Homeಮುಖಪುಟರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

ರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

ಹೊಸದಾಗಿ ಹುಟ್ಟಿಕೊಂಡಿರುವ ರೈತ ಸಂಘಟನೆಗಳನ್ನು ನಿಯಂತ್ರಿಸಬೇಕಿದೆ. ಮುಯ್ಯಿಗೆ ಮುಯ್ಯಿ ಎಂಬಂತೆ ಕೋಲು ಎತ್ತಿಕೊಳ್ಳಿ ಎಂದು ಹರಿಯಾಣ ಸಿಎಂ ಖಟ್ಟರ್‌, ಕಾರ್ಯಕರ್ತರನ್ನು ಪ್ರಚೋದಿಸಿದ್ದಾರೆ.

- Advertisement -
- Advertisement -

“ಹೊಸದಾಗಿ ಹುಟ್ಟಿಕೊಂಡಿರುವ ರೈತ ಸಂಘಟನೆಗಳನ್ನು ನಿಯಂತ್ರಿಸಬೇಕಿದೆ. ಪ್ರತಿ ಜಿಲ್ಲೆಯಲ್ಲಿ, ವಿಶೇಷವಾಗಿ ಉತ್ತರ ಹಾಗೂ ಪಶ್ಚಿಮ ಹರ್ಯಾಣದಲ್ಲಿ ಈ ಸಮಸ್ಯೆ ಇಲ್ಲ. ಇಲ್ಲೇ ನಮ್ಮವರನ್ನು ಸ್ವಯಂಸೇವರಕರನ್ನಾಗಿ ಮಾಡಿ. 500-1000ರ ಗುಂಪು ಮಾಡಿ. ಪ್ರತಿ ಜಾಗದಲ್ಲಿ ಮುಯ್ಯಿಗೆ ಮುಯ್ಯಿ ಎಂಬಂತೆ ಕೋಲು ಎತ್ತಿಕೊಳ್ಳಿ…”

-ಇದು ಹರಿಯಾಣದ ಮುಖ್ಯಮಂತ್ರಿ ಮನೋಹರ್‌‌ಲಾಲ್‌ ಖಟ್ಟರ್‌ ಅವರ ಪ್ರಚೋದನಾತ್ಮಕ ಹೇಳಿಕೆ. ರೈತ ಸಮುದಾಯದ ವಿರುದ್ಧ ಕಾರ್ಯಕರ್ತರನ್ನು ಖಟ್ಟರ್‌ ಪ್ರಚೋದಿಸಿರುವ ವಿಡಿಯೋ ಈಗ ವೈರಲ್‌ ಆಗಿದೆ.

ಇದನ್ನೂ ಓದಿರಿ: ಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ

“ಉಳಿದಿದ್ದನ್ನು ನಾವು ನೋಡಿಕೊಳ್ಳುತ್ತೇವೆ. ಕೋಲು ಎತ್ತಿಕೊಂಡರೆ ಸಮಯದ ಬಗ್ಗೆ ಚಿಂತೆ ಮಾಡಬೇಡಿ. ತಿಂಗಳೆರಡು ತಿಂಗಳಾದರೂ, ಇಲ್ಲಿ ಕಲಿಯುವುದಕ್ಕಿಂತ ಅಲ್ಲಿ ಕಲಿಯುತ್ತೀರಿ. ಲೀಡರ್‌ ಆಗಿಬಿಡಬಹುದು. ಇದು ಇತಿಹಾಸದಲ್ಲಿ ದಾಖಲಾಗಿ ಬಿಡುತ್ತದೆ” ಎಂದು ಹಿಂಸೆಗೆ ಪ್ರೇರೇಪಿಸಿದ್ದಾರೆ.

ಭಾನುವಾರ ನಡೆದ ಬಿಜೆಪಿಯ ಕಿಸಾನ್ ಮೋರ್ಚಾದ ಸಭೆಯಲ್ಲಿ ಮಾತನಾಡಿದ ಅವರು, ಜೈಲಿಗೆ ಹೋಗಲು ಸಿದ್ದವಿರುವವರು ಸಂಘಟಿತರಾಗುವಂತೆ ಕರೆ ನೀಡಿದ್ದಾರೆ. ರೈತ ಹೋರಾಟ ಆರಂಭವಾದಾಗಿನಿಂದ ರೈತರ ವಿರುದ್ಧ ಮಾತನಾಡುತ್ತಾ ಬಂದಿರುವ ಖಟ್ಟರ್‌ ಈ ವಿಡಿಯೋ ಹೋರಾಟ ನಿರಂತರ ರೈತರನ್ನು ಇನ್ನಷ್ಟು ಕೆರಳಿಸಿದೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಒಂದು ವರ್ಷದಿಂದ ಪಂಜಾಬ್‌ನಲ್ಲಿ ನಂತರದಲ್ಲಿ ಹರ್ಯಾಣದಲ್ಲಿ ರೈತರು ಹೋರಾಟ ಆರಂಭಿಸಿದರು. ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿರುವ ಹರ್ಯಾಣ ರೈತರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿದಾಗಲೆಲ್ಲಾ, ತೀವ್ರವಾದ ಪ್ರತಿಭಟನೆ ವ್ಯಕ್ತವಾಗಲಾರಂಭಿಸಿತು.

ಕಳೆದ ತಿಂಗಳು ಬಸ್ತಾರಾ ಟಾಲ್‌ಪ್ಲಾಜ ಬಳಿ ಎಸ್‌ಡಿಎಂ ರೈತರ ತಲೆ ಒಡೆಯುವಂತೆ ಕರೆ ನೀಡಿದ್ದರು, ಆಗಲೂ ಹಿಂಸಾಚಾರ ನಡೆದಿತ್ತು. ಇದನ್ನು ಮುಖ್ಯಮಂತ್ರಿ ಸಮರ್ಥಿಸಿಕೊಂಡಿದ್ದರೂ ಕೂಡ. ಅಧಿಕಾರವನ್ನು ಪ್ರಶ್ನಿಸುತ್ತಿರುವ ರೈತರ ಮೇಲೆ ಪ್ರತಿಕಾರದ ನಡೆಯನ್ನು ಅನುಸರಿಸುತ್ತಿರುವ ಖಟ್ಟರ್‌ ಅವರ ನಿಲುವನ್ನು ರೈತ ಸಂಘಟನೆಗಳು ತೀವ್ರವಾಗಿ ವಿರೋಧಿಸಿ, ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಲಾಖಿಮ್‌ಪುರ್‌ ಖೇರಿ ಹಿಂಸಾಚಾರವನ್ನು ಪ್ರತಿಭಟಿಸಿ, ಹಾಗೂ ಖಟ್ಟರ್‌ ಹೇಳಿಕೆಯನ್ನು ಖಂಡಿಸಿ ಅಕ್ಟೋಬರ್‌ 4ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಅಲ್ಲದೇ ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಹಾಗೂ ಆತನ ಗೂಂಡಾಪಡೆ ರೈತರ ಮೇಲೆ ವಾಹನಗಳನ್ನು ಹತ್ತಿಸಿ, ನಾಲ್ವರು ರೈತರನ್ನು ಕೊಂದಿದ್ದಾರೆ. ಸಾಂವಿಧಾನಿಕವಾಗಿ ಹೋರಾಡುತ್ತಿರುವವರ ಮೇಲೆ ಬಿಜೆಪಿಯವರು ಪ್ರಯೋಗಿಸುತ್ತಿರುವ  ಕ್ರೌರ್ಯದ ಅಸ್ತ್ರ ಆತಂಕಕ್ಕೆ ಕಾರಣವಾಗಿದೆ.

ಛತ್ತೀಸ್‌ಘಡ ಮುಖ್ಯಮಂತ್ರಿ ಪ್ರತಿಕ್ರಿಯೆ

ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್‌ ಖಟ್ಟರ್‌ ಹೇಳಿಕೆ ಹಾಗೂ ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಆಗಿರುವ ದಾಳಿಯನ್ನು ಛತ್ತೀಸ್‌ಘಡದ ಮುಖ್ಯಮಂತ್ರಿ ಭೂಪೇಶ್‌ ಭಾಗೇಲ್‌ ಅವರು ಕಟುವಾಗಿ ಟೀಕಿಸಿದ್ದಾರೆ.

“ಲಖಿಂಪುರ್‌‌ ಖೇರಿಗೆ ಭೇಟಿ ನೀಡಲು ಹಾಗೂ ಸಂತ್ರಸ್ತ ರೈತ ಕುಟುಂಬವನ್ನು ಭೇಟಿ ಮಾಡಲು ಯಾಕೆ ಅವಕಾಶ ನೀಡುತ್ತಿಲ್ಲ. ನಿನ್ನೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ. ಸೀತಾಪುರಕ್ಕೆ ಅವರು ತೆರಳದಂತೆ, ಯಾವುದೇ ವಾರಂಟ್‌ ಇಲ್ಲದೆಯೂ ತಡೆದಿದ್ದಾರೆ” ಎಂದು ರಾಯಪುರದಲ್ಲಿ ಹೇಳಿಕೆ ನೀಡಿದ್ದಾರೆ.

“ತನ್ನ ವಿರುದ್ಧದ ಯಾವುದೇ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿ ಬಯಸುತ್ತಿದೆ. ಖಟ್ಟರ್‌ ಹೇಳಿಕೆ ಅವರ ಮನಸ್ಥಿತಿಯನ್ನು ಬಿಂಬಿಸುತ್ತಿದ್ದು, ಅವರು ಎಲ್ಲ ವಿರೋಧಗಳನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ. ಇದು ಸರ್ವಾಧಿಕಾರವಾಗಿದೆ. ಇದನ್ನು ನಾವು ಸಹಿಸುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...