Homeಮುಖಪುಟ‘ಹರಿಯಾಣ ಬಿಜೆಪಿ ನಾಯಕಿ ಸೋನಾಲಿ ಫೋಗಟ್‌‌ರನ್ನು ಗೋವಾದಲ್ಲಿ ಹತ್ಯೆ ಮಾಡಲಾಗಿದೆ’: ದೂರು ದಾಖಲಿಸಿದ ಸಹೋದರ

‘ಹರಿಯಾಣ ಬಿಜೆಪಿ ನಾಯಕಿ ಸೋನಾಲಿ ಫೋಗಟ್‌‌ರನ್ನು ಗೋವಾದಲ್ಲಿ ಹತ್ಯೆ ಮಾಡಲಾಗಿದೆ’: ದೂರು ದಾಖಲಿಸಿದ ಸಹೋದರ

- Advertisement -
- Advertisement -

ಹರಿಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರನ್ನು ಗೋವಾದಲ್ಲಿ ಅವರ ಇಬ್ಬರು ಸಹಚರರು ಕೊಲೆ ಮಾಡಿದ್ದಾರೆ ಎಂದು ಅವರ ಸಹೋದರ ಪೊಲೀಸರಿಗೆ ಔಪಚಾರಿಕವಾಗಿ ದೂರು ಸಲ್ಲಿಸಿದ್ದಾರೆ. ಅವರ ಸಾವಿನ ನಂತರ ಹರಿಯಾಣದಲ್ಲಿರುವ ಅವರ ಫಾರ್ಮ್‌ಹೌಸ್‌ನಿಂದ ಸಿಸಿಟಿವಿ ಕ್ಯಾಮೆರಾಗಳು, ಲ್ಯಾಪ್‌ಟಾಪ್ ಮತ್ತು ಇತರ ಪ್ರಮುಖ ವಸ್ತುಗಳು ನಾಪತ್ತೆಯಾಗಿವೆ ಎಂದು ಅವರು ಆರೋಪಿಸಿದ್ದಾರೆ.

“ಫೋಗಟ್ ಅವರು ತಮ್ಮ ಸಾವಿಗೂ ಮೊದಲು ತನ್ನ ತಾಯಿ, ಸಹೋದರಿ ಮತ್ತು ಸೋದರ ಮಾವನ ಜೊತೆ ಮಾತನಾಡಿದ್ದರು. ಈ ಸಮಯದಲ್ಲಿ ಅವರು ಗೊಂದಲದಲ್ಲಿದ್ದು, ತನ್ನ ಇಬ್ಬರು ಸಹೋದ್ಯೋಗಿಗಳ ಬಗ್ಗೆ ದೂರಿಕೊಂಡಿದ್ದರು” ಎಂದು ಅವರ ಸಹೋದರ ರಿಂಕು ಧಾಕಾ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಟಿಕ್‌ಟಾಕ್‌ನಲ್ಲಿ ಖ್ಯಾತಿ ಪಡೆದ ಹರಿಯಾಣದ ಹಿಸಾರ್‌ನ ಬಿಜೆಪಿ ನಾಯಕಿ ಸೋನಾಲಿ ಫೋಗಟ್ (42) ಅವರು ಮಂಗಳವಾರ ಬೆಳಿಗ್ಗೆ ಉತ್ತರ ಗೋವಾದ ಅಂಜುನಾದಲ್ಲಿರುವ ಸೇಂಟ್ ಆಂಥೋನಿ ಆಸ್ಪತ್ರೆಯಲ್ಲಿ “ಮೃತಪಟ್ಟಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗೋವಾ: ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಲೈಸನ್ಸ್‌ ಪಡೆದು ಅಕ್ರಮ ಬಾರ್‌ ನಡೆಸುತ್ತಿರುವ ಸಚಿವೆ ಸ್ಮೃತಿ ಇರಾನಿ ಪುತ್ರಿ

ಸಾವಿನ ಕುರಿತು ಗೋವಾದ ಅಂಜುನ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದರು. ಫೋಗಟ್ ಅವರ ಕುಟುಂಬ ಸದಸ್ಯರು ಮಂಗಳವಾರ ರಾತ್ರಿ ಗೋವಾಕ್ಕೆ ಆಗಮಿಸಿದ್ದಾರೆ. ಮೃತ ನಾಯಕಿಯ ಸಹೋದರ ರಿಂಕು ಧಾಕಾ ಅವರು ಗೋವಾದಲ್ಲಿ ಅಂಜುನಾ ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ಫೋಗಟ್‌ನ ಇಬ್ಬರು ಸಹಚರರು ಗೋವಾದಲ್ಲಿ ಅವರನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

“ಫೋಗಟ್ ತಮ್ಮ ತಾಯಿಯೊಂದಿಗೆ ಮಾತನಾಡಿದ ನಂತರ ಆರೋಪಿಗಳಿಂದ ದೂರ ಉಳಿಯಲು ಮತ್ತು ಮರುದಿನವೆ ಹಿಸಾರ್‌ಗೆ ಹಿಂತಿರುಗಿ ಬರಲು ನಾವು ಅವಳನ್ನು ಕೇಳಿದ್ದೆವು” ಎಂದು ರಿಂಕು ಧಾಕಾ ಅಂಜುನಾ ಪೊಲೀಸ್ ಠಾಣೆಯ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇಬ್ಬರು ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಪೊಲೀಸರು ನಿರಾಕರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸದಿದ್ದರೆ, ಗೋವಾದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ನಾವು ಬಿಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ನಾನು ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಗೋವಾ ಬಾರ್ ವಿವಾದದ ಬಗ್ಗೆ ಸ್ಮೃತಿ ಇರಾನಿ

ಮರಣೋತ್ತರ ಪರೀಕ್ಷೆಯನ್ನು ದೆಹಲಿಯ ಆಲ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ ಅಥವಾ ಜೈಪುರದ ಏಮ್ಸ್‌ನಲ್ಲಿ ನಡೆಸಲು ಕುಟುಂಬ ಸದಸ್ಯರು ಆದ್ಯತೆ ನೀಡುತ್ತಾರೆ ಎಂದು ರಿಂಕು ಧಾಕಾ ಹೇಳಿದ್ದಾರೆ. “ಅವರು ಕಳೆದ 15 ವರ್ಷಗಳಿಂದ ಬಿಜೆಪಿ ನಾಯಕಿಯಾಗಿದ್ದು, ಅವರಿಗೆ ನ್ಯಾಯ ದೊರಕಿಸಲು ಸಹಾಯ ಮಾಡುವಂತೆ ನಾವು ಪ್ರಧಾನಿಯವರಲ್ಲಿ ಮನವಿ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...