Homeಮುಖಪುಟಹರಿಯಾಣ | ಬಿಜೆಪಿಯ ಹಿರಿಯ ನಾಯಕ ಅಶೋಕ್ ತನ್ವಾರ್ ಕಾಂಗ್ರೆಸ್ ಸೇರ್ಪಡೆ!

ಹರಿಯಾಣ | ಬಿಜೆಪಿಯ ಹಿರಿಯ ನಾಯಕ ಅಶೋಕ್ ತನ್ವಾರ್ ಕಾಂಗ್ರೆಸ್ ಸೇರ್ಪಡೆ!

- Advertisement -
- Advertisement -

ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಸಂಸದ ಅಶೋಕ್ ತನ್ವಾರ್ ಗುರುವಾರ ಹರಿಯಾಣದ ಮಹೇಂದ್ರಗಢ ಜಿಲ್ಲೆಯಲ್ಲಿ ರಾಹುಲ್ ಗಾಂಧಿಯವರ ರ‍್ಯಾಲಿಯಲ್ಲಿ ಕಾಂಗ್ರೆಸ್‌ಗೆ ಮರು ಸೇರ್ಪಡೆಗೊಂಡಿದ್ದಾರೆ. ರಾಜ್ಯದಲ್ಲಿ ಚುನಾವಣೆ ನಡೆಯುವ ಎರಡು ದಿನಗಳ ಮೊದಲು ಈ ಬೆಳವಣಿಗೆ ನಡೆದಿದ್ದು, ಆಡಳಿತರೂಢ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ.ಹರಿಯಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗುರುವಾರ ಮಹೇಂದರ್‌ಗಢದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ಗೆ ಮರಳಿದ್ದಾರೆ. ರಾಹುಲ್ ಗಾಂಧಿ ತಮ್ಮ ಭಾಷಣ ಮುಗಿಸಲು ಮುಂದಾಗುತ್ತಿದ್ದಂತೆ ಕೆಲ ನಿಮಿಷ ಕಾಯುವಂತೆ ಸಭಿಕರಿಗೆ ವೇದಿಕೆಯಿಂದ ಘೋಷಣೆ ಮಾಡಲಾಯಿತು.

ಇದನ್ನೂಓದಿ: ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ಇದಾಗಿ ಕೆಲವೇ ಕ್ಷಣದಲ್ಲಿ, ಈ ವರ್ಷದ ಆರಂಭದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ತನ್ವರ್ ವೇದಿಕೆಗೆ ಆಗಮಿಸಿದ್ದು, “ಇಂದು ಅವರು ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ” ಎಂದು ಘೋಷಿಸಲಾಯಿತು. ರಾಹುಲ್ ಗಾಂಧಿ ಆವರ ನಿಕಟವರ್ತಿ ಎಂದೇ ಪರಿಗಣಿಸಲ್ಪಟ್ಟಿದ್ದ ಅಶೋಕ್ ಅವರು 2019 ರಲ್ಲಿ ಕಾಂಗ್ರೆಸ್ ತೊರೆದಿದ್ದರು.

ಪಕ್ಷದ ಹಿರಿಯ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರೊಂದಿಗಿನ ಭಿನ್ನಾಭಿಪ್ರಾಯಗಳ ಕಾರಣಕ್ಕೆ ಅವರು ಪಕ್ಷ ತೊರೆದಿದ್ದರು. ಅಕ್ಟೋಬರ್ 5 ರಂದು ಹರಿಯಾಣ ವಿಧಾನಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಚುನಾವಣೆಯ ಪ್ರಚಾರವು ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಪ್ರಚಾರ ಕೊನೆಗೊಳ್ಳುವ ಕೆಲವೇ ಗಂಟೆಗಳ ಮೊದಲು ಕಾಂಗ್ರೆಸ್‌ಗೆ ಸೇರಿದ್ದಾರೆ.

ರಾಜ್ಯದಲ್ಲಿ ದಶಕದ ನಂತರ ಬಿಜೆಪಿಯಿಂದ ಅಧಿಕಾರ ಕಿತ್ತುಕೊಳ್ಳಲು ಮುಂದಾಗಿರುವ ಕಾಂಗ್ರೆಸ್‌ಗೆ ದಲಿತ ನಾಯಕ ಮರಳಿರುವುದು ಪಕ್ಷಕ್ಕೆ ಉತ್ತೇಜನ ನೀಡುವ ಸಾಧ್ಯತೆ ಇದೆ.

2021ರಲ್ಲಿ ತನ್ವಾರ್ ಅವರು ತೃಣಮೂಲ ಕಾಂಗ್ರೆಸ್ ಸೇರಿದ್ದರು. ನಂತರ ಅವರು 2022 ರಲ್ಲಿ ಅವರು ಆಮ್ ಆದ್ಮಿ ಪಕ್ಷ (ಎಎಪಿ)ಕ್ಕೆ ಪಕ್ಷಾಂತರಗೊಂಡರು. ಅಷ್ಟೆ ಅಲ್ಲದೆ, ಈ ವರ್ಷದ ಆರಂಭದಲ್ಲಿ ಅವರು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಈ ವೇಳೆ ಅವರು ಪ್ರಧಾನಿಯನ್ನು ಶ್ಲಾಘಿಸಿದ್ದರು. ಅಶೋಕ್ ಅವರು ಕಳೆದ ಐದು ವರ್ಷಗಳಲ್ಲಿ 4 ಪಕ್ಷಗಳಿಗೆ ಪಕ್ಷಾಂತರವಾಗಿದ್ದಾರೆ.ಹರಿಯಾಣ

ವಿಡಿಯೊನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...