Homeಚಳವಳಿ'ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು' - ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

‘ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು’ – ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

"ಇದು ಸಮಾಜದ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಈಗ ಮುಂಚೂಣಿಯಲ್ಲಿ ನಿಲ್ಲದಿದ್ದರೆ ನಾನು ಕೇವಲ ರಾಜಕೀಯ ಮಾಡುತ್ತೇನೆ ಎಂದು ಜನರು ಭಾವಿಸುತ್ತಾರೆ"

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ಹರಿಯಾಣದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಅವರೊಂದಿಗೆ ಧರಣಿ ಮಾಡುತ್ತಿರುವ ಬಿಜೆಪಿ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಚೌಧರಿ ಬಿರೇಂದರ್ ಸಿಂಗ್, “ರೈತರ ಪ್ರತಿಭಟನೆ ಈಗ ಎಲ್ಲರ ಆಂದೋಲನವಾಗಿದೆ” ಎಂದು ಹೇಳಿದ್ದಾರೆ.

ಸರ್ ಛೋಟು ರಾಮ್ ಮಂಚ್‌ನ ಸದಸ್ಯರು ಧರಣಿಯನ್ನು ಆಯೋಜಿಸಿದ್ದಾರೆ. ಬಿರೇಂದರ್ ಸಿಂಗ್ ಅವರು, ಸ್ವಾತಂತ್ರಪೂರ್ವ ಭಾರತದ ಝಾಟ್ ನಾಯಕ ಸರ್ ಚೋಟು ರಾಮ್ ಅವರ ಮೊಮ್ಮಗನಾಗಿದ್ದು, ರೈತರುನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತಾನು ಉತ್ಸುಕನಾಗಿದ್ದೇನೆ ಹೇಳಿದ್ದಾರೆ.

ಇದನ್ನೂ ಓದಿ: ಹಿಂಸೆಯನ್ನೆ ಸ್ಥಾಯಿಯಾಗಿಟ್ಟುಕೊಂಡು ಕಾರುಣ್ಯವನ್ನು ಶೋಧಿಸಿದ ’ಕಿಮ್ ಕಿ ಡುಕ್’

“ನಾನು ರೈತರೊಂದಿಗೆ ನಿಲ್ಲುತ್ತೇನೆ. ಇದು ಪ್ರತಿಯೊಬ್ಬರ ಪ್ರತಿಭಟನೆಯಾಗಿದೆ. ಇದು ಸಮಾಜದ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ನಾನೀಗಲೇ ಕಣಕ್ಕೆ ಇಳಿದಿದ್ದೇನೆ. ಈಗ ಮುಂಚೂಣಿಯಲ್ಲಿ ನಿಲ್ಲದಿದ್ದರೆ ನಾನು ಕೇವಲ ರಾಜಕೀಯ ಮಾಡುತ್ತೇನೆ ಎಂದು ಜನರು ಭಾವಿಸುತ್ತಾರೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೃಷಿ ಕಾನೂನಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ನಿನ್ನೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂ ಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಇದನ್ನೂ ಓದಿ: BJP ಮತ್ತು RSS ಸಿಖ್ ಜನಾಂಗವನ್ನು ಮುಗಿಸಲು ಪ್ರಯತ್ನಿಸುತ್ತಿದೆ: ಸಿಖ್ ಧರ್ಮಗುರುವಿನ ಆತ್ಮಹತ್ಯಾ ಟಿಪ್ಪಣಿ

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ನಿನ್ನೆ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.

ಈ ಪ್ರತಿಭಟನೆಗೆ ಬೆಂಬಲ ಸೂಚಿಸಿ ಪಂಜಾಬ್‌ನ ಬಿಜೆಪಿ ಮುಖಂಡರೊಬ್ಬರು ತಮ್ಮ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರು. ಈಗ ಹರಿಯಾಣದ ಬಿಜೆಪಿ ನಾಯಕ ಇದಕ್ಕೆ ಬೆಂಬಲ ಸೂಚಿಸಿದ್ದಾರೆ.


ಇದನ್ನೂ ಓದಿ: ನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...