Homeಮುಖಪುಟಹರಿಯಾಣ ಕೇಸ್: ಎಸ್‌ಯುವಿ ಕಾರ್‌ನಲ್ಲಿ ಸಿಕ್ಕ ಶವಗಳು ಮುಸ್ಲಿಂ ಯುವಕರದ್ದೇ- ಎಫ್‌ಎಸ್‌ಎಲ್ ವರದಿ ದೃಢ

ಹರಿಯಾಣ ಕೇಸ್: ಎಸ್‌ಯುವಿ ಕಾರ್‌ನಲ್ಲಿ ಸಿಕ್ಕ ಶವಗಳು ಮುಸ್ಲಿಂ ಯುವಕರದ್ದೇ- ಎಫ್‌ಎಸ್‌ಎಲ್ ವರದಿ ದೃಢ

- Advertisement -
- Advertisement -

ಹರಿಯಾಣದ ಜಿಂದ್‌ನಲ್ಲಿರುವ ಗೋಶಾಲೆಯಿಂದ ಪತ್ತೆಯಾದ ಸುಟ್ಟ ದೇಹಗಳು ಮತ್ತು ಎಸ್‌ಯುವಿ ಕಾರ್‌ನಲ್ಲಿ ಪತ್ತೆಯಾದ ರಕ್ತದ ಕಲೆಗಳು ಜುನೈದ್ ಮತ್ತು ನಾಸಿರ್‌ ಅವರದ್ದೇ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ದೃಢಪಡಿಸಿದೆ ಎಂದು ರಾಜಸ್ಥಾನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಹರಣಕ್ಕೊಳಗಾಗಿದ್ದ ರಾಜಸ್ಥಾನದ ಭರತ್‌ಪುರ ಮೂಲದ ವ್ಯಕ್ತಿಗಳ ಶವಗಳು ಫೆಬ್ರವರಿ 16ರಂದು ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ವಾಹನದೊಳಗೆ ಪತ್ತೆಯಾಗಿದ್ದವು. ಮೃತರ ಕುಟುಂಬಗಳು ಅವರನ್ನು ಬಜರಂಗದಳದ ಗೂಂಡಾಗಳು ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

“ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿಯು ಜಿಂದ್‌ನ (ಹರಿಯಾಣ) ಗೋಶಾಲಾದಿಂದ ವಶಪಡಿಸಿಕೊಂಡ ಎಸ್‌ಯುವಿಯಲ್ಲಿನ ಸುಟ್ಟ ದೇಹಗಳು ಮತ್ತು ರಕ್ತದ ಕಲೆಗಳು ನಾಸಿರ್ ಮತ್ತು ಜುನೈದ್ ಅವರದ್ದು ಎಂದು ದೃಢಪಡಿಸುತ್ತದೆ” ಎಂದು ಭರತ್‌ಪುರ ರೇಂಜ್ ಐಜಿ ಗೌರವ್ ಶ್ರೀವಾಸ್ತವ್ ಹೇಳಿದ್ದಾರೆ.

ಸುಟ್ಟ ವಾಹನವು ಚಾಸಿಸ್ ನಂಬರ್‌ಗೆ ಹೊಂದಿಕೆಯಾಗುತ್ತಿದೆ ಎಂದು ಅವರು ಹೇಳಿದರು, ಆದರೆ ಒಳಗಿರುವ ದೇಹಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಸ್ಥಳದಿಂದ ಎಫ್‌ಎಸ್‌ಎಲ್ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಾಸಿರ್ ಮತ್ತು ಜುನೈದ್ ಅವರ ಕುಟುಂಬದ ಸದಸ್ಯರ ರಕ್ತದ ಮಾದರಿಗಳನ್ನು ಸಹ ಸಂಗ್ರಹಿಸಲಾಗಿದ್ದು, ಎಸ್‌ಯುವಿಯಲ್ಲಿ ಕಂಡುಬಂದ ರಕ್ತದ ಕಲೆಗಳು ಮತ್ತು ಸುಟ್ಟ ವಾಹನದಲ್ಲಿ ಪತ್ತೆಯಾದ ಮೂಳೆಗಳು ಹೊಂದಾಣಿಕೆಯಾಗುತ್ತವೆ. ವರದಿಯು ಈಗ ಎರಡೂ ಶವಗಳ ಗುರುತನ್ನು ದೃಢಪಡಿಸಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಇಬ್ಬರು ಮುಸ್ಲಿಮರ ಹತ್ಯೆ ವಿವಾದ; ರಾಜಸ್ಥಾನ ಪೊಲೀಸರ ವಿರುದ್ಧ ಹರಿಯಾಣ ಪೊಲೀಸರಿಂದ ಪ್ರಕರಣ ದಾಖಲು

”ನಮ್ಮ ತಂಡಗಳು ಹರಿಯಾಣದಲ್ಲಿ ಕ್ಯಾಂಪ್ ಮಾಡುತ್ತಿವೆ ಮತ್ತು ಆರೋಪಿಗಳನ್ನು ಹಿಡಿಯಲು ಹರಿಯಾಣ ಪೊಲೀಸರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿವೆ” ಎಂದು ಭರತ್‌ಪುರ ರೇಂಜ್ ಐಜಿ ಗೌರವ್ ಶ್ರೀವಾಸ್ತವ್ ಹೇಳಿದರು.

ಘಟನೆ ಬಗ್ಗೆ ಮಾಹಿತಿ: 

ಹರಿಯಾಣದ ಗಡಿಯಲ್ಲಿರುವ ರಾಜಸ್ಥಾನದ ಘಟ್ಮೀಕಾ ಗ್ರಾಮದಲ್ಲಿ ಫೆ.16ರ ರಾತ್ರಿ ಭಾರೀ ಪೊಲೀಸರು ಜಮಾಯಿಸಿದ್ದರು. ಆದರೆ ರಾತ್ರಿಯ ವಿಲಕ್ಷಣ ಮೌನವು ಬೆಳಿಗ್ಗೆ ಇಲ್ಲವಾಗಿತ್ತು. ಘಟಮೀಕಾದ ಇಬ್ಬರು ಮುಸ್ಲಿಮರನ್ನು ಹತ್ಯೆಗೈದವರ ವಿರುದ್ಧ ಪ್ರತಿಭಟಿಸಲು ಸಮೀಪದ ಹಳ್ಳಿಗಳಿಂದ ಸುಮಾರು 2,000ಕ್ಕೂ ಜನರು ಧಾವಿಸಿದ್ದರು.

ರಾಜಸ್ಥಾನ-ಹರಿಯಾಣ ಗಡಿಗೆ ಸಮೀಪವಿರುವ ಹರಿಯಾಣದಲ್ಲಿ ನಾಸಿರ್ ಮತ್ತು ಜುನೈದ್ ಅವರನ್ನು ಹತ್ಯೆ ಮಾಡಿರುವ ಕುರಿತು ‘ದಿ ವೈರ್‌’ ವರದಿ ಮಾಡಿತ್ತು. ಈ ಅಪರಾಧಕ್ಕೆ ಸಂಬಂಧಿಸಿದ ಕಾರಣಗಳು ಮತ್ತು ಸ್ವಯಂಘೋಷಿತ ‘ಗೋ ರಕ್ಷಕರು’ ಎಂದು ಕರೆದುಕೊಂಡಿರುವ ಆರೋಪಿಗಳಿಂದಾಗಿ ಭೀತಿ ಉಂಟಾಗಿದೆ.

(ರಾಷ್ಟ್ರ ರಾಜಧಾನಿಯಿಂದ ಕೇವಲ 100 ಕಿಲೋಮೀಟರ್‌ಗಳಷ್ಟು ದೂರದಲ್ಲಿ ಘಟನೆ ಈ ನಡೆದಿದ್ದು, ಗೋರಕ್ಷಣೆ ಹೆಸರಲ್ಲಿ ದುಷ್ಕೃತ್ಯ ಜರುಗಿದೆ. ರಾಜಸ್ಥಾನ-ಹರಿಯಾಣ ಗಡಿಯಲ್ಲಿದ್ದ ಇಬ್ಬರು ಮುಸ್ಲಿಮರನ್ನು ದುಷ್ಕರ್ಮಿಗಳ ಗುಂಪು ಅಪಹರಿಸಿ, ಕಾರಿನೊಳಗೆ ಕೂಡಿಹಾಕಿ ಜೀವಂತವಾಗಿ ಕೊಂದಿರುವ ಆರೋಪ ಕೇಳಿಬಂದಿತ್ತು.)

ಘಟಮೀಕದಲ್ಲಿ ಸಣ್ಣ ರೈತರು ಮತ್ತು ಲಾರಿ ಚಾಲಕರು ಹೆಚ್ಚಾಗಿ ವಾಸಿಸುತ್ತಿದ್ದು, 2017ರಲ್ಲಿ ಉಮರ್ ಖಾನ್ ಹತ್ಯೆಯಾಗಿತ್ತು. ಆ ನಂತರದಲ್ಲಿ ಈ ಗ್ರಾಮದಲ್ಲಿ ಅಂತಹ ಉದ್ವಿಗ್ನ ವಾತಾವರಣ ಕಂಡುಬಂದಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...