Homeಮುಖಪುಟಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಹರಿಯಾಣದ ಎಲ್ಲೆನಾಬಾದ್ ವಿಧಾನಸಭಾ ಕ್ಷೇತ್ರದ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಐಎನ್‌ಎಲ್‌ಡಿಯ ಅಭಯ್ ಸಿಂಗ್ ಚೌಟಾಲಾ ಉಪಚುನಾವಣೆಯಲ್ಲಿ 6 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಐಎನ್‌ಎಲ್‌ಡಿಯ ಏಕೈಕ ಶಾಸಕ ಮತ್ತು ಜೆಜೆಪಿ ನಾಯಕ ಅಜಯ್ ಚೌಟಾಲಾ ಅವರ ಸಹೋದರರಾಗಿದ್ದ ಅಭಯ್ ಸಿಂಗ್ ಚೌಟಾಲಾ, ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಎಲ್ಲೆನಾಬಾದ್ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಉಪಚುನಾವಣೆ ಘೋಷಣೆಯಾಗಿತ್ತು. ಅ.30 ರಂದು ಮತದಾನ ನಡೆದಿತ್ತು.

ಐಎನ್‌ಎಲ್‌ಡಿ (ಇಂಡಿಯನ್ ನ್ಯಾಷನಲ್ ಲೋಕದಳ) ನಾಯಕ ಅಭಯ್ ಸಿಂಗ್ ಚೌಟಾಲಾ 65,897 ಮತಗಳನ್ನು ಪಡೆದಿದ್ದಾರೆ. ಆಡಳಿತಾರೂಢ ಬಿಜೆಪಿಯ ಗೋವಿಂದ್ ಕಂದಾ 59,189ಮತಗಳನ್ನು ಪಡೆದಿದ್ದಾರೆ. ಅಭಯ್ ಸಿಂಗ್ ಚೌಟಾಲಾ 6,708 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ ಉಪಮುಖ್ಯಮಂತ್ರಿಯ ರಾಜೀನಾಮೆ ನನ್ನ ಕಿಸೆಯಲ್ಲಿದೆ: ಜೆಜೆಪಿ ನಾಯಕ ಅಜಯ್ ಚೌಟಾಲ

ಸುದ್ದಿಗಾರರೊಂದಿಗೆ ಮಾತನಾಡಿದ ಅಭಯ್ ಸಿಂಗ್ ಚೌಟಾಲಾ, ’ಮತ ಪಡೆಯಲು ಬಿಜೆಪಿ ಹಣ ಹಂಚಿದ್ದಾರೆ. ಇಲ್ಲದಿದ್ದರೆ 30,000 ಕ್ಕೂ ಹೆಚ್ಚು ಮತಗಳಿಂದ ಗೆಲ್ಲುವ ನಿರೀಕ್ಷೆಯಿತ್ತು’ ಎಂದು ಹೇಳಿದ್ದರು.

“ಮುಖ್ಯಮಂತ್ರಿ ಉಪಚುನಾವಣೆ ಫಲಿತಾಂಶದ ಬಳಿಕ ರಾಜೀನಾಮೆ ನೀಡಬೇಕು. ಕುದುರೆ ವ್ಯಾಪಾರ ಇಲ್ಲದಿದ್ದರೆ ನನ್ನ ಗೆಲುವಿನ ಅಂತರ 30,000 ಮೀರುತ್ತಿತ್ತು. ಮತಕ್ಕಾಗಿ ಕೋಟಿಗಳನ್ನು ಹಣ ಹಂಚಲಾಗಿದೆ ಮತ್ತು ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸಲಾಗಿದೆ. ಇದನ್ನು ನಾನು ಕಣ್ಣಾರೆ ಕಂಡಿದ್ದೇನೆ” ಎಂದು ಆರೋಪಿಸಿದ್ದರು.

ಮುಂದುವರಿದು,  “ಇದು ನನ್ನ ಗೆಲುವಲ್ಲ. ಇದು ರೈತರ ಗೆಲುವು” ಎಂದು ಹೇಳಿದ್ದಾರೆ.

ಎಲ್ಲೆನಾಬಾದ್‌ನಲ್ಲಿ ಬಿಜೆಪಿ ಗೋವಿಂದ್ ಕಂದಾ ಅವರಿಗೆ ಟಿಕೆಟ್ ನೀಡಿತ್ತು. ಸಿರ್ಸಾದಲ್ಲಿ ಬಿಜೆಪಿ ವಿರುದ್ಧ ಭಾರಿ ಪ್ರತಿಭಟನೆ ವ್ಯಕ್ತವಾಗಿ, ರಸ್ತೆಗಳಲ್ಲಿ ಪ್ರಚಾರಕ್ಕೆ ಹಾಕಿದ್ದ ಬಿಜೆಪಿ ಧ್ವಜಗಳನ್ನು ಕಿತ್ತು ಒಂದೆಡೆ ಹಾಕಿ ಬೆಂಕಿ ಹಚ್ಚಲಾಗಿತ್ತು.

ಬಿಜೆಪಿ ಅಭ್ಯರ್ಥಿ ಗೋವಿಂದ್ ಕಂದಾ ನಾಮಪತ್ರ ಸಲ್ಲಿಕೆಗಾಗಿ ರಸ್ತೆಯುದ್ದಕ್ಕೂ ಹಾಕಲಾಗಿದ್ದ ಬಿಜೆಪಿ ಬಾವುಟಗಳನ್ನು ಕಿತ್ತು, ಒಂದು ಕಡೆ ಗುಡ್ಡೆ ಹಾಕಿದ ಪ್ರತಿಭಟನಾ ನಿರತ ರೈತರು ಆಕ್ರೋಶದಲ್ಲಿ ಬೆಂಕಿ ಹಾಕಿದ್ದರು. ಪೊಲೀಸ್ ರಕ್ಷಣೆಯಲ್ಲಿ ಹೋಗಿ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದರು.

 


ಇದನ್ನೂ ಓದಿ: ಹರಿಯಾಣ: ಬಿಜೆಪಿ ಧ್ವಜಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...