Homeಚಳವಳಿ'ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು' - ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

‘ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು’ – ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

"ಇದು ಸಮಾಜದ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಈಗ ಮುಂಚೂಣಿಯಲ್ಲಿ ನಿಲ್ಲದಿದ್ದರೆ ನಾನು ಕೇವಲ ರಾಜಕೀಯ ಮಾಡುತ್ತೇನೆ ಎಂದು ಜನರು ಭಾವಿಸುತ್ತಾರೆ"

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ಹರಿಯಾಣದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಅವರೊಂದಿಗೆ ಧರಣಿ ಮಾಡುತ್ತಿರುವ ಬಿಜೆಪಿ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಚೌಧರಿ ಬಿರೇಂದರ್ ಸಿಂಗ್, “ರೈತರ ಪ್ರತಿಭಟನೆ ಈಗ ಎಲ್ಲರ ಆಂದೋಲನವಾಗಿದೆ” ಎಂದು ಹೇಳಿದ್ದಾರೆ.

ಸರ್ ಛೋಟು ರಾಮ್ ಮಂಚ್‌ನ ಸದಸ್ಯರು ಧರಣಿಯನ್ನು ಆಯೋಜಿಸಿದ್ದಾರೆ. ಬಿರೇಂದರ್ ಸಿಂಗ್ ಅವರು, ಸ್ವಾತಂತ್ರಪೂರ್ವ ಭಾರತದ ಝಾಟ್ ನಾಯಕ ಸರ್ ಚೋಟು ರಾಮ್ ಅವರ ಮೊಮ್ಮಗನಾಗಿದ್ದು, ರೈತರುನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತಾನು ಉತ್ಸುಕನಾಗಿದ್ದೇನೆ ಹೇಳಿದ್ದಾರೆ.

ಇದನ್ನೂ ಓದಿ: ಹಿಂಸೆಯನ್ನೆ ಸ್ಥಾಯಿಯಾಗಿಟ್ಟುಕೊಂಡು ಕಾರುಣ್ಯವನ್ನು ಶೋಧಿಸಿದ ’ಕಿಮ್ ಕಿ ಡುಕ್’

“ನಾನು ರೈತರೊಂದಿಗೆ ನಿಲ್ಲುತ್ತೇನೆ. ಇದು ಪ್ರತಿಯೊಬ್ಬರ ಪ್ರತಿಭಟನೆಯಾಗಿದೆ. ಇದು ಸಮಾಜದ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ನಾನೀಗಲೇ ಕಣಕ್ಕೆ ಇಳಿದಿದ್ದೇನೆ. ಈಗ ಮುಂಚೂಣಿಯಲ್ಲಿ ನಿಲ್ಲದಿದ್ದರೆ ನಾನು ಕೇವಲ ರಾಜಕೀಯ ಮಾಡುತ್ತೇನೆ ಎಂದು ಜನರು ಭಾವಿಸುತ್ತಾರೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೃಷಿ ಕಾನೂನಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ನಿನ್ನೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂ ಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಇದನ್ನೂ ಓದಿ: BJP ಮತ್ತು RSS ಸಿಖ್ ಜನಾಂಗವನ್ನು ಮುಗಿಸಲು ಪ್ರಯತ್ನಿಸುತ್ತಿದೆ: ಸಿಖ್ ಧರ್ಮಗುರುವಿನ ಆತ್ಮಹತ್ಯಾ ಟಿಪ್ಪಣಿ

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ನಿನ್ನೆ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.

ಈ ಪ್ರತಿಭಟನೆಗೆ ಬೆಂಬಲ ಸೂಚಿಸಿ ಪಂಜಾಬ್‌ನ ಬಿಜೆಪಿ ಮುಖಂಡರೊಬ್ಬರು ತಮ್ಮ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರು. ಈಗ ಹರಿಯಾಣದ ಬಿಜೆಪಿ ನಾಯಕ ಇದಕ್ಕೆ ಬೆಂಬಲ ಸೂಚಿಸಿದ್ದಾರೆ.


ಇದನ್ನೂ ಓದಿ: ನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...