಸಲು ಪ್ರಯತ್ನಿಸುತ್ತಿದೆ: ಸಿಖ್ ಧರ್ಮಗುರುವಿನ ಆತ್ಮಹತ್ಯಾ ಟಿಪ್ಪಣಿ

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ನಿನ್ನೆ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.

ಈ ಪ್ರತಿಭಟನೆಗೆ ಬೆಂಬಲ ಸೂಚಿಸಿ ಪಂಜಾಬ್‌ನ ಬಿಜೆಪಿ ಮುಖಂಡರೊಬ್ಬರು ತಮ್ಮ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರು. ಈಗ ಹರಿಯಾಣದ ಬಿಜೆಪಿ ನಾಯಕ ಇದಕ್ಕೆ ಬೆಂಬಲ ಸೂಚಿಸಿದ್ದಾರೆ.


ಇದನ್ನೂ ಓದಿ: ನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...