Homeಮುಖಪುಟರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

ರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

ಹೊಸದಾಗಿ ಹುಟ್ಟಿಕೊಂಡಿರುವ ರೈತ ಸಂಘಟನೆಗಳನ್ನು ನಿಯಂತ್ರಿಸಬೇಕಿದೆ. ಮುಯ್ಯಿಗೆ ಮುಯ್ಯಿ ಎಂಬಂತೆ ಕೋಲು ಎತ್ತಿಕೊಳ್ಳಿ ಎಂದು ಹರಿಯಾಣ ಸಿಎಂ ಖಟ್ಟರ್‌, ಕಾರ್ಯಕರ್ತರನ್ನು ಪ್ರಚೋದಿಸಿದ್ದಾರೆ.

- Advertisement -
- Advertisement -

“ಹೊಸದಾಗಿ ಹುಟ್ಟಿಕೊಂಡಿರುವ ರೈತ ಸಂಘಟನೆಗಳನ್ನು ನಿಯಂತ್ರಿಸಬೇಕಿದೆ. ಪ್ರತಿ ಜಿಲ್ಲೆಯಲ್ಲಿ, ವಿಶೇಷವಾಗಿ ಉತ್ತರ ಹಾಗೂ ಪಶ್ಚಿಮ ಹರ್ಯಾಣದಲ್ಲಿ ಈ ಸಮಸ್ಯೆ ಇಲ್ಲ. ಇಲ್ಲೇ ನಮ್ಮವರನ್ನು ಸ್ವಯಂಸೇವರಕರನ್ನಾಗಿ ಮಾಡಿ. 500-1000ರ ಗುಂಪು ಮಾಡಿ. ಪ್ರತಿ ಜಾಗದಲ್ಲಿ ಮುಯ್ಯಿಗೆ ಮುಯ್ಯಿ ಎಂಬಂತೆ ಕೋಲು ಎತ್ತಿಕೊಳ್ಳಿ…”

-ಇದು ಹರಿಯಾಣದ ಮುಖ್ಯಮಂತ್ರಿ ಮನೋಹರ್‌‌ಲಾಲ್‌ ಖಟ್ಟರ್‌ ಅವರ ಪ್ರಚೋದನಾತ್ಮಕ ಹೇಳಿಕೆ. ರೈತ ಸಮುದಾಯದ ವಿರುದ್ಧ ಕಾರ್ಯಕರ್ತರನ್ನು ಖಟ್ಟರ್‌ ಪ್ರಚೋದಿಸಿರುವ ವಿಡಿಯೋ ಈಗ ವೈರಲ್‌ ಆಗಿದೆ.

ಇದನ್ನೂ ಓದಿರಿ: ಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ

“ಉಳಿದಿದ್ದನ್ನು ನಾವು ನೋಡಿಕೊಳ್ಳುತ್ತೇವೆ. ಕೋಲು ಎತ್ತಿಕೊಂಡರೆ ಸಮಯದ ಬಗ್ಗೆ ಚಿಂತೆ ಮಾಡಬೇಡಿ. ತಿಂಗಳೆರಡು ತಿಂಗಳಾದರೂ, ಇಲ್ಲಿ ಕಲಿಯುವುದಕ್ಕಿಂತ ಅಲ್ಲಿ ಕಲಿಯುತ್ತೀರಿ. ಲೀಡರ್‌ ಆಗಿಬಿಡಬಹುದು. ಇದು ಇತಿಹಾಸದಲ್ಲಿ ದಾಖಲಾಗಿ ಬಿಡುತ್ತದೆ” ಎಂದು ಹಿಂಸೆಗೆ ಪ್ರೇರೇಪಿಸಿದ್ದಾರೆ.

ಭಾನುವಾರ ನಡೆದ ಬಿಜೆಪಿಯ ಕಿಸಾನ್ ಮೋರ್ಚಾದ ಸಭೆಯಲ್ಲಿ ಮಾತನಾಡಿದ ಅವರು, ಜೈಲಿಗೆ ಹೋಗಲು ಸಿದ್ದವಿರುವವರು ಸಂಘಟಿತರಾಗುವಂತೆ ಕರೆ ನೀಡಿದ್ದಾರೆ. ರೈತ ಹೋರಾಟ ಆರಂಭವಾದಾಗಿನಿಂದ ರೈತರ ವಿರುದ್ಧ ಮಾತನಾಡುತ್ತಾ ಬಂದಿರುವ ಖಟ್ಟರ್‌ ಈ ವಿಡಿಯೋ ಹೋರಾಟ ನಿರಂತರ ರೈತರನ್ನು ಇನ್ನಷ್ಟು ಕೆರಳಿಸಿದೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಒಂದು ವರ್ಷದಿಂದ ಪಂಜಾಬ್‌ನಲ್ಲಿ ನಂತರದಲ್ಲಿ ಹರ್ಯಾಣದಲ್ಲಿ ರೈತರು ಹೋರಾಟ ಆರಂಭಿಸಿದರು. ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿರುವ ಹರ್ಯಾಣ ರೈತರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿದಾಗಲೆಲ್ಲಾ, ತೀವ್ರವಾದ ಪ್ರತಿಭಟನೆ ವ್ಯಕ್ತವಾಗಲಾರಂಭಿಸಿತು.

ಕಳೆದ ತಿಂಗಳು ಬಸ್ತಾರಾ ಟಾಲ್‌ಪ್ಲಾಜ ಬಳಿ ಎಸ್‌ಡಿಎಂ ರೈತರ ತಲೆ ಒಡೆಯುವಂತೆ ಕರೆ ನೀಡಿದ್ದರು, ಆಗಲೂ ಹಿಂಸಾಚಾರ ನಡೆದಿತ್ತು. ಇದನ್ನು ಮುಖ್ಯಮಂತ್ರಿ ಸಮರ್ಥಿಸಿಕೊಂಡಿದ್ದರೂ ಕೂಡ. ಅಧಿಕಾರವನ್ನು ಪ್ರಶ್ನಿಸುತ್ತಿರುವ ರೈತರ ಮೇಲೆ ಪ್ರತಿಕಾರದ ನಡೆಯನ್ನು ಅನುಸರಿಸುತ್ತಿರುವ ಖಟ್ಟರ್‌ ಅವರ ನಿಲುವನ್ನು ರೈತ ಸಂಘಟನೆಗಳು ತೀವ್ರವಾಗಿ ವಿರೋಧಿಸಿ, ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಲಾಖಿಮ್‌ಪುರ್‌ ಖೇರಿ ಹಿಂಸಾಚಾರವನ್ನು ಪ್ರತಿಭಟಿಸಿ, ಹಾಗೂ ಖಟ್ಟರ್‌ ಹೇಳಿಕೆಯನ್ನು ಖಂಡಿಸಿ ಅಕ್ಟೋಬರ್‌ 4ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಅಲ್ಲದೇ ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಹಾಗೂ ಆತನ ಗೂಂಡಾಪಡೆ ರೈತರ ಮೇಲೆ ವಾಹನಗಳನ್ನು ಹತ್ತಿಸಿ, ನಾಲ್ವರು ರೈತರನ್ನು ಕೊಂದಿದ್ದಾರೆ. ಸಾಂವಿಧಾನಿಕವಾಗಿ ಹೋರಾಡುತ್ತಿರುವವರ ಮೇಲೆ ಬಿಜೆಪಿಯವರು ಪ್ರಯೋಗಿಸುತ್ತಿರುವ  ಕ್ರೌರ್ಯದ ಅಸ್ತ್ರ ಆತಂಕಕ್ಕೆ ಕಾರಣವಾಗಿದೆ.

ಛತ್ತೀಸ್‌ಘಡ ಮುಖ್ಯಮಂತ್ರಿ ಪ್ರತಿಕ್ರಿಯೆ

ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್‌ ಖಟ್ಟರ್‌ ಹೇಳಿಕೆ ಹಾಗೂ ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಆಗಿರುವ ದಾಳಿಯನ್ನು ಛತ್ತೀಸ್‌ಘಡದ ಮುಖ್ಯಮಂತ್ರಿ ಭೂಪೇಶ್‌ ಭಾಗೇಲ್‌ ಅವರು ಕಟುವಾಗಿ ಟೀಕಿಸಿದ್ದಾರೆ.

“ಲಖಿಂಪುರ್‌‌ ಖೇರಿಗೆ ಭೇಟಿ ನೀಡಲು ಹಾಗೂ ಸಂತ್ರಸ್ತ ರೈತ ಕುಟುಂಬವನ್ನು ಭೇಟಿ ಮಾಡಲು ಯಾಕೆ ಅವಕಾಶ ನೀಡುತ್ತಿಲ್ಲ. ನಿನ್ನೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ. ಸೀತಾಪುರಕ್ಕೆ ಅವರು ತೆರಳದಂತೆ, ಯಾವುದೇ ವಾರಂಟ್‌ ಇಲ್ಲದೆಯೂ ತಡೆದಿದ್ದಾರೆ” ಎಂದು ರಾಯಪುರದಲ್ಲಿ ಹೇಳಿಕೆ ನೀಡಿದ್ದಾರೆ.

“ತನ್ನ ವಿರುದ್ಧದ ಯಾವುದೇ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿ ಬಯಸುತ್ತಿದೆ. ಖಟ್ಟರ್‌ ಹೇಳಿಕೆ ಅವರ ಮನಸ್ಥಿತಿಯನ್ನು ಬಿಂಬಿಸುತ್ತಿದ್ದು, ಅವರು ಎಲ್ಲ ವಿರೋಧಗಳನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ. ಇದು ಸರ್ವಾಧಿಕಾರವಾಗಿದೆ. ಇದನ್ನು ನಾವು ಸಹಿಸುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...