Homeಮುಖಪುಟಹರ್ಯಾಣ| ಬಾಲಕನನ್ನು ತಲೆಕೆಳಗಾಗಿ ನೇತುಹಾಕಿ ಥಳಿತ; ಶಾಲಾ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಹರ್ಯಾಣ| ಬಾಲಕನನ್ನು ತಲೆಕೆಳಗಾಗಿ ನೇತುಹಾಕಿ ಥಳಿತ; ಶಾಲಾ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಹರಿಯಾಣದ ಪಾಣಿಪತ್‌ನಲ್ಲಿರುವ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಮೇಲಿನ ದೌರ್ಜನ್ಯದ ಆಘಾತಕಾರಿ ಪ್ರಕರಣವೊಂದು ಆಕ್ರೋಶಕ್ಕೆ ಕಾರಣವಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇಲ್ಲಿನ ಜಟ್ಟಲ್ ರಸ್ತೆಯಲ್ಲಿರುವ ಶಾಲೆಯೊಂದರಲ್ಲಿ ನಡೆದೆ ಎನ್ನಲಾದ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಿಬ್ಬಂದಿಗಳು ಚಿಕ್ಕ ಮಕ್ಕಳ ಮೇಲೆ ಕ್ರೂರವಾಗಿ ವರ್ತಿಸುವುದನ್ನು ಕಾಣಬಹುದು.

ಒಂದನೇ ವೀಡಿಯೊದಲ್ಲಿ, 2 ನೇ ತರಗತಿಯ ವಿದ್ಯಾರ್ಥಿಯನ್ನು ಹಗ್ಗಗಳಿಂದ ಕಟ್ಟಿ, ಕಿಟಕಿಗೆ ತಲೆಕೆಳಗಾಗಿ ನೇತುಹಾಕಲಾಗಿದೆ. ಆತನ ಹೋಮ್‌ವರ್ಕ್‌ ಪೂರ್ಣಗೊಳಿಸದಿದ್ದಕ್ಕಾಗಿ ಶಾಲಾ ಚಾಲಕ ಥಳಿಸಿದ್ದಾನೆ. ಮುಖಿಜಾ ಕಾಲೋನಿಯ ನಿವಾಸಿಯಾಗಿರುವ ಬಾಲಕನ ತಾಯಿ ಡೋಲಿ, ತನ್ನ ಏಳು ವರ್ಷದ ಮಗನನ್ನು ಇತ್ತೀಚೆಗೆ ಶಾಲೆಗೆ ಸೇರಿಸಲಾಗಿತ್ತು ಎಂದು ಹೇಳಿದರು. ಪ್ರಾಂಶುಪಾಲರಾದ ರೀನಾ ಮಗುವನ್ನು ಶಿಕ್ಷಿಸಲು ಚಾಲಕ ಅಜಯ್‌ಗೆ ತಿಳಿಸಿದ್ದಾರೆ, ನಂತರ ಅವನು ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.

ಅಜಯ್ ಬಾಲಕನಿಗೆ ಕಪಾಳಮೋಕ್ಷ ಮಾಡಿದರು, ಆತನನ್ನು ನಿಂದಿಸುವಾಗ ಸ್ನೇಹಿತರಿಗೆ ವೀಡಿಯೊ ಕರೆಗಳನ್ನು ಮಾಡಿದ್ದಾರೆ. ಆತನ ಸ್ನೇಹಿತರು ವೀಡಿಯೊವನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದರು. ವೈರಲ್ ವಿಡಿಯೊ ಅಂತಿಮವಾಗಿ ಮಗುವಿನ ಕುಟುಂಬವನ್ನು ತಲುಪಿದ ಬಳಿಕ ದೌರ್ಜನ್ಯ ಬಹಿರಂಗವಾಗಿದೆ.

ಮತ್ತೊಂದು ವೈರಲ್ ವೀಡಿಯೊದಲ್ಲಿ, ಪ್ರಾಂಶುಪಾಲರಾದ ರೀನಾ ಸ್ವತಃ ಇತರ ವಿದ್ಯಾರ್ಥಿಗಳ ಸಂಪೂರ್ಣ ಸಮ್ಮುಖದಲ್ಲಿ ಚಿಕ್ಕ ಮಕ್ಕಳ ಕಪಾಳಕ್ಕೆ ಹೊಡೆಯುವುದು ರೆಕಾರ್ಡ್‌ ಆಗಿದೆ. ನಂತರ ಆಕೆ ತನ್ನ ಕೃತ್ಯಗಳನ್ನು ಸಮರ್ಥಿಸಿಕೊಂಡಿದ್ದು, ಮಕ್ಕಳು ಇಬ್ಬರು ಸಹೋದರಿಯರೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅವರಿಗೆ ಶಿಕ್ಷೆ ನೀಡುವ ಮೊದಲು ಪೋಷಕರಿಗೆ ತಿಳಿಸಿದ್ದರು ಎಂದು ಹೇಳಿದ್ದಾರೆ.

ಆದರೂ, ಆಕೆಯ ಸಮರ್ಥನೆಯು ಶಿಕ್ಷಣ ಸಚಿವಾಲಯದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ. ಇದು ದೈಹಿಕ ಶಿಕ್ಷೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸುತ್ತದೆ. ಶಿಕ್ಷೆಯಾಗಿ ಮಕ್ಕಳನ್ನು ಕೆಲವೊಮ್ಮೆ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಒತ್ತಾಯಿಸಲಾಗುತ್ತದೆ ಎಂದು ಪೋಷಕರು ಆರೋಪಿಸಿದ್ದಾರೆ.

ಪ್ರಾಂಶುಪಾಲೆ ರೀನಾ, ಆಗಸ್ಟ್ 13 ರಂದು ಬಾಲಕನನ್ನು ಗದರಿಸುವಂತೆ ಅಜಯ್ ಅವರನ್ನು ಕೇಳಿಕೊಂಡಿದ್ದಾಗಿ ಒಪ್ಪಿಕೊಂಡರು. ಆದರೆ, ಚಾಲಕನ ನಡವಳಿಕೆಯ ಬಗ್ಗೆ ಪದೇ ಪದೇ ದೂರುಗಳು ಬಂದ ಕಾರಣ ಆಗಸ್ಟ್‌ನಲ್ಲಿಯೇ ಅವರನ್ನು ವಜಾಗೊಳಿಸಲಾಗಿದೆ ಎಂದು ಹೇಳಿದ್ದಾರೆ. ವೀಡಿಯೊ ಕಾಣಿಸಿಕೊಂಡ ನಂತರ ಅಜಯ್ ನಮ್ಮ ಮನೆಗೆ ಗುಂಪನ್ನು ಕಳುಹಿಸುವ ಮೂಲಕ ಬೆದರಿಸಲು ಪ್ರಯತ್ನಿಸಿದ ಎಂದು ಹುಡುಗನ ಕುಟುಂಬ ಆರೋಪಿಸಿದೆ.

ದೂರಿನ ನಂತರ, ಮಾಡೆಲ್ ಟೌನ್ ಠಾಣೆಯ ಪೊಲೀಸರು ಬಾಲ ನ್ಯಾಯ ಕಾಯ್ದೆ, 2015 ರ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಷ್ಯಾ ಕಪ್। ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಪಡೆಯಲು ನಿರಾಕರಿಸಿದ ಭಾರತ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು ಹಾಗೂ ಕಾರ್ಯಕರ್ತರು, ಸಂಸದರ ಸಭೆಯಲ್ಲೇ...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...