Homeಚಳವಳಿ'ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು' - ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

‘ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು’ – ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

"ಇದು ಸಮಾಜದ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಈಗ ಮುಂಚೂಣಿಯಲ್ಲಿ ನಿಲ್ಲದಿದ್ದರೆ ನಾನು ಕೇವಲ ರಾಜಕೀಯ ಮಾಡುತ್ತೇನೆ ಎಂದು ಜನರು ಭಾವಿಸುತ್ತಾರೆ"

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ಹರಿಯಾಣದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಅವರೊಂದಿಗೆ ಧರಣಿ ಮಾಡುತ್ತಿರುವ ಬಿಜೆಪಿ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಚೌಧರಿ ಬಿರೇಂದರ್ ಸಿಂಗ್, “ರೈತರ ಪ್ರತಿಭಟನೆ ಈಗ ಎಲ್ಲರ ಆಂದೋಲನವಾಗಿದೆ” ಎಂದು ಹೇಳಿದ್ದಾರೆ.

ಸರ್ ಛೋಟು ರಾಮ್ ಮಂಚ್‌ನ ಸದಸ್ಯರು ಧರಣಿಯನ್ನು ಆಯೋಜಿಸಿದ್ದಾರೆ. ಬಿರೇಂದರ್ ಸಿಂಗ್ ಅವರು, ಸ್ವಾತಂತ್ರಪೂರ್ವ ಭಾರತದ ಝಾಟ್ ನಾಯಕ ಸರ್ ಚೋಟು ರಾಮ್ ಅವರ ಮೊಮ್ಮಗನಾಗಿದ್ದು, ರೈತರುನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತಾನು ಉತ್ಸುಕನಾಗಿದ್ದೇನೆ ಹೇಳಿದ್ದಾರೆ.

ಇದನ್ನೂ ಓದಿ: ಹಿಂಸೆಯನ್ನೆ ಸ್ಥಾಯಿಯಾಗಿಟ್ಟುಕೊಂಡು ಕಾರುಣ್ಯವನ್ನು ಶೋಧಿಸಿದ ’ಕಿಮ್ ಕಿ ಡುಕ್’

“ನಾನು ರೈತರೊಂದಿಗೆ ನಿಲ್ಲುತ್ತೇನೆ. ಇದು ಪ್ರತಿಯೊಬ್ಬರ ಪ್ರತಿಭಟನೆಯಾಗಿದೆ. ಇದು ಸಮಾಜದ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ನಾನೀಗಲೇ ಕಣಕ್ಕೆ ಇಳಿದಿದ್ದೇನೆ. ಈಗ ಮುಂಚೂಣಿಯಲ್ಲಿ ನಿಲ್ಲದಿದ್ದರೆ ನಾನು ಕೇವಲ ರಾಜಕೀಯ ಮಾಡುತ್ತೇನೆ ಎಂದು ಜನರು ಭಾವಿಸುತ್ತಾರೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೃಷಿ ಕಾನೂನಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ನಿನ್ನೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂ ಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಇದನ್ನೂ ಓದಿ: BJP ಮತ್ತು RSS ಸಿಖ್ ಜನಾಂಗವನ್ನು ಮುಗಿಸಲು ಪ್ರಯತ್ನಿಸುತ್ತಿದೆ: ಸಿಖ್ ಧರ್ಮಗುರುವಿನ ಆತ್ಮಹತ್ಯಾ ಟಿಪ್ಪಣಿ

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ನಿನ್ನೆ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.

ಈ ಪ್ರತಿಭಟನೆಗೆ ಬೆಂಬಲ ಸೂಚಿಸಿ ಪಂಜಾಬ್‌ನ ಬಿಜೆಪಿ ಮುಖಂಡರೊಬ್ಬರು ತಮ್ಮ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರು. ಈಗ ಹರಿಯಾಣದ ಬಿಜೆಪಿ ನಾಯಕ ಇದಕ್ಕೆ ಬೆಂಬಲ ಸೂಚಿಸಿದ್ದಾರೆ.


ಇದನ್ನೂ ಓದಿ: ನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...