Homeಮುಖಪುಟಹರ್ಯಾಣ| ಬಾಲಕನನ್ನು ತಲೆಕೆಳಗಾಗಿ ನೇತುಹಾಕಿ ಥಳಿತ; ಶಾಲಾ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಹರ್ಯಾಣ| ಬಾಲಕನನ್ನು ತಲೆಕೆಳಗಾಗಿ ನೇತುಹಾಕಿ ಥಳಿತ; ಶಾಲಾ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಹರಿಯಾಣದ ಪಾಣಿಪತ್‌ನಲ್ಲಿರುವ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಮೇಲಿನ ದೌರ್ಜನ್ಯದ ಆಘಾತಕಾರಿ ಪ್ರಕರಣವೊಂದು ಆಕ್ರೋಶಕ್ಕೆ ಕಾರಣವಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇಲ್ಲಿನ ಜಟ್ಟಲ್ ರಸ್ತೆಯಲ್ಲಿರುವ ಶಾಲೆಯೊಂದರಲ್ಲಿ ನಡೆದೆ ಎನ್ನಲಾದ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಿಬ್ಬಂದಿಗಳು ಚಿಕ್ಕ ಮಕ್ಕಳ ಮೇಲೆ ಕ್ರೂರವಾಗಿ ವರ್ತಿಸುವುದನ್ನು ಕಾಣಬಹುದು.

ಒಂದನೇ ವೀಡಿಯೊದಲ್ಲಿ, 2 ನೇ ತರಗತಿಯ ವಿದ್ಯಾರ್ಥಿಯನ್ನು ಹಗ್ಗಗಳಿಂದ ಕಟ್ಟಿ, ಕಿಟಕಿಗೆ ತಲೆಕೆಳಗಾಗಿ ನೇತುಹಾಕಲಾಗಿದೆ. ಆತನ ಹೋಮ್‌ವರ್ಕ್‌ ಪೂರ್ಣಗೊಳಿಸದಿದ್ದಕ್ಕಾಗಿ ಶಾಲಾ ಚಾಲಕ ಥಳಿಸಿದ್ದಾನೆ. ಮುಖಿಜಾ ಕಾಲೋನಿಯ ನಿವಾಸಿಯಾಗಿರುವ ಬಾಲಕನ ತಾಯಿ ಡೋಲಿ, ತನ್ನ ಏಳು ವರ್ಷದ ಮಗನನ್ನು ಇತ್ತೀಚೆಗೆ ಶಾಲೆಗೆ ಸೇರಿಸಲಾಗಿತ್ತು ಎಂದು ಹೇಳಿದರು. ಪ್ರಾಂಶುಪಾಲರಾದ ರೀನಾ ಮಗುವನ್ನು ಶಿಕ್ಷಿಸಲು ಚಾಲಕ ಅಜಯ್‌ಗೆ ತಿಳಿಸಿದ್ದಾರೆ, ನಂತರ ಅವನು ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.

ಅಜಯ್ ಬಾಲಕನಿಗೆ ಕಪಾಳಮೋಕ್ಷ ಮಾಡಿದರು, ಆತನನ್ನು ನಿಂದಿಸುವಾಗ ಸ್ನೇಹಿತರಿಗೆ ವೀಡಿಯೊ ಕರೆಗಳನ್ನು ಮಾಡಿದ್ದಾರೆ. ಆತನ ಸ್ನೇಹಿತರು ವೀಡಿಯೊವನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದರು. ವೈರಲ್ ವಿಡಿಯೊ ಅಂತಿಮವಾಗಿ ಮಗುವಿನ ಕುಟುಂಬವನ್ನು ತಲುಪಿದ ಬಳಿಕ ದೌರ್ಜನ್ಯ ಬಹಿರಂಗವಾಗಿದೆ.

ಮತ್ತೊಂದು ವೈರಲ್ ವೀಡಿಯೊದಲ್ಲಿ, ಪ್ರಾಂಶುಪಾಲರಾದ ರೀನಾ ಸ್ವತಃ ಇತರ ವಿದ್ಯಾರ್ಥಿಗಳ ಸಂಪೂರ್ಣ ಸಮ್ಮುಖದಲ್ಲಿ ಚಿಕ್ಕ ಮಕ್ಕಳ ಕಪಾಳಕ್ಕೆ ಹೊಡೆಯುವುದು ರೆಕಾರ್ಡ್‌ ಆಗಿದೆ. ನಂತರ ಆಕೆ ತನ್ನ ಕೃತ್ಯಗಳನ್ನು ಸಮರ್ಥಿಸಿಕೊಂಡಿದ್ದು, ಮಕ್ಕಳು ಇಬ್ಬರು ಸಹೋದರಿಯರೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅವರಿಗೆ ಶಿಕ್ಷೆ ನೀಡುವ ಮೊದಲು ಪೋಷಕರಿಗೆ ತಿಳಿಸಿದ್ದರು ಎಂದು ಹೇಳಿದ್ದಾರೆ.

ಆದರೂ, ಆಕೆಯ ಸಮರ್ಥನೆಯು ಶಿಕ್ಷಣ ಸಚಿವಾಲಯದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ. ಇದು ದೈಹಿಕ ಶಿಕ್ಷೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸುತ್ತದೆ. ಶಿಕ್ಷೆಯಾಗಿ ಮಕ್ಕಳನ್ನು ಕೆಲವೊಮ್ಮೆ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಒತ್ತಾಯಿಸಲಾಗುತ್ತದೆ ಎಂದು ಪೋಷಕರು ಆರೋಪಿಸಿದ್ದಾರೆ.

ಪ್ರಾಂಶುಪಾಲೆ ರೀನಾ, ಆಗಸ್ಟ್ 13 ರಂದು ಬಾಲಕನನ್ನು ಗದರಿಸುವಂತೆ ಅಜಯ್ ಅವರನ್ನು ಕೇಳಿಕೊಂಡಿದ್ದಾಗಿ ಒಪ್ಪಿಕೊಂಡರು. ಆದರೆ, ಚಾಲಕನ ನಡವಳಿಕೆಯ ಬಗ್ಗೆ ಪದೇ ಪದೇ ದೂರುಗಳು ಬಂದ ಕಾರಣ ಆಗಸ್ಟ್‌ನಲ್ಲಿಯೇ ಅವರನ್ನು ವಜಾಗೊಳಿಸಲಾಗಿದೆ ಎಂದು ಹೇಳಿದ್ದಾರೆ. ವೀಡಿಯೊ ಕಾಣಿಸಿಕೊಂಡ ನಂತರ ಅಜಯ್ ನಮ್ಮ ಮನೆಗೆ ಗುಂಪನ್ನು ಕಳುಹಿಸುವ ಮೂಲಕ ಬೆದರಿಸಲು ಪ್ರಯತ್ನಿಸಿದ ಎಂದು ಹುಡುಗನ ಕುಟುಂಬ ಆರೋಪಿಸಿದೆ.

ದೂರಿನ ನಂತರ, ಮಾಡೆಲ್ ಟೌನ್ ಠಾಣೆಯ ಪೊಲೀಸರು ಬಾಲ ನ್ಯಾಯ ಕಾಯ್ದೆ, 2015 ರ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಷ್ಯಾ ಕಪ್। ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಪಡೆಯಲು ನಿರಾಕರಿಸಿದ ಭಾರತ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...