Homeಚಳವಳಿ'ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು' - ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

‘ಈಗ ನಾನು ರೈತರೊಂದಿಗೆ ನಿಲ್ಲಲೇಬೇಕು’ – ಬಿಜೆಪಿ ಮುಖಂಡ ಚೌಧರಿ ಬಿರೇಂದರ್ ಸಿಂಗ್

"ಇದು ಸಮಾಜದ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಈಗ ಮುಂಚೂಣಿಯಲ್ಲಿ ನಿಲ್ಲದಿದ್ದರೆ ನಾನು ಕೇವಲ ರಾಜಕೀಯ ಮಾಡುತ್ತೇನೆ ಎಂದು ಜನರು ಭಾವಿಸುತ್ತಾರೆ"

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ಹರಿಯಾಣದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಅವರೊಂದಿಗೆ ಧರಣಿ ಮಾಡುತ್ತಿರುವ ಬಿಜೆಪಿ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಚೌಧರಿ ಬಿರೇಂದರ್ ಸಿಂಗ್, “ರೈತರ ಪ್ರತಿಭಟನೆ ಈಗ ಎಲ್ಲರ ಆಂದೋಲನವಾಗಿದೆ” ಎಂದು ಹೇಳಿದ್ದಾರೆ.

ಸರ್ ಛೋಟು ರಾಮ್ ಮಂಚ್‌ನ ಸದಸ್ಯರು ಧರಣಿಯನ್ನು ಆಯೋಜಿಸಿದ್ದಾರೆ. ಬಿರೇಂದರ್ ಸಿಂಗ್ ಅವರು, ಸ್ವಾತಂತ್ರಪೂರ್ವ ಭಾರತದ ಝಾಟ್ ನಾಯಕ ಸರ್ ಚೋಟು ರಾಮ್ ಅವರ ಮೊಮ್ಮಗನಾಗಿದ್ದು, ರೈತರುನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತಾನು ಉತ್ಸುಕನಾಗಿದ್ದೇನೆ ಹೇಳಿದ್ದಾರೆ.

ಇದನ್ನೂ ಓದಿ: ಹಿಂಸೆಯನ್ನೆ ಸ್ಥಾಯಿಯಾಗಿಟ್ಟುಕೊಂಡು ಕಾರುಣ್ಯವನ್ನು ಶೋಧಿಸಿದ ’ಕಿಮ್ ಕಿ ಡುಕ್’

“ನಾನು ರೈತರೊಂದಿಗೆ ನಿಲ್ಲುತ್ತೇನೆ. ಇದು ಪ್ರತಿಯೊಬ್ಬರ ಪ್ರತಿಭಟನೆಯಾಗಿದೆ. ಇದು ಸಮಾಜದ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ನಾನೀಗಲೇ ಕಣಕ್ಕೆ ಇಳಿದಿದ್ದೇನೆ. ಈಗ ಮುಂಚೂಣಿಯಲ್ಲಿ ನಿಲ್ಲದಿದ್ದರೆ ನಾನು ಕೇವಲ ರಾಜಕೀಯ ಮಾಡುತ್ತೇನೆ ಎಂದು ಜನರು ಭಾವಿಸುತ್ತಾರೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೃಷಿ ಕಾನೂನಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ನಿನ್ನೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂ ಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಇದನ್ನೂ ಓದಿ: BJP ಮತ್ತು RSS ಸಿಖ್ ಜನಾಂಗವನ್ನು ಮುಗಿಸಲು ಪ್ರಯತ್ನಿಸುತ್ತಿದೆ: ಸಿಖ್ ಧರ್ಮಗುರುವಿನ ಆತ್ಮಹತ್ಯಾ ಟಿಪ್ಪಣಿ

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ನಿನ್ನೆ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.

ಈ ಪ್ರತಿಭಟನೆಗೆ ಬೆಂಬಲ ಸೂಚಿಸಿ ಪಂಜಾಬ್‌ನ ಬಿಜೆಪಿ ಮುಖಂಡರೊಬ್ಬರು ತಮ್ಮ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರು. ಈಗ ಹರಿಯಾಣದ ಬಿಜೆಪಿ ನಾಯಕ ಇದಕ್ಕೆ ಬೆಂಬಲ ಸೂಚಿಸಿದ್ದಾರೆ.


ಇದನ್ನೂ ಓದಿ: ನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...