Homeಮುಖಪುಟರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

ರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

ಹೊಸದಾಗಿ ಹುಟ್ಟಿಕೊಂಡಿರುವ ರೈತ ಸಂಘಟನೆಗಳನ್ನು ನಿಯಂತ್ರಿಸಬೇಕಿದೆ. ಮುಯ್ಯಿಗೆ ಮುಯ್ಯಿ ಎಂಬಂತೆ ಕೋಲು ಎತ್ತಿಕೊಳ್ಳಿ ಎಂದು ಹರಿಯಾಣ ಸಿಎಂ ಖಟ್ಟರ್‌, ಕಾರ್ಯಕರ್ತರನ್ನು ಪ್ರಚೋದಿಸಿದ್ದಾರೆ.

- Advertisement -
- Advertisement -

“ಹೊಸದಾಗಿ ಹುಟ್ಟಿಕೊಂಡಿರುವ ರೈತ ಸಂಘಟನೆಗಳನ್ನು ನಿಯಂತ್ರಿಸಬೇಕಿದೆ. ಪ್ರತಿ ಜಿಲ್ಲೆಯಲ್ಲಿ, ವಿಶೇಷವಾಗಿ ಉತ್ತರ ಹಾಗೂ ಪಶ್ಚಿಮ ಹರ್ಯಾಣದಲ್ಲಿ ಈ ಸಮಸ್ಯೆ ಇಲ್ಲ. ಇಲ್ಲೇ ನಮ್ಮವರನ್ನು ಸ್ವಯಂಸೇವರಕರನ್ನಾಗಿ ಮಾಡಿ. 500-1000ರ ಗುಂಪು ಮಾಡಿ. ಪ್ರತಿ ಜಾಗದಲ್ಲಿ ಮುಯ್ಯಿಗೆ ಮುಯ್ಯಿ ಎಂಬಂತೆ ಕೋಲು ಎತ್ತಿಕೊಳ್ಳಿ…”

-ಇದು ಹರಿಯಾಣದ ಮುಖ್ಯಮಂತ್ರಿ ಮನೋಹರ್‌‌ಲಾಲ್‌ ಖಟ್ಟರ್‌ ಅವರ ಪ್ರಚೋದನಾತ್ಮಕ ಹೇಳಿಕೆ. ರೈತ ಸಮುದಾಯದ ವಿರುದ್ಧ ಕಾರ್ಯಕರ್ತರನ್ನು ಖಟ್ಟರ್‌ ಪ್ರಚೋದಿಸಿರುವ ವಿಡಿಯೋ ಈಗ ವೈರಲ್‌ ಆಗಿದೆ.

ಇದನ್ನೂ ಓದಿರಿ: ಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ

“ಉಳಿದಿದ್ದನ್ನು ನಾವು ನೋಡಿಕೊಳ್ಳುತ್ತೇವೆ. ಕೋಲು ಎತ್ತಿಕೊಂಡರೆ ಸಮಯದ ಬಗ್ಗೆ ಚಿಂತೆ ಮಾಡಬೇಡಿ. ತಿಂಗಳೆರಡು ತಿಂಗಳಾದರೂ, ಇಲ್ಲಿ ಕಲಿಯುವುದಕ್ಕಿಂತ ಅಲ್ಲಿ ಕಲಿಯುತ್ತೀರಿ. ಲೀಡರ್‌ ಆಗಿಬಿಡಬಹುದು. ಇದು ಇತಿಹಾಸದಲ್ಲಿ ದಾಖಲಾಗಿ ಬಿಡುತ್ತದೆ” ಎಂದು ಹಿಂಸೆಗೆ ಪ್ರೇರೇಪಿಸಿದ್ದಾರೆ.

ಭಾನುವಾರ ನಡೆದ ಬಿಜೆಪಿಯ ಕಿಸಾನ್ ಮೋರ್ಚಾದ ಸಭೆಯಲ್ಲಿ ಮಾತನಾಡಿದ ಅವರು, ಜೈಲಿಗೆ ಹೋಗಲು ಸಿದ್ದವಿರುವವರು ಸಂಘಟಿತರಾಗುವಂತೆ ಕರೆ ನೀಡಿದ್ದಾರೆ. ರೈತ ಹೋರಾಟ ಆರಂಭವಾದಾಗಿನಿಂದ ರೈತರ ವಿರುದ್ಧ ಮಾತನಾಡುತ್ತಾ ಬಂದಿರುವ ಖಟ್ಟರ್‌ ಈ ವಿಡಿಯೋ ಹೋರಾಟ ನಿರಂತರ ರೈತರನ್ನು ಇನ್ನಷ್ಟು ಕೆರಳಿಸಿದೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಒಂದು ವರ್ಷದಿಂದ ಪಂಜಾಬ್‌ನಲ್ಲಿ ನಂತರದಲ್ಲಿ ಹರ್ಯಾಣದಲ್ಲಿ ರೈತರು ಹೋರಾಟ ಆರಂಭಿಸಿದರು. ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿರುವ ಹರ್ಯಾಣ ರೈತರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿದಾಗಲೆಲ್ಲಾ, ತೀವ್ರವಾದ ಪ್ರತಿಭಟನೆ ವ್ಯಕ್ತವಾಗಲಾರಂಭಿಸಿತು.

ಕಳೆದ ತಿಂಗಳು ಬಸ್ತಾರಾ ಟಾಲ್‌ಪ್ಲಾಜ ಬಳಿ ಎಸ್‌ಡಿಎಂ ರೈತರ ತಲೆ ಒಡೆಯುವಂತೆ ಕರೆ ನೀಡಿದ್ದರು, ಆಗಲೂ ಹಿಂಸಾಚಾರ ನಡೆದಿತ್ತು. ಇದನ್ನು ಮುಖ್ಯಮಂತ್ರಿ ಸಮರ್ಥಿಸಿಕೊಂಡಿದ್ದರೂ ಕೂಡ. ಅಧಿಕಾರವನ್ನು ಪ್ರಶ್ನಿಸುತ್ತಿರುವ ರೈತರ ಮೇಲೆ ಪ್ರತಿಕಾರದ ನಡೆಯನ್ನು ಅನುಸರಿಸುತ್ತಿರುವ ಖಟ್ಟರ್‌ ಅವರ ನಿಲುವನ್ನು ರೈತ ಸಂಘಟನೆಗಳು ತೀವ್ರವಾಗಿ ವಿರೋಧಿಸಿ, ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಲಾಖಿಮ್‌ಪುರ್‌ ಖೇರಿ ಹಿಂಸಾಚಾರವನ್ನು ಪ್ರತಿಭಟಿಸಿ, ಹಾಗೂ ಖಟ್ಟರ್‌ ಹೇಳಿಕೆಯನ್ನು ಖಂಡಿಸಿ ಅಕ್ಟೋಬರ್‌ 4ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಅಲ್ಲದೇ ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಹಾಗೂ ಆತನ ಗೂಂಡಾಪಡೆ ರೈತರ ಮೇಲೆ ವಾಹನಗಳನ್ನು ಹತ್ತಿಸಿ, ನಾಲ್ವರು ರೈತರನ್ನು ಕೊಂದಿದ್ದಾರೆ. ಸಾಂವಿಧಾನಿಕವಾಗಿ ಹೋರಾಡುತ್ತಿರುವವರ ಮೇಲೆ ಬಿಜೆಪಿಯವರು ಪ್ರಯೋಗಿಸುತ್ತಿರುವ  ಕ್ರೌರ್ಯದ ಅಸ್ತ್ರ ಆತಂಕಕ್ಕೆ ಕಾರಣವಾಗಿದೆ.

ಛತ್ತೀಸ್‌ಘಡ ಮುಖ್ಯಮಂತ್ರಿ ಪ್ರತಿಕ್ರಿಯೆ

ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್‌ ಖಟ್ಟರ್‌ ಹೇಳಿಕೆ ಹಾಗೂ ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಆಗಿರುವ ದಾಳಿಯನ್ನು ಛತ್ತೀಸ್‌ಘಡದ ಮುಖ್ಯಮಂತ್ರಿ ಭೂಪೇಶ್‌ ಭಾಗೇಲ್‌ ಅವರು ಕಟುವಾಗಿ ಟೀಕಿಸಿದ್ದಾರೆ.

“ಲಖಿಂಪುರ್‌‌ ಖೇರಿಗೆ ಭೇಟಿ ನೀಡಲು ಹಾಗೂ ಸಂತ್ರಸ್ತ ರೈತ ಕುಟುಂಬವನ್ನು ಭೇಟಿ ಮಾಡಲು ಯಾಕೆ ಅವಕಾಶ ನೀಡುತ್ತಿಲ್ಲ. ನಿನ್ನೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ. ಸೀತಾಪುರಕ್ಕೆ ಅವರು ತೆರಳದಂತೆ, ಯಾವುದೇ ವಾರಂಟ್‌ ಇಲ್ಲದೆಯೂ ತಡೆದಿದ್ದಾರೆ” ಎಂದು ರಾಯಪುರದಲ್ಲಿ ಹೇಳಿಕೆ ನೀಡಿದ್ದಾರೆ.

“ತನ್ನ ವಿರುದ್ಧದ ಯಾವುದೇ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿ ಬಯಸುತ್ತಿದೆ. ಖಟ್ಟರ್‌ ಹೇಳಿಕೆ ಅವರ ಮನಸ್ಥಿತಿಯನ್ನು ಬಿಂಬಿಸುತ್ತಿದ್ದು, ಅವರು ಎಲ್ಲ ವಿರೋಧಗಳನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ. ಇದು ಸರ್ವಾಧಿಕಾರವಾಗಿದೆ. ಇದನ್ನು ನಾವು ಸಹಿಸುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...