Homeಚಳವಳಿ'ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು' - ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

‘ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು’ – ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

"ಇದು ಸಮಾಜದ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಈಗ ಮುಂಚೂಣಿಯಲ್ಲಿ ನಿಲ್ಲದಿದ್ದರೆ ನಾನು ಕೇವಲ ರಾಜಕೀಯ ಮಾಡುತ್ತೇನೆ ಎಂದು ಜನರು ಭಾವಿಸುತ್ತಾರೆ"

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ಹರಿಯಾಣದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಅವರೊಂದಿಗೆ ಧರಣಿ ಮಾಡುತ್ತಿರುವ ಬಿಜೆಪಿ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಚೌಧರಿ ಬಿರೇಂದರ್ ಸಿಂಗ್, “ರೈತರ ಪ್ರತಿಭಟನೆ ಈಗ ಎಲ್ಲರ ಆಂದೋಲನವಾಗಿದೆ” ಎಂದು ಹೇಳಿದ್ದಾರೆ.

ಸರ್ ಛೋಟು ರಾಮ್ ಮಂಚ್‌ನ ಸದಸ್ಯರು ಧರಣಿಯನ್ನು ಆಯೋಜಿಸಿದ್ದಾರೆ. ಬಿರೇಂದರ್ ಸಿಂಗ್ ಅವರು, ಸ್ವಾತಂತ್ರಪೂರ್ವ ಭಾರತದ ಝಾಟ್ ನಾಯಕ ಸರ್ ಚೋಟು ರಾಮ್ ಅವರ ಮೊಮ್ಮಗನಾಗಿದ್ದು, ರೈತರುನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತಾನು ಉತ್ಸುಕನಾಗಿದ್ದೇನೆ ಹೇಳಿದ್ದಾರೆ.

ಇದನ್ನೂ ಓದಿ: ಹಿಂಸೆಯನ್ನೆ ಸ್ಥಾಯಿಯಾಗಿಟ್ಟುಕೊಂಡು ಕಾರುಣ್ಯವನ್ನು ಶೋಧಿಸಿದ ’ಕಿಮ್ ಕಿ ಡುಕ್’

“ನಾನು ರೈತರೊಂದಿಗೆ ನಿಲ್ಲುತ್ತೇನೆ. ಇದು ಪ್ರತಿಯೊಬ್ಬರ ಪ್ರತಿಭಟನೆಯಾಗಿದೆ. ಇದು ಸಮಾಜದ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ನಾನೀಗಲೇ ಕಣಕ್ಕೆ ಇಳಿದಿದ್ದೇನೆ. ಈಗ ಮುಂಚೂಣಿಯಲ್ಲಿ ನಿಲ್ಲದಿದ್ದರೆ ನಾನು ಕೇವಲ ರಾಜಕೀಯ ಮಾಡುತ್ತೇನೆ ಎಂದು ಜನರು ಭಾವಿಸುತ್ತಾರೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೃಷಿ ಕಾನೂನಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ನಿನ್ನೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂ ಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಇದನ್ನೂ ಓದಿ: BJP ಮತ್ತು RSS ಸಿಖ್ ಜನಾಂಗವನ್ನು ಮುಗಿಸಲು ಪ್ರಯತ್ನಿಸುತ್ತಿದೆ: ಸಿಖ್ ಧರ್ಮಗುರುವಿನ ಆತ್ಮಹತ್ಯಾ ಟಿಪ್ಪಣಿ

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ನಿನ್ನೆ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.

ಈ ಪ್ರತಿಭಟನೆಗೆ ಬೆಂಬಲ ಸೂಚಿಸಿ ಪಂಜಾಬ್‌ನ ಬಿಜೆಪಿ ಮುಖಂಡರೊಬ್ಬರು ತಮ್ಮ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರು. ಈಗ ಹರಿಯಾಣದ ಬಿಜೆಪಿ ನಾಯಕ ಇದಕ್ಕೆ ಬೆಂಬಲ ಸೂಚಿಸಿದ್ದಾರೆ.


ಇದನ್ನೂ ಓದಿ: ನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....

SIR ಅಕ್ರಮದ ವಿರುದ್ಧ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆ: ಆ.15ಕ್ಕೆ ‘ಮತದಾರರ ಹಕ್ಕು ಪ್ರತಿಪಾದನಾ ದಿನ’

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ’...

ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸಿಎಂ, ಗೃಹ ಸಚಿವರಿಗೆ ಪತ್ರ, ಅಗ್ನಿವೀರನ ಬೆನ್ನಿಗೆ ನಿಂತ ಭಾರತೀಯ ಸೇನೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಭಾರತೀಯ ಸೇನೆ ತೀವ್ರವಾಗಿ ಪರಿಗಣಿಸಿದೆ. ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿವೀರ ಯೋಧ ಶಿವಕುಮಾರ್ ತಳವಾರ...

RSS ಇತಿಹಾಸ ಜಾಲಾಡ್ತಿದೆ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರವು ಸಂಘಟನೆಯ ಸಂಪೂರ್ಣ ಇತಿಹಾಸ ಹಾಗೂ ಹಿನ್ನೆಲೆಯನ್ನು ಕೂಲಂಕಷವಾಗಿ ಅಧ್ಯಯನ ನಡೆಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್...

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ: ಚಿಕ್ಕಮಗಳೂರಿನಲ್ಲಿ ಅಟ್ರಾಸಿಟಿ ಕೇಸ್ ದಾಖಲು

ದೇವಸ್ಥಾನ ಪ್ರವೇಶಿಸಿದ ಕಾರಣಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಜಾತಿ ನಿಂದನೆ ಮಾಡಿ, ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ಗಂಭೀರ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು...

ಪಾಕಿಸ್ತಾನದ ಹನಿಟ್ರ್ಯಾಪ್‌ಗೆ ಸೇನಾ ಮಾಹಿತಿ ಸೋರಿಕೆ: ಭಾರತೀಯ ವಾಯುಪಡೆ ಅಧಿಕಾರಿ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಹನಿಟ್ರ್ಯಾಪ್‌ಗೆ ಬಿದ್ದು, ಸೇನೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಭಾರತೀಯ ವಾಯುಪಡೆಯ (IAF) ಸೇವಾನಿರತ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ...

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...