Homeಮುಖಪುಟಹರಿಯಾಣ ಕೇಸ್: ಎಸ್‌ಯುವಿ ಕಾರ್‌ನಲ್ಲಿ ಸಿಕ್ಕ ಶವಗಳು ಮುಸ್ಲಿಂ ಯುವಕರದ್ದೇ- ಎಫ್‌ಎಸ್‌ಎಲ್ ವರದಿ ದೃಢ

ಹರಿಯಾಣ ಕೇಸ್: ಎಸ್‌ಯುವಿ ಕಾರ್‌ನಲ್ಲಿ ಸಿಕ್ಕ ಶವಗಳು ಮುಸ್ಲಿಂ ಯುವಕರದ್ದೇ- ಎಫ್‌ಎಸ್‌ಎಲ್ ವರದಿ ದೃಢ

- Advertisement -
- Advertisement -

ಹರಿಯಾಣದ ಜಿಂದ್‌ನಲ್ಲಿರುವ ಗೋಶಾಲೆಯಿಂದ ಪತ್ತೆಯಾದ ಸುಟ್ಟ ದೇಹಗಳು ಮತ್ತು ಎಸ್‌ಯುವಿ ಕಾರ್‌ನಲ್ಲಿ ಪತ್ತೆಯಾದ ರಕ್ತದ ಕಲೆಗಳು ಜುನೈದ್ ಮತ್ತು ನಾಸಿರ್‌ ಅವರದ್ದೇ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ದೃಢಪಡಿಸಿದೆ ಎಂದು ರಾಜಸ್ಥಾನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಹರಣಕ್ಕೊಳಗಾಗಿದ್ದ ರಾಜಸ್ಥಾನದ ಭರತ್‌ಪುರ ಮೂಲದ ವ್ಯಕ್ತಿಗಳ ಶವಗಳು ಫೆಬ್ರವರಿ 16ರಂದು ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ವಾಹನದೊಳಗೆ ಪತ್ತೆಯಾಗಿದ್ದವು. ಮೃತರ ಕುಟುಂಬಗಳು ಅವರನ್ನು ಬಜರಂಗದಳದ ಗೂಂಡಾಗಳು ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

“ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿಯು ಜಿಂದ್‌ನ (ಹರಿಯಾಣ) ಗೋಶಾಲಾದಿಂದ ವಶಪಡಿಸಿಕೊಂಡ ಎಸ್‌ಯುವಿಯಲ್ಲಿನ ಸುಟ್ಟ ದೇಹಗಳು ಮತ್ತು ರಕ್ತದ ಕಲೆಗಳು ನಾಸಿರ್ ಮತ್ತು ಜುನೈದ್ ಅವರದ್ದು ಎಂದು ದೃಢಪಡಿಸುತ್ತದೆ” ಎಂದು ಭರತ್‌ಪುರ ರೇಂಜ್ ಐಜಿ ಗೌರವ್ ಶ್ರೀವಾಸ್ತವ್ ಹೇಳಿದ್ದಾರೆ.

ಸುಟ್ಟ ವಾಹನವು ಚಾಸಿಸ್ ನಂಬರ್‌ಗೆ ಹೊಂದಿಕೆಯಾಗುತ್ತಿದೆ ಎಂದು ಅವರು ಹೇಳಿದರು, ಆದರೆ ಒಳಗಿರುವ ದೇಹಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಸ್ಥಳದಿಂದ ಎಫ್‌ಎಸ್‌ಎಲ್ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಾಸಿರ್ ಮತ್ತು ಜುನೈದ್ ಅವರ ಕುಟುಂಬದ ಸದಸ್ಯರ ರಕ್ತದ ಮಾದರಿಗಳನ್ನು ಸಹ ಸಂಗ್ರಹಿಸಲಾಗಿದ್ದು, ಎಸ್‌ಯುವಿಯಲ್ಲಿ ಕಂಡುಬಂದ ರಕ್ತದ ಕಲೆಗಳು ಮತ್ತು ಸುಟ್ಟ ವಾಹನದಲ್ಲಿ ಪತ್ತೆಯಾದ ಮೂಳೆಗಳು ಹೊಂದಾಣಿಕೆಯಾಗುತ್ತವೆ. ವರದಿಯು ಈಗ ಎರಡೂ ಶವಗಳ ಗುರುತನ್ನು ದೃಢಪಡಿಸಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಇಬ್ಬರು ಮುಸ್ಲಿಮರ ಹತ್ಯೆ ವಿವಾದ; ರಾಜಸ್ಥಾನ ಪೊಲೀಸರ ವಿರುದ್ಧ ಹರಿಯಾಣ ಪೊಲೀಸರಿಂದ ಪ್ರಕರಣ ದಾಖಲು

”ನಮ್ಮ ತಂಡಗಳು ಹರಿಯಾಣದಲ್ಲಿ ಕ್ಯಾಂಪ್ ಮಾಡುತ್ತಿವೆ ಮತ್ತು ಆರೋಪಿಗಳನ್ನು ಹಿಡಿಯಲು ಹರಿಯಾಣ ಪೊಲೀಸರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿವೆ” ಎಂದು ಭರತ್‌ಪುರ ರೇಂಜ್ ಐಜಿ ಗೌರವ್ ಶ್ರೀವಾಸ್ತವ್ ಹೇಳಿದರು.

ಘಟನೆ ಬಗ್ಗೆ ಮಾಹಿತಿ: 

ಹರಿಯಾಣದ ಗಡಿಯಲ್ಲಿರುವ ರಾಜಸ್ಥಾನದ ಘಟ್ಮೀಕಾ ಗ್ರಾಮದಲ್ಲಿ ಫೆ.16ರ ರಾತ್ರಿ ಭಾರೀ ಪೊಲೀಸರು ಜಮಾಯಿಸಿದ್ದರು. ಆದರೆ ರಾತ್ರಿಯ ವಿಲಕ್ಷಣ ಮೌನವು ಬೆಳಿಗ್ಗೆ ಇಲ್ಲವಾಗಿತ್ತು. ಘಟಮೀಕಾದ ಇಬ್ಬರು ಮುಸ್ಲಿಮರನ್ನು ಹತ್ಯೆಗೈದವರ ವಿರುದ್ಧ ಪ್ರತಿಭಟಿಸಲು ಸಮೀಪದ ಹಳ್ಳಿಗಳಿಂದ ಸುಮಾರು 2,000ಕ್ಕೂ ಜನರು ಧಾವಿಸಿದ್ದರು.

ರಾಜಸ್ಥಾನ-ಹರಿಯಾಣ ಗಡಿಗೆ ಸಮೀಪವಿರುವ ಹರಿಯಾಣದಲ್ಲಿ ನಾಸಿರ್ ಮತ್ತು ಜುನೈದ್ ಅವರನ್ನು ಹತ್ಯೆ ಮಾಡಿರುವ ಕುರಿತು ‘ದಿ ವೈರ್‌’ ವರದಿ ಮಾಡಿತ್ತು. ಈ ಅಪರಾಧಕ್ಕೆ ಸಂಬಂಧಿಸಿದ ಕಾರಣಗಳು ಮತ್ತು ಸ್ವಯಂಘೋಷಿತ ‘ಗೋ ರಕ್ಷಕರು’ ಎಂದು ಕರೆದುಕೊಂಡಿರುವ ಆರೋಪಿಗಳಿಂದಾಗಿ ಭೀತಿ ಉಂಟಾಗಿದೆ.

(ರಾಷ್ಟ್ರ ರಾಜಧಾನಿಯಿಂದ ಕೇವಲ 100 ಕಿಲೋಮೀಟರ್‌ಗಳಷ್ಟು ದೂರದಲ್ಲಿ ಘಟನೆ ಈ ನಡೆದಿದ್ದು, ಗೋರಕ್ಷಣೆ ಹೆಸರಲ್ಲಿ ದುಷ್ಕೃತ್ಯ ಜರುಗಿದೆ. ರಾಜಸ್ಥಾನ-ಹರಿಯಾಣ ಗಡಿಯಲ್ಲಿದ್ದ ಇಬ್ಬರು ಮುಸ್ಲಿಮರನ್ನು ದುಷ್ಕರ್ಮಿಗಳ ಗುಂಪು ಅಪಹರಿಸಿ, ಕಾರಿನೊಳಗೆ ಕೂಡಿಹಾಕಿ ಜೀವಂತವಾಗಿ ಕೊಂದಿರುವ ಆರೋಪ ಕೇಳಿಬಂದಿತ್ತು.)

ಘಟಮೀಕದಲ್ಲಿ ಸಣ್ಣ ರೈತರು ಮತ್ತು ಲಾರಿ ಚಾಲಕರು ಹೆಚ್ಚಾಗಿ ವಾಸಿಸುತ್ತಿದ್ದು, 2017ರಲ್ಲಿ ಉಮರ್ ಖಾನ್ ಹತ್ಯೆಯಾಗಿತ್ತು. ಆ ನಂತರದಲ್ಲಿ ಈ ಗ್ರಾಮದಲ್ಲಿ ಅಂತಹ ಉದ್ವಿಗ್ನ ವಾತಾವರಣ ಕಂಡುಬಂದಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...