Homeಮುಖಪುಟಹರಿಯಾಣ ಕೇಸ್: ಎಸ್‌ಯುವಿ ಕಾರ್‌ನಲ್ಲಿ ಸಿಕ್ಕ ಶವಗಳು ಮುಸ್ಲಿಂ ಯುವಕರದ್ದೇ- ಎಫ್‌ಎಸ್‌ಎಲ್ ವರದಿ ದೃಢ

ಹರಿಯಾಣ ಕೇಸ್: ಎಸ್‌ಯುವಿ ಕಾರ್‌ನಲ್ಲಿ ಸಿಕ್ಕ ಶವಗಳು ಮುಸ್ಲಿಂ ಯುವಕರದ್ದೇ- ಎಫ್‌ಎಸ್‌ಎಲ್ ವರದಿ ದೃಢ

- Advertisement -
- Advertisement -

ಹರಿಯಾಣದ ಜಿಂದ್‌ನಲ್ಲಿರುವ ಗೋಶಾಲೆಯಿಂದ ಪತ್ತೆಯಾದ ಸುಟ್ಟ ದೇಹಗಳು ಮತ್ತು ಎಸ್‌ಯುವಿ ಕಾರ್‌ನಲ್ಲಿ ಪತ್ತೆಯಾದ ರಕ್ತದ ಕಲೆಗಳು ಜುನೈದ್ ಮತ್ತು ನಾಸಿರ್‌ ಅವರದ್ದೇ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ದೃಢಪಡಿಸಿದೆ ಎಂದು ರಾಜಸ್ಥಾನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಹರಣಕ್ಕೊಳಗಾಗಿದ್ದ ರಾಜಸ್ಥಾನದ ಭರತ್‌ಪುರ ಮೂಲದ ವ್ಯಕ್ತಿಗಳ ಶವಗಳು ಫೆಬ್ರವರಿ 16ರಂದು ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ವಾಹನದೊಳಗೆ ಪತ್ತೆಯಾಗಿದ್ದವು. ಮೃತರ ಕುಟುಂಬಗಳು ಅವರನ್ನು ಬಜರಂಗದಳದ ಗೂಂಡಾಗಳು ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

“ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿಯು ಜಿಂದ್‌ನ (ಹರಿಯಾಣ) ಗೋಶಾಲಾದಿಂದ ವಶಪಡಿಸಿಕೊಂಡ ಎಸ್‌ಯುವಿಯಲ್ಲಿನ ಸುಟ್ಟ ದೇಹಗಳು ಮತ್ತು ರಕ್ತದ ಕಲೆಗಳು ನಾಸಿರ್ ಮತ್ತು ಜುನೈದ್ ಅವರದ್ದು ಎಂದು ದೃಢಪಡಿಸುತ್ತದೆ” ಎಂದು ಭರತ್‌ಪುರ ರೇಂಜ್ ಐಜಿ ಗೌರವ್ ಶ್ರೀವಾಸ್ತವ್ ಹೇಳಿದ್ದಾರೆ.

ಸುಟ್ಟ ವಾಹನವು ಚಾಸಿಸ್ ನಂಬರ್‌ಗೆ ಹೊಂದಿಕೆಯಾಗುತ್ತಿದೆ ಎಂದು ಅವರು ಹೇಳಿದರು, ಆದರೆ ಒಳಗಿರುವ ದೇಹಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಸ್ಥಳದಿಂದ ಎಫ್‌ಎಸ್‌ಎಲ್ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಾಸಿರ್ ಮತ್ತು ಜುನೈದ್ ಅವರ ಕುಟುಂಬದ ಸದಸ್ಯರ ರಕ್ತದ ಮಾದರಿಗಳನ್ನು ಸಹ ಸಂಗ್ರಹಿಸಲಾಗಿದ್ದು, ಎಸ್‌ಯುವಿಯಲ್ಲಿ ಕಂಡುಬಂದ ರಕ್ತದ ಕಲೆಗಳು ಮತ್ತು ಸುಟ್ಟ ವಾಹನದಲ್ಲಿ ಪತ್ತೆಯಾದ ಮೂಳೆಗಳು ಹೊಂದಾಣಿಕೆಯಾಗುತ್ತವೆ. ವರದಿಯು ಈಗ ಎರಡೂ ಶವಗಳ ಗುರುತನ್ನು ದೃಢಪಡಿಸಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಇಬ್ಬರು ಮುಸ್ಲಿಮರ ಹತ್ಯೆ ವಿವಾದ; ರಾಜಸ್ಥಾನ ಪೊಲೀಸರ ವಿರುದ್ಧ ಹರಿಯಾಣ ಪೊಲೀಸರಿಂದ ಪ್ರಕರಣ ದಾಖಲು

”ನಮ್ಮ ತಂಡಗಳು ಹರಿಯಾಣದಲ್ಲಿ ಕ್ಯಾಂಪ್ ಮಾಡುತ್ತಿವೆ ಮತ್ತು ಆರೋಪಿಗಳನ್ನು ಹಿಡಿಯಲು ಹರಿಯಾಣ ಪೊಲೀಸರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿವೆ” ಎಂದು ಭರತ್‌ಪುರ ರೇಂಜ್ ಐಜಿ ಗೌರವ್ ಶ್ರೀವಾಸ್ತವ್ ಹೇಳಿದರು.

ಘಟನೆ ಬಗ್ಗೆ ಮಾಹಿತಿ: 

ಹರಿಯಾಣದ ಗಡಿಯಲ್ಲಿರುವ ರಾಜಸ್ಥಾನದ ಘಟ್ಮೀಕಾ ಗ್ರಾಮದಲ್ಲಿ ಫೆ.16ರ ರಾತ್ರಿ ಭಾರೀ ಪೊಲೀಸರು ಜಮಾಯಿಸಿದ್ದರು. ಆದರೆ ರಾತ್ರಿಯ ವಿಲಕ್ಷಣ ಮೌನವು ಬೆಳಿಗ್ಗೆ ಇಲ್ಲವಾಗಿತ್ತು. ಘಟಮೀಕಾದ ಇಬ್ಬರು ಮುಸ್ಲಿಮರನ್ನು ಹತ್ಯೆಗೈದವರ ವಿರುದ್ಧ ಪ್ರತಿಭಟಿಸಲು ಸಮೀಪದ ಹಳ್ಳಿಗಳಿಂದ ಸುಮಾರು 2,000ಕ್ಕೂ ಜನರು ಧಾವಿಸಿದ್ದರು.

ರಾಜಸ್ಥಾನ-ಹರಿಯಾಣ ಗಡಿಗೆ ಸಮೀಪವಿರುವ ಹರಿಯಾಣದಲ್ಲಿ ನಾಸಿರ್ ಮತ್ತು ಜುನೈದ್ ಅವರನ್ನು ಹತ್ಯೆ ಮಾಡಿರುವ ಕುರಿತು ‘ದಿ ವೈರ್‌’ ವರದಿ ಮಾಡಿತ್ತು. ಈ ಅಪರಾಧಕ್ಕೆ ಸಂಬಂಧಿಸಿದ ಕಾರಣಗಳು ಮತ್ತು ಸ್ವಯಂಘೋಷಿತ ‘ಗೋ ರಕ್ಷಕರು’ ಎಂದು ಕರೆದುಕೊಂಡಿರುವ ಆರೋಪಿಗಳಿಂದಾಗಿ ಭೀತಿ ಉಂಟಾಗಿದೆ.

(ರಾಷ್ಟ್ರ ರಾಜಧಾನಿಯಿಂದ ಕೇವಲ 100 ಕಿಲೋಮೀಟರ್‌ಗಳಷ್ಟು ದೂರದಲ್ಲಿ ಘಟನೆ ಈ ನಡೆದಿದ್ದು, ಗೋರಕ್ಷಣೆ ಹೆಸರಲ್ಲಿ ದುಷ್ಕೃತ್ಯ ಜರುಗಿದೆ. ರಾಜಸ್ಥಾನ-ಹರಿಯಾಣ ಗಡಿಯಲ್ಲಿದ್ದ ಇಬ್ಬರು ಮುಸ್ಲಿಮರನ್ನು ದುಷ್ಕರ್ಮಿಗಳ ಗುಂಪು ಅಪಹರಿಸಿ, ಕಾರಿನೊಳಗೆ ಕೂಡಿಹಾಕಿ ಜೀವಂತವಾಗಿ ಕೊಂದಿರುವ ಆರೋಪ ಕೇಳಿಬಂದಿತ್ತು.)

ಘಟಮೀಕದಲ್ಲಿ ಸಣ್ಣ ರೈತರು ಮತ್ತು ಲಾರಿ ಚಾಲಕರು ಹೆಚ್ಚಾಗಿ ವಾಸಿಸುತ್ತಿದ್ದು, 2017ರಲ್ಲಿ ಉಮರ್ ಖಾನ್ ಹತ್ಯೆಯಾಗಿತ್ತು. ಆ ನಂತರದಲ್ಲಿ ಈ ಗ್ರಾಮದಲ್ಲಿ ಅಂತಹ ಉದ್ವಿಗ್ನ ವಾತಾವರಣ ಕಂಡುಬಂದಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...